Homeಮುಖಪುಟವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು - ಯುಪಿ ಗವರ್ನರ್

ವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು – ಯುಪಿ ಗವರ್ನರ್

- Advertisement -
- Advertisement -

ಆಧುನಿಕ ಕಾಲದಲ್ಲಿ ವಿಮಾನವನ್ನು ಕಂಡುಹಿಡಿಯುವ ಮೊದಲೇ, ವೈದಿಕಕಾಲದ ಋಷಿ ಭಾರದ್ವಾಜ ಅವರು ವಿಮಾನದ ಕಲ್ಪನೆಯನ್ನು ಮಾಡಿದ್ದರು ಎಂದು ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಸೋಮವಾರ ಹೇಳಿಕೊಂಡಿದ್ದಾರೆ. ಅವರು ಲಕ್ನೋದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಭಾಷಾ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡುತ್ತಿದ್ದರು. ವೇದ ಕಾಲದಲ್ಲೆ

ವಿಮಾನದ ಕಲ್ಪನೆಯನ್ನು ಮೊದಲು ಪ್ರತಿಪಾದಿಸಿದ್ದು ವೈದಿಕಕಾಲದ ಋಷಿ ಭಾರದ್ವಾಜ್ ಅವರೇ ಹೊತು ರೈಟ್ ಸಹೋದರರಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಪೂರ್ವಜರು ಮಾಡಿದ ಅಪ್ರತಿಮ ಸಂಶೋಧನೆಗಳನ್ನು ಪ್ರಶಂಸಿಸಲು ಪ್ರಾಚೀನ ಭಾರತೀಯ ಪಠ್ಯಗಳನ್ನು ಅಧ್ಯಯನ ಮಾಡಬೇಕು” ಎಂದು ಅವರು ಸಲಹೆ ನೀಡಿದ್ದಾರೆ. ವೇದ ಕಾಲದಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಾಚೀನ ಭಾರತದ ಋಷಿಗಳು ಮತ್ತು ವಿದ್ವಾಂಸರು ಗಮನಾರ್ಹವಾದ ಆವಿಷ್ಕಾರಗಳನ್ನು ಮಾಡಿದ್ದು, ಅದು ಇಂದಿಗೂ ಜಗತ್ತಿಗೆ ಪ್ರಯೋಜನಕಾರಿಯಾಗಿವೆ ಎಂದು ಅವರು ಭಾರದ್ವಾಜ ಅವರ ಉದಾಹರಣೆಯನ್ನು ಉಲ್ಲೇಖಿಸಿ, “ಅವರು ವಿಮಾನದ ಕಲ್ಪನೆಯನ್ನು ಆಗಲೆ ಮಾಡಿದ್ದರು. ಆದರೆ ಅದರ ಆವಿಷ್ಕಾರದ ಶ್ರೇಯಸ್ಸು ಮತ್ತೊಂದು ರಾಷ್ಟ್ರಕ್ಕೆ ನೀಡಲಾಯಿತು. ಈಗ ಅದರ ಆವಿಷ್ಕಾರ ಮಾಡಿದ್ದು ರೈಟ್ ಸಹೋದರರು ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಡಿಸೆಂಬರ್ 17, 1903 ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಸಹೋದರರು ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಮೊದಲ ಸ್ವಯಂ ಚಾಲಿತ ವಿಮಾನವನ್ನು ಹಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅದಾಗ್ಯೂ, ಕೆಲವು ಬಿಜೆಪಿ ನಾಯಕರು ರಾಮಾಯಣದಲ್ಲಿ ವಿವರಿಸಿರುವ ‘ಪುಷ್ಪಕ ವಿಮಾನ’ದ ಬಗ್ಗೆ ಉಲ್ಲೇಖಿಸಿ, ವಿಮಾನದ ಪರಿಕಲ್ಪನೆಯನ್ನು ರಾಮಾಯಣ ಕಾಲದಲ್ಲೆ ಮಾಡಲಾಗಿದೆ ಎಂದು ವಾದಿಸುತ್ತಿದ್ದಾರೆ. ಅಲ್ಲದೆ, ಭಾರತದಲ್ಲಿ ಸುಮಾರು 7,000 ವರ್ಷಗಳ ಹಿಂದೆಯೆ ವಿಮಾನಗಳು ಅಸ್ತಿತ್ವದಲ್ಲಿದ್ದವು ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ರಾಂಪುರ ರಝಾ ಗ್ರಂಥಾಲಯವನ್ನು ಉಲ್ಲೇಖಿಸಿದ ಅವರು, ಪ್ರಾಚೀನ ಪುಸ್ತಕಗಳು ಮತ್ತು ಕಲಾಕೃತಿಗಳ ಅಮೂಲ್ಯವಾದ ಸಂಗ್ರಹವನ್ನು ಎತ್ತಿ ತೋರಿಸಿದ್ದಾರೆ. ಅವುಗಳಲ್ಲಿ ಕೆಲವು ಇಂದಿಗೂ ರೋಮಾಂಚಕವಾಗಿವೆ ಎಂದು ಅವರು ಹೇಳಿದ್ದಾರೆ. “ನೈಸರ್ಗಿಕವಾಗಿ ಸಸ್ಯಗಳಿಂದ ಪಡೆದ ಈ ಚಿತ್ರಗಳಲ್ಲಿ ಬಳಸಲಾದ ಬಣ್ಣಗಳು ಇಷ್ಟು ಕಾಲವಾಗಿಯೂ ಹದಗೆಟ್ಟಿಲ್ಲ” ಎಂದು ರಾಜಪಾಲರಾದ ಆನಂದಿ ಹೇಳಿದ್ದಾರೆ.

ಬುದ್ಧನ ನಾಡಾದ ಭಾರತವು ಯಾವಾಗಲೂ ಸಂಘರ್ಷಕ್ಕಿಂತ ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಧಾನ ಮಂತ್ರಿಯ ಕಾರಣಕ್ಕೆ 1.4 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತದ ಘನತೆ ಜಾಗತಿಕ ವೇದಿಕೆಯಲ್ಲಿ ಹೆಚ್ಚಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...