Homeಮುಖಪುಟವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು - ಯುಪಿ ಗವರ್ನರ್

ವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು – ಯುಪಿ ಗವರ್ನರ್

- Advertisement -
- Advertisement -

ಆಧುನಿಕ ಕಾಲದಲ್ಲಿ ವಿಮಾನವನ್ನು ಕಂಡುಹಿಡಿಯುವ ಮೊದಲೇ, ವೈದಿಕಕಾಲದ ಋಷಿ ಭಾರದ್ವಾಜ ಅವರು ವಿಮಾನದ ಕಲ್ಪನೆಯನ್ನು ಮಾಡಿದ್ದರು ಎಂದು ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಸೋಮವಾರ ಹೇಳಿಕೊಂಡಿದ್ದಾರೆ. ಅವರು ಲಕ್ನೋದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಭಾಷಾ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡುತ್ತಿದ್ದರು. ವೇದ ಕಾಲದಲ್ಲೆ

ವಿಮಾನದ ಕಲ್ಪನೆಯನ್ನು ಮೊದಲು ಪ್ರತಿಪಾದಿಸಿದ್ದು ವೈದಿಕಕಾಲದ ಋಷಿ ಭಾರದ್ವಾಜ್ ಅವರೇ ಹೊತು ರೈಟ್ ಸಹೋದರರಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಪೂರ್ವಜರು ಮಾಡಿದ ಅಪ್ರತಿಮ ಸಂಶೋಧನೆಗಳನ್ನು ಪ್ರಶಂಸಿಸಲು ಪ್ರಾಚೀನ ಭಾರತೀಯ ಪಠ್ಯಗಳನ್ನು ಅಧ್ಯಯನ ಮಾಡಬೇಕು” ಎಂದು ಅವರು ಸಲಹೆ ನೀಡಿದ್ದಾರೆ. ವೇದ ಕಾಲದಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಾಚೀನ ಭಾರತದ ಋಷಿಗಳು ಮತ್ತು ವಿದ್ವಾಂಸರು ಗಮನಾರ್ಹವಾದ ಆವಿಷ್ಕಾರಗಳನ್ನು ಮಾಡಿದ್ದು, ಅದು ಇಂದಿಗೂ ಜಗತ್ತಿಗೆ ಪ್ರಯೋಜನಕಾರಿಯಾಗಿವೆ ಎಂದು ಅವರು ಭಾರದ್ವಾಜ ಅವರ ಉದಾಹರಣೆಯನ್ನು ಉಲ್ಲೇಖಿಸಿ, “ಅವರು ವಿಮಾನದ ಕಲ್ಪನೆಯನ್ನು ಆಗಲೆ ಮಾಡಿದ್ದರು. ಆದರೆ ಅದರ ಆವಿಷ್ಕಾರದ ಶ್ರೇಯಸ್ಸು ಮತ್ತೊಂದು ರಾಷ್ಟ್ರಕ್ಕೆ ನೀಡಲಾಯಿತು. ಈಗ ಅದರ ಆವಿಷ್ಕಾರ ಮಾಡಿದ್ದು ರೈಟ್ ಸಹೋದರರು ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಡಿಸೆಂಬರ್ 17, 1903 ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಸಹೋದರರು ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಮೊದಲ ಸ್ವಯಂ ಚಾಲಿತ ವಿಮಾನವನ್ನು ಹಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅದಾಗ್ಯೂ, ಕೆಲವು ಬಿಜೆಪಿ ನಾಯಕರು ರಾಮಾಯಣದಲ್ಲಿ ವಿವರಿಸಿರುವ ‘ಪುಷ್ಪಕ ವಿಮಾನ’ದ ಬಗ್ಗೆ ಉಲ್ಲೇಖಿಸಿ, ವಿಮಾನದ ಪರಿಕಲ್ಪನೆಯನ್ನು ರಾಮಾಯಣ ಕಾಲದಲ್ಲೆ ಮಾಡಲಾಗಿದೆ ಎಂದು ವಾದಿಸುತ್ತಿದ್ದಾರೆ. ಅಲ್ಲದೆ, ಭಾರತದಲ್ಲಿ ಸುಮಾರು 7,000 ವರ್ಷಗಳ ಹಿಂದೆಯೆ ವಿಮಾನಗಳು ಅಸ್ತಿತ್ವದಲ್ಲಿದ್ದವು ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ರಾಂಪುರ ರಝಾ ಗ್ರಂಥಾಲಯವನ್ನು ಉಲ್ಲೇಖಿಸಿದ ಅವರು, ಪ್ರಾಚೀನ ಪುಸ್ತಕಗಳು ಮತ್ತು ಕಲಾಕೃತಿಗಳ ಅಮೂಲ್ಯವಾದ ಸಂಗ್ರಹವನ್ನು ಎತ್ತಿ ತೋರಿಸಿದ್ದಾರೆ. ಅವುಗಳಲ್ಲಿ ಕೆಲವು ಇಂದಿಗೂ ರೋಮಾಂಚಕವಾಗಿವೆ ಎಂದು ಅವರು ಹೇಳಿದ್ದಾರೆ. “ನೈಸರ್ಗಿಕವಾಗಿ ಸಸ್ಯಗಳಿಂದ ಪಡೆದ ಈ ಚಿತ್ರಗಳಲ್ಲಿ ಬಳಸಲಾದ ಬಣ್ಣಗಳು ಇಷ್ಟು ಕಾಲವಾಗಿಯೂ ಹದಗೆಟ್ಟಿಲ್ಲ” ಎಂದು ರಾಜಪಾಲರಾದ ಆನಂದಿ ಹೇಳಿದ್ದಾರೆ.

ಬುದ್ಧನ ನಾಡಾದ ಭಾರತವು ಯಾವಾಗಲೂ ಸಂಘರ್ಷಕ್ಕಿಂತ ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಧಾನ ಮಂತ್ರಿಯ ಕಾರಣಕ್ಕೆ 1.4 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತದ ಘನತೆ ಜಾಗತಿಕ ವೇದಿಕೆಯಲ್ಲಿ ಹೆಚ್ಚಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...