Homeಮುಖಪುಟವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು - ಯುಪಿ ಗವರ್ನರ್

ವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು – ಯುಪಿ ಗವರ್ನರ್

- Advertisement -
- Advertisement -

ಆಧುನಿಕ ಕಾಲದಲ್ಲಿ ವಿಮಾನವನ್ನು ಕಂಡುಹಿಡಿಯುವ ಮೊದಲೇ, ವೈದಿಕಕಾಲದ ಋಷಿ ಭಾರದ್ವಾಜ ಅವರು ವಿಮಾನದ ಕಲ್ಪನೆಯನ್ನು ಮಾಡಿದ್ದರು ಎಂದು ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಸೋಮವಾರ ಹೇಳಿಕೊಂಡಿದ್ದಾರೆ. ಅವರು ಲಕ್ನೋದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಭಾಷಾ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡುತ್ತಿದ್ದರು. ವೇದ ಕಾಲದಲ್ಲೆ

ವಿಮಾನದ ಕಲ್ಪನೆಯನ್ನು ಮೊದಲು ಪ್ರತಿಪಾದಿಸಿದ್ದು ವೈದಿಕಕಾಲದ ಋಷಿ ಭಾರದ್ವಾಜ್ ಅವರೇ ಹೊತು ರೈಟ್ ಸಹೋದರರಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಪೂರ್ವಜರು ಮಾಡಿದ ಅಪ್ರತಿಮ ಸಂಶೋಧನೆಗಳನ್ನು ಪ್ರಶಂಸಿಸಲು ಪ್ರಾಚೀನ ಭಾರತೀಯ ಪಠ್ಯಗಳನ್ನು ಅಧ್ಯಯನ ಮಾಡಬೇಕು” ಎಂದು ಅವರು ಸಲಹೆ ನೀಡಿದ್ದಾರೆ. ವೇದ ಕಾಲದಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಾಚೀನ ಭಾರತದ ಋಷಿಗಳು ಮತ್ತು ವಿದ್ವಾಂಸರು ಗಮನಾರ್ಹವಾದ ಆವಿಷ್ಕಾರಗಳನ್ನು ಮಾಡಿದ್ದು, ಅದು ಇಂದಿಗೂ ಜಗತ್ತಿಗೆ ಪ್ರಯೋಜನಕಾರಿಯಾಗಿವೆ ಎಂದು ಅವರು ಭಾರದ್ವಾಜ ಅವರ ಉದಾಹರಣೆಯನ್ನು ಉಲ್ಲೇಖಿಸಿ, “ಅವರು ವಿಮಾನದ ಕಲ್ಪನೆಯನ್ನು ಆಗಲೆ ಮಾಡಿದ್ದರು. ಆದರೆ ಅದರ ಆವಿಷ್ಕಾರದ ಶ್ರೇಯಸ್ಸು ಮತ್ತೊಂದು ರಾಷ್ಟ್ರಕ್ಕೆ ನೀಡಲಾಯಿತು. ಈಗ ಅದರ ಆವಿಷ್ಕಾರ ಮಾಡಿದ್ದು ರೈಟ್ ಸಹೋದರರು ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಡಿಸೆಂಬರ್ 17, 1903 ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಸಹೋದರರು ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಮೊದಲ ಸ್ವಯಂ ಚಾಲಿತ ವಿಮಾನವನ್ನು ಹಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅದಾಗ್ಯೂ, ಕೆಲವು ಬಿಜೆಪಿ ನಾಯಕರು ರಾಮಾಯಣದಲ್ಲಿ ವಿವರಿಸಿರುವ ‘ಪುಷ್ಪಕ ವಿಮಾನ’ದ ಬಗ್ಗೆ ಉಲ್ಲೇಖಿಸಿ, ವಿಮಾನದ ಪರಿಕಲ್ಪನೆಯನ್ನು ರಾಮಾಯಣ ಕಾಲದಲ್ಲೆ ಮಾಡಲಾಗಿದೆ ಎಂದು ವಾದಿಸುತ್ತಿದ್ದಾರೆ. ಅಲ್ಲದೆ, ಭಾರತದಲ್ಲಿ ಸುಮಾರು 7,000 ವರ್ಷಗಳ ಹಿಂದೆಯೆ ವಿಮಾನಗಳು ಅಸ್ತಿತ್ವದಲ್ಲಿದ್ದವು ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ರಾಂಪುರ ರಝಾ ಗ್ರಂಥಾಲಯವನ್ನು ಉಲ್ಲೇಖಿಸಿದ ಅವರು, ಪ್ರಾಚೀನ ಪುಸ್ತಕಗಳು ಮತ್ತು ಕಲಾಕೃತಿಗಳ ಅಮೂಲ್ಯವಾದ ಸಂಗ್ರಹವನ್ನು ಎತ್ತಿ ತೋರಿಸಿದ್ದಾರೆ. ಅವುಗಳಲ್ಲಿ ಕೆಲವು ಇಂದಿಗೂ ರೋಮಾಂಚಕವಾಗಿವೆ ಎಂದು ಅವರು ಹೇಳಿದ್ದಾರೆ. “ನೈಸರ್ಗಿಕವಾಗಿ ಸಸ್ಯಗಳಿಂದ ಪಡೆದ ಈ ಚಿತ್ರಗಳಲ್ಲಿ ಬಳಸಲಾದ ಬಣ್ಣಗಳು ಇಷ್ಟು ಕಾಲವಾಗಿಯೂ ಹದಗೆಟ್ಟಿಲ್ಲ” ಎಂದು ರಾಜಪಾಲರಾದ ಆನಂದಿ ಹೇಳಿದ್ದಾರೆ.

ಬುದ್ಧನ ನಾಡಾದ ಭಾರತವು ಯಾವಾಗಲೂ ಸಂಘರ್ಷಕ್ಕಿಂತ ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಧಾನ ಮಂತ್ರಿಯ ಕಾರಣಕ್ಕೆ 1.4 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತದ ಘನತೆ ಜಾಗತಿಕ ವೇದಿಕೆಯಲ್ಲಿ ಹೆಚ್ಚಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...