Homeಮುಖಪುಟವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು - ಯುಪಿ ಗವರ್ನರ್

ವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು – ಯುಪಿ ಗವರ್ನರ್

- Advertisement -
- Advertisement -

ಆಧುನಿಕ ಕಾಲದಲ್ಲಿ ವಿಮಾನವನ್ನು ಕಂಡುಹಿಡಿಯುವ ಮೊದಲೇ, ವೈದಿಕಕಾಲದ ಋಷಿ ಭಾರದ್ವಾಜ ಅವರು ವಿಮಾನದ ಕಲ್ಪನೆಯನ್ನು ಮಾಡಿದ್ದರು ಎಂದು ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಸೋಮವಾರ ಹೇಳಿಕೊಂಡಿದ್ದಾರೆ. ಅವರು ಲಕ್ನೋದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಭಾಷಾ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡುತ್ತಿದ್ದರು. ವೇದ ಕಾಲದಲ್ಲೆ

ವಿಮಾನದ ಕಲ್ಪನೆಯನ್ನು ಮೊದಲು ಪ್ರತಿಪಾದಿಸಿದ್ದು ವೈದಿಕಕಾಲದ ಋಷಿ ಭಾರದ್ವಾಜ್ ಅವರೇ ಹೊತು ರೈಟ್ ಸಹೋದರರಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಪೂರ್ವಜರು ಮಾಡಿದ ಅಪ್ರತಿಮ ಸಂಶೋಧನೆಗಳನ್ನು ಪ್ರಶಂಸಿಸಲು ಪ್ರಾಚೀನ ಭಾರತೀಯ ಪಠ್ಯಗಳನ್ನು ಅಧ್ಯಯನ ಮಾಡಬೇಕು” ಎಂದು ಅವರು ಸಲಹೆ ನೀಡಿದ್ದಾರೆ. ವೇದ ಕಾಲದಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಾಚೀನ ಭಾರತದ ಋಷಿಗಳು ಮತ್ತು ವಿದ್ವಾಂಸರು ಗಮನಾರ್ಹವಾದ ಆವಿಷ್ಕಾರಗಳನ್ನು ಮಾಡಿದ್ದು, ಅದು ಇಂದಿಗೂ ಜಗತ್ತಿಗೆ ಪ್ರಯೋಜನಕಾರಿಯಾಗಿವೆ ಎಂದು ಅವರು ಭಾರದ್ವಾಜ ಅವರ ಉದಾಹರಣೆಯನ್ನು ಉಲ್ಲೇಖಿಸಿ, “ಅವರು ವಿಮಾನದ ಕಲ್ಪನೆಯನ್ನು ಆಗಲೆ ಮಾಡಿದ್ದರು. ಆದರೆ ಅದರ ಆವಿಷ್ಕಾರದ ಶ್ರೇಯಸ್ಸು ಮತ್ತೊಂದು ರಾಷ್ಟ್ರಕ್ಕೆ ನೀಡಲಾಯಿತು. ಈಗ ಅದರ ಆವಿಷ್ಕಾರ ಮಾಡಿದ್ದು ರೈಟ್ ಸಹೋದರರು ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಡಿಸೆಂಬರ್ 17, 1903 ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಸಹೋದರರು ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಮೊದಲ ಸ್ವಯಂ ಚಾಲಿತ ವಿಮಾನವನ್ನು ಹಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅದಾಗ್ಯೂ, ಕೆಲವು ಬಿಜೆಪಿ ನಾಯಕರು ರಾಮಾಯಣದಲ್ಲಿ ವಿವರಿಸಿರುವ ‘ಪುಷ್ಪಕ ವಿಮಾನ’ದ ಬಗ್ಗೆ ಉಲ್ಲೇಖಿಸಿ, ವಿಮಾನದ ಪರಿಕಲ್ಪನೆಯನ್ನು ರಾಮಾಯಣ ಕಾಲದಲ್ಲೆ ಮಾಡಲಾಗಿದೆ ಎಂದು ವಾದಿಸುತ್ತಿದ್ದಾರೆ. ಅಲ್ಲದೆ, ಭಾರತದಲ್ಲಿ ಸುಮಾರು 7,000 ವರ್ಷಗಳ ಹಿಂದೆಯೆ ವಿಮಾನಗಳು ಅಸ್ತಿತ್ವದಲ್ಲಿದ್ದವು ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ರಾಂಪುರ ರಝಾ ಗ್ರಂಥಾಲಯವನ್ನು ಉಲ್ಲೇಖಿಸಿದ ಅವರು, ಪ್ರಾಚೀನ ಪುಸ್ತಕಗಳು ಮತ್ತು ಕಲಾಕೃತಿಗಳ ಅಮೂಲ್ಯವಾದ ಸಂಗ್ರಹವನ್ನು ಎತ್ತಿ ತೋರಿಸಿದ್ದಾರೆ. ಅವುಗಳಲ್ಲಿ ಕೆಲವು ಇಂದಿಗೂ ರೋಮಾಂಚಕವಾಗಿವೆ ಎಂದು ಅವರು ಹೇಳಿದ್ದಾರೆ. “ನೈಸರ್ಗಿಕವಾಗಿ ಸಸ್ಯಗಳಿಂದ ಪಡೆದ ಈ ಚಿತ್ರಗಳಲ್ಲಿ ಬಳಸಲಾದ ಬಣ್ಣಗಳು ಇಷ್ಟು ಕಾಲವಾಗಿಯೂ ಹದಗೆಟ್ಟಿಲ್ಲ” ಎಂದು ರಾಜಪಾಲರಾದ ಆನಂದಿ ಹೇಳಿದ್ದಾರೆ.

ಬುದ್ಧನ ನಾಡಾದ ಭಾರತವು ಯಾವಾಗಲೂ ಸಂಘರ್ಷಕ್ಕಿಂತ ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಧಾನ ಮಂತ್ರಿಯ ಕಾರಣಕ್ಕೆ 1.4 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತದ ಘನತೆ ಜಾಗತಿಕ ವೇದಿಕೆಯಲ್ಲಿ ಹೆಚ್ಚಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...