Homeಮುಖಪುಟವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು - ಯುಪಿ ಗವರ್ನರ್

ವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು – ಯುಪಿ ಗವರ್ನರ್

- Advertisement -
- Advertisement -

ಆಧುನಿಕ ಕಾಲದಲ್ಲಿ ವಿಮಾನವನ್ನು ಕಂಡುಹಿಡಿಯುವ ಮೊದಲೇ, ವೈದಿಕಕಾಲದ ಋಷಿ ಭಾರದ್ವಾಜ ಅವರು ವಿಮಾನದ ಕಲ್ಪನೆಯನ್ನು ಮಾಡಿದ್ದರು ಎಂದು ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಸೋಮವಾರ ಹೇಳಿಕೊಂಡಿದ್ದಾರೆ. ಅವರು ಲಕ್ನೋದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಭಾಷಾ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡುತ್ತಿದ್ದರು. ವೇದ ಕಾಲದಲ್ಲೆ

ವಿಮಾನದ ಕಲ್ಪನೆಯನ್ನು ಮೊದಲು ಪ್ರತಿಪಾದಿಸಿದ್ದು ವೈದಿಕಕಾಲದ ಋಷಿ ಭಾರದ್ವಾಜ್ ಅವರೇ ಹೊತು ರೈಟ್ ಸಹೋದರರಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಪೂರ್ವಜರು ಮಾಡಿದ ಅಪ್ರತಿಮ ಸಂಶೋಧನೆಗಳನ್ನು ಪ್ರಶಂಸಿಸಲು ಪ್ರಾಚೀನ ಭಾರತೀಯ ಪಠ್ಯಗಳನ್ನು ಅಧ್ಯಯನ ಮಾಡಬೇಕು” ಎಂದು ಅವರು ಸಲಹೆ ನೀಡಿದ್ದಾರೆ. ವೇದ ಕಾಲದಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಾಚೀನ ಭಾರತದ ಋಷಿಗಳು ಮತ್ತು ವಿದ್ವಾಂಸರು ಗಮನಾರ್ಹವಾದ ಆವಿಷ್ಕಾರಗಳನ್ನು ಮಾಡಿದ್ದು, ಅದು ಇಂದಿಗೂ ಜಗತ್ತಿಗೆ ಪ್ರಯೋಜನಕಾರಿಯಾಗಿವೆ ಎಂದು ಅವರು ಭಾರದ್ವಾಜ ಅವರ ಉದಾಹರಣೆಯನ್ನು ಉಲ್ಲೇಖಿಸಿ, “ಅವರು ವಿಮಾನದ ಕಲ್ಪನೆಯನ್ನು ಆಗಲೆ ಮಾಡಿದ್ದರು. ಆದರೆ ಅದರ ಆವಿಷ್ಕಾರದ ಶ್ರೇಯಸ್ಸು ಮತ್ತೊಂದು ರಾಷ್ಟ್ರಕ್ಕೆ ನೀಡಲಾಯಿತು. ಈಗ ಅದರ ಆವಿಷ್ಕಾರ ಮಾಡಿದ್ದು ರೈಟ್ ಸಹೋದರರು ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಡಿಸೆಂಬರ್ 17, 1903 ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಸಹೋದರರು ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಮೊದಲ ಸ್ವಯಂ ಚಾಲಿತ ವಿಮಾನವನ್ನು ಹಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅದಾಗ್ಯೂ, ಕೆಲವು ಬಿಜೆಪಿ ನಾಯಕರು ರಾಮಾಯಣದಲ್ಲಿ ವಿವರಿಸಿರುವ ‘ಪುಷ್ಪಕ ವಿಮಾನ’ದ ಬಗ್ಗೆ ಉಲ್ಲೇಖಿಸಿ, ವಿಮಾನದ ಪರಿಕಲ್ಪನೆಯನ್ನು ರಾಮಾಯಣ ಕಾಲದಲ್ಲೆ ಮಾಡಲಾಗಿದೆ ಎಂದು ವಾದಿಸುತ್ತಿದ್ದಾರೆ. ಅಲ್ಲದೆ, ಭಾರತದಲ್ಲಿ ಸುಮಾರು 7,000 ವರ್ಷಗಳ ಹಿಂದೆಯೆ ವಿಮಾನಗಳು ಅಸ್ತಿತ್ವದಲ್ಲಿದ್ದವು ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ರಾಂಪುರ ರಝಾ ಗ್ರಂಥಾಲಯವನ್ನು ಉಲ್ಲೇಖಿಸಿದ ಅವರು, ಪ್ರಾಚೀನ ಪುಸ್ತಕಗಳು ಮತ್ತು ಕಲಾಕೃತಿಗಳ ಅಮೂಲ್ಯವಾದ ಸಂಗ್ರಹವನ್ನು ಎತ್ತಿ ತೋರಿಸಿದ್ದಾರೆ. ಅವುಗಳಲ್ಲಿ ಕೆಲವು ಇಂದಿಗೂ ರೋಮಾಂಚಕವಾಗಿವೆ ಎಂದು ಅವರು ಹೇಳಿದ್ದಾರೆ. “ನೈಸರ್ಗಿಕವಾಗಿ ಸಸ್ಯಗಳಿಂದ ಪಡೆದ ಈ ಚಿತ್ರಗಳಲ್ಲಿ ಬಳಸಲಾದ ಬಣ್ಣಗಳು ಇಷ್ಟು ಕಾಲವಾಗಿಯೂ ಹದಗೆಟ್ಟಿಲ್ಲ” ಎಂದು ರಾಜಪಾಲರಾದ ಆನಂದಿ ಹೇಳಿದ್ದಾರೆ.

ಬುದ್ಧನ ನಾಡಾದ ಭಾರತವು ಯಾವಾಗಲೂ ಸಂಘರ್ಷಕ್ಕಿಂತ ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಧಾನ ಮಂತ್ರಿಯ ಕಾರಣಕ್ಕೆ 1.4 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತದ ಘನತೆ ಜಾಗತಿಕ ವೇದಿಕೆಯಲ್ಲಿ ಹೆಚ್ಚಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...