Homeಮುಖಪುಟಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

ಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

- Advertisement -
- Advertisement -

2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಗುಜರಾತ್‌ನ ಗಾಂಧಿನಗರ ಸೆಷನ್ಸ್ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

10 ವರ್ಷಗಳ ಹಿಂದೆ ಸೂರತ್ ಮೂಲದ ಮಹಿಳೆಯೊಬ್ಬರು ಅಹಮದಾಬಾದ್‌ನ ಮೊಟೆರಾದಲ್ಲಿರುವ ಅವರ ಆಶ್ರಮದಲ್ಲಿದ್ದಾಗ ತನ್ನ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದರು. ಅಸಾರಾಂ ಬಾಪು ಅಪರಾಧಿ ಎಂದು ತೀರ್ಪು ನೀಡಿ ಜೈಲು ಪಾಲಾದ ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣ ಇದಾಗಿದೆ.

2018 ರಲ್ಲಿ ಪ್ರತ್ಯೇಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರಾಜಸ್ಥಾನ ನ್ಯಾಯಾಲಯವು ಸ್ವಯಂ-ಘೋಷಿತ ದೇವಮಾನವನನ್ನು ತಪ್ಪಿತಸ್ಥನೆಂದು ಘೋಷಿಸಿದ ಈಗಾಗಲೇ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿದೆ. 2013ರಲ್ಲಿ, ರಾಜಸ್ಥಾನದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಅಸಾರಾಮ್ ಬಾಪುವನ್ನು ಬಂಧಿಸಿದ ನಂತರ, ಇಬ್ಬರು ಸೂರತ್ ಮೂಲದ ಮಹಿಳೆಯರು ಸ್ವಯಂ ಘೋಷಿತ ದೇವಮಾನವ ಮತ್ತು ಅವರ ಮಗ ನಾರಾಯಣ ಸಾಯಿ ವಿರುದ್ಧ ಲೈಂಗಿಕ ಶೋಷಣೆಯ ಆರೋಪ ಮಾಡಿದರು.

ಇದನ್ನೂ ಓದಿ:  ಸ್ವಯಂಘೋಷಿತ ದೇವಮಾನವ ಅಸಾರಾಂ ವಿರುದ್ಧ ಮತ್ತೊಂದು ರೇಪ್ ಕೇಸ್; ಇಂದು ತೀರ್ಪು ಸಾಧ್ಯತೆ

1997 ಮತ್ತು 2006ರ ನಡುವೆ ಅಸಾರಾಂನ ಅಹಮದಾಬಾದ್ ಆಶ್ರಮದಲ್ಲಿ ವಾಸಿಸುತ್ತಿದ್ದಾಗ ತನ್ನ ಅಕ್ಕನ ಮೇಲೆ ಅಸಾರಾಂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಂಗಿ ಆರೋಪಿಸಿದ್ದಳು.

2002 ಮತ್ತು 2005 ರ ನಡುವೆ ಸೂರತ್‌ನ ಜಹಾಂಗೀರ್‌ಪುರ ಪ್ರದೇಶದಲ್ಲಿ ಅಸಾರಾಂ ಅವರ ಆಶ್ರಮದಲ್ಲಿ ವಾಸಿಸುತ್ತಿದ್ದಾಗ ಅಸಾರಾಂ ಪುತ್ರ ನಾರಾಯಣ ಸಾಯಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಮಗಿಯು ಆರೋಪಿಸಿದರು.

2019ರಲ್ಲಿ ತಂಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನಾರಾಯಣ ಸಾಯಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಏನಿದು ಪ್ರಕರಣ?
ಅಸಾರಾಂ ವಿರುದ್ಧ ಕೇಸು ದಾಖಲಿಸಿದ ಮಹಿಳೆಯು, ಹಲವು ವರ್ಷಗಳಿಂದ ವಿವಿಧ ಆಶ್ರಮಗಳಲ್ಲಿ ಸ್ವಯಂಘೋಷಿತ ದೇವಮಾನವನಿಂದ ತನ್ನ ಮೇಲೆ ಅತ್ಯಾಚಾರ ನಡೆದಿದೆ. ಅಲ್ಲಿ ನನ್ನನ್ನು ಬಂಧಿಯಾಗಿದ್ದರು ಎಂದು ಆರೋಪಿಸಿದ್ದರು. ಈ ಬಗ್ಗೆ 2013ರಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆಯಲ್ಲಿಒಟ್ಟು 68 ಜನರ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ಪ್ರಕರಣದ ತನಿಖಾಧಿಕಾರಿ ದಿವ್ಯಾ ರವಿಯಾ ಅವರಿಗೂ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರ ಮೇಲೆ ಆರೋಪ ಕೇಳಿಬಂದಿತ್ತು. ಸೋಮವಾರ ಗಾಂಧಿನಗರ ನ್ಯಾಯಾಲಯವು ಅತ್ಯಾಚಾರದ ಆರೋಪದಲ್ಲಿ ಅಸಾರಾಂನನ್ನು ದೋಷಿ ಎಂದು ಘೋಷಿಸಿತು ಮತ್ತು ಪ್ರಕರಣದ ಇತರ ಆರೋಪಿಗಳನ್ನು ಖುಲಾಸೆಗೊಳಿಸಿತು.

ಅಸಾರಾಂ ಅವರ ಪತ್ನಿ ಲಕ್ಷ್ಮಿ, ಮಗಳು ಭಾರತಿ ಮತ್ತು ನಾಲ್ವರು ಮಹಿಳಾ ಅನುಯಾಯಿಗಳಾದ ಧ್ರುವಬೆನ್, ನಿರ್ಮಲಾ, ಜಸ್ಸಿ ಮತ್ತು ಮೀರಾ ಕೂಡ ಆರೋಪಿಗಳಾಗಿದ್ದರು ಆದರೆ ಗಾಂಧಿನಗರ ನ್ಯಾಯಾಲಯವು  ಖುಲಾಸೆಗೊಳಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...