Homeಮುಖಪುಟವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು - ಯುಪಿ ಗವರ್ನರ್

ವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು – ಯುಪಿ ಗವರ್ನರ್

- Advertisement -
- Advertisement -

ಆಧುನಿಕ ಕಾಲದಲ್ಲಿ ವಿಮಾನವನ್ನು ಕಂಡುಹಿಡಿಯುವ ಮೊದಲೇ, ವೈದಿಕಕಾಲದ ಋಷಿ ಭಾರದ್ವಾಜ ಅವರು ವಿಮಾನದ ಕಲ್ಪನೆಯನ್ನು ಮಾಡಿದ್ದರು ಎಂದು ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಸೋಮವಾರ ಹೇಳಿಕೊಂಡಿದ್ದಾರೆ. ಅವರು ಲಕ್ನೋದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಭಾಷಾ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡುತ್ತಿದ್ದರು. ವೇದ ಕಾಲದಲ್ಲೆ

ವಿಮಾನದ ಕಲ್ಪನೆಯನ್ನು ಮೊದಲು ಪ್ರತಿಪಾದಿಸಿದ್ದು ವೈದಿಕಕಾಲದ ಋಷಿ ಭಾರದ್ವಾಜ್ ಅವರೇ ಹೊತು ರೈಟ್ ಸಹೋದರರಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಪೂರ್ವಜರು ಮಾಡಿದ ಅಪ್ರತಿಮ ಸಂಶೋಧನೆಗಳನ್ನು ಪ್ರಶಂಸಿಸಲು ಪ್ರಾಚೀನ ಭಾರತೀಯ ಪಠ್ಯಗಳನ್ನು ಅಧ್ಯಯನ ಮಾಡಬೇಕು” ಎಂದು ಅವರು ಸಲಹೆ ನೀಡಿದ್ದಾರೆ. ವೇದ ಕಾಲದಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಾಚೀನ ಭಾರತದ ಋಷಿಗಳು ಮತ್ತು ವಿದ್ವಾಂಸರು ಗಮನಾರ್ಹವಾದ ಆವಿಷ್ಕಾರಗಳನ್ನು ಮಾಡಿದ್ದು, ಅದು ಇಂದಿಗೂ ಜಗತ್ತಿಗೆ ಪ್ರಯೋಜನಕಾರಿಯಾಗಿವೆ ಎಂದು ಅವರು ಭಾರದ್ವಾಜ ಅವರ ಉದಾಹರಣೆಯನ್ನು ಉಲ್ಲೇಖಿಸಿ, “ಅವರು ವಿಮಾನದ ಕಲ್ಪನೆಯನ್ನು ಆಗಲೆ ಮಾಡಿದ್ದರು. ಆದರೆ ಅದರ ಆವಿಷ್ಕಾರದ ಶ್ರೇಯಸ್ಸು ಮತ್ತೊಂದು ರಾಷ್ಟ್ರಕ್ಕೆ ನೀಡಲಾಯಿತು. ಈಗ ಅದರ ಆವಿಷ್ಕಾರ ಮಾಡಿದ್ದು ರೈಟ್ ಸಹೋದರರು ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಡಿಸೆಂಬರ್ 17, 1903 ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಸಹೋದರರು ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಮೊದಲ ಸ್ವಯಂ ಚಾಲಿತ ವಿಮಾನವನ್ನು ಹಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅದಾಗ್ಯೂ, ಕೆಲವು ಬಿಜೆಪಿ ನಾಯಕರು ರಾಮಾಯಣದಲ್ಲಿ ವಿವರಿಸಿರುವ ‘ಪುಷ್ಪಕ ವಿಮಾನ’ದ ಬಗ್ಗೆ ಉಲ್ಲೇಖಿಸಿ, ವಿಮಾನದ ಪರಿಕಲ್ಪನೆಯನ್ನು ರಾಮಾಯಣ ಕಾಲದಲ್ಲೆ ಮಾಡಲಾಗಿದೆ ಎಂದು ವಾದಿಸುತ್ತಿದ್ದಾರೆ. ಅಲ್ಲದೆ, ಭಾರತದಲ್ಲಿ ಸುಮಾರು 7,000 ವರ್ಷಗಳ ಹಿಂದೆಯೆ ವಿಮಾನಗಳು ಅಸ್ತಿತ್ವದಲ್ಲಿದ್ದವು ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ರಾಂಪುರ ರಝಾ ಗ್ರಂಥಾಲಯವನ್ನು ಉಲ್ಲೇಖಿಸಿದ ಅವರು, ಪ್ರಾಚೀನ ಪುಸ್ತಕಗಳು ಮತ್ತು ಕಲಾಕೃತಿಗಳ ಅಮೂಲ್ಯವಾದ ಸಂಗ್ರಹವನ್ನು ಎತ್ತಿ ತೋರಿಸಿದ್ದಾರೆ. ಅವುಗಳಲ್ಲಿ ಕೆಲವು ಇಂದಿಗೂ ರೋಮಾಂಚಕವಾಗಿವೆ ಎಂದು ಅವರು ಹೇಳಿದ್ದಾರೆ. “ನೈಸರ್ಗಿಕವಾಗಿ ಸಸ್ಯಗಳಿಂದ ಪಡೆದ ಈ ಚಿತ್ರಗಳಲ್ಲಿ ಬಳಸಲಾದ ಬಣ್ಣಗಳು ಇಷ್ಟು ಕಾಲವಾಗಿಯೂ ಹದಗೆಟ್ಟಿಲ್ಲ” ಎಂದು ರಾಜಪಾಲರಾದ ಆನಂದಿ ಹೇಳಿದ್ದಾರೆ.

ಬುದ್ಧನ ನಾಡಾದ ಭಾರತವು ಯಾವಾಗಲೂ ಸಂಘರ್ಷಕ್ಕಿಂತ ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಧಾನ ಮಂತ್ರಿಯ ಕಾರಣಕ್ಕೆ 1.4 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತದ ಘನತೆ ಜಾಗತಿಕ ವೇದಿಕೆಯಲ್ಲಿ ಹೆಚ್ಚಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...