Homeಮುಖಪುಟಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

ಎರಡನೇ ರೇಪ್ ಕೇಸ್‌ನಲ್ಲೂ ಅಸಾರಾಂಗೆ ಜೀವಾವಧಿ ಶಿಕ್ಷೆ ಘೋಷಣೆ

- Advertisement -
- Advertisement -

2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಗುಜರಾತ್‌ನ ಗಾಂಧಿನಗರ ಸೆಷನ್ಸ್ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

10 ವರ್ಷಗಳ ಹಿಂದೆ ಸೂರತ್ ಮೂಲದ ಮಹಿಳೆಯೊಬ್ಬರು ಅಹಮದಾಬಾದ್‌ನ ಮೊಟೆರಾದಲ್ಲಿರುವ ಅವರ ಆಶ್ರಮದಲ್ಲಿದ್ದಾಗ ತನ್ನ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದರು. ಅಸಾರಾಂ ಬಾಪು ಅಪರಾಧಿ ಎಂದು ತೀರ್ಪು ನೀಡಿ ಜೈಲು ಪಾಲಾದ ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣ ಇದಾಗಿದೆ.

2018 ರಲ್ಲಿ ಪ್ರತ್ಯೇಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರಾಜಸ್ಥಾನ ನ್ಯಾಯಾಲಯವು ಸ್ವಯಂ-ಘೋಷಿತ ದೇವಮಾನವನನ್ನು ತಪ್ಪಿತಸ್ಥನೆಂದು ಘೋಷಿಸಿದ ಈಗಾಗಲೇ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿದೆ. 2013ರಲ್ಲಿ, ರಾಜಸ್ಥಾನದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಅಸಾರಾಮ್ ಬಾಪುವನ್ನು ಬಂಧಿಸಿದ ನಂತರ, ಇಬ್ಬರು ಸೂರತ್ ಮೂಲದ ಮಹಿಳೆಯರು ಸ್ವಯಂ ಘೋಷಿತ ದೇವಮಾನವ ಮತ್ತು ಅವರ ಮಗ ನಾರಾಯಣ ಸಾಯಿ ವಿರುದ್ಧ ಲೈಂಗಿಕ ಶೋಷಣೆಯ ಆರೋಪ ಮಾಡಿದರು.

ಇದನ್ನೂ ಓದಿ:  ಸ್ವಯಂಘೋಷಿತ ದೇವಮಾನವ ಅಸಾರಾಂ ವಿರುದ್ಧ ಮತ್ತೊಂದು ರೇಪ್ ಕೇಸ್; ಇಂದು ತೀರ್ಪು ಸಾಧ್ಯತೆ

1997 ಮತ್ತು 2006ರ ನಡುವೆ ಅಸಾರಾಂನ ಅಹಮದಾಬಾದ್ ಆಶ್ರಮದಲ್ಲಿ ವಾಸಿಸುತ್ತಿದ್ದಾಗ ತನ್ನ ಅಕ್ಕನ ಮೇಲೆ ಅಸಾರಾಂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆಯ ತಂಗಿ ಆರೋಪಿಸಿದ್ದಳು.

2002 ಮತ್ತು 2005 ರ ನಡುವೆ ಸೂರತ್‌ನ ಜಹಾಂಗೀರ್‌ಪುರ ಪ್ರದೇಶದಲ್ಲಿ ಅಸಾರಾಂ ಅವರ ಆಶ್ರಮದಲ್ಲಿ ವಾಸಿಸುತ್ತಿದ್ದಾಗ ಅಸಾರಾಂ ಪುತ್ರ ನಾರಾಯಣ ಸಾಯಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಮಗಿಯು ಆರೋಪಿಸಿದರು.

2019ರಲ್ಲಿ ತಂಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನಾರಾಯಣ ಸಾಯಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಏನಿದು ಪ್ರಕರಣ?
ಅಸಾರಾಂ ವಿರುದ್ಧ ಕೇಸು ದಾಖಲಿಸಿದ ಮಹಿಳೆಯು, ಹಲವು ವರ್ಷಗಳಿಂದ ವಿವಿಧ ಆಶ್ರಮಗಳಲ್ಲಿ ಸ್ವಯಂಘೋಷಿತ ದೇವಮಾನವನಿಂದ ತನ್ನ ಮೇಲೆ ಅತ್ಯಾಚಾರ ನಡೆದಿದೆ. ಅಲ್ಲಿ ನನ್ನನ್ನು ಬಂಧಿಯಾಗಿದ್ದರು ಎಂದು ಆರೋಪಿಸಿದ್ದರು. ಈ ಬಗ್ಗೆ 2013ರಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆಯಲ್ಲಿಒಟ್ಟು 68 ಜನರ ಹೇಳಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಈ ಪ್ರಕರಣದ ತನಿಖಾಧಿಕಾರಿ ದಿವ್ಯಾ ರವಿಯಾ ಅವರಿಗೂ ಹಲವು ಬಾರಿ ಕೊಲೆ ಬೆದರಿಕೆಗಳು ಬಂದಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರ ಮೇಲೆ ಆರೋಪ ಕೇಳಿಬಂದಿತ್ತು. ಸೋಮವಾರ ಗಾಂಧಿನಗರ ನ್ಯಾಯಾಲಯವು ಅತ್ಯಾಚಾರದ ಆರೋಪದಲ್ಲಿ ಅಸಾರಾಂನನ್ನು ದೋಷಿ ಎಂದು ಘೋಷಿಸಿತು ಮತ್ತು ಪ್ರಕರಣದ ಇತರ ಆರೋಪಿಗಳನ್ನು ಖುಲಾಸೆಗೊಳಿಸಿತು.

ಅಸಾರಾಂ ಅವರ ಪತ್ನಿ ಲಕ್ಷ್ಮಿ, ಮಗಳು ಭಾರತಿ ಮತ್ತು ನಾಲ್ವರು ಮಹಿಳಾ ಅನುಯಾಯಿಗಳಾದ ಧ್ರುವಬೆನ್, ನಿರ್ಮಲಾ, ಜಸ್ಸಿ ಮತ್ತು ಮೀರಾ ಕೂಡ ಆರೋಪಿಗಳಾಗಿದ್ದರು ಆದರೆ ಗಾಂಧಿನಗರ ನ್ಯಾಯಾಲಯವು  ಖುಲಾಸೆಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...