Homeಮುಖಪುಟವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು - ಯುಪಿ ಗವರ್ನರ್

ವೇದ ಕಾಲದಲ್ಲೆ ವಿಮಾನ ಇತ್ತು, ಆದರೆ ಶ್ರೇಯಸ್ಸು ರೈಟ್ ಬ್ರದರ್ಸ್‌ ಪಡೆದರು – ಯುಪಿ ಗವರ್ನರ್

- Advertisement -
- Advertisement -

ಆಧುನಿಕ ಕಾಲದಲ್ಲಿ ವಿಮಾನವನ್ನು ಕಂಡುಹಿಡಿಯುವ ಮೊದಲೇ, ವೈದಿಕಕಾಲದ ಋಷಿ ಭಾರದ್ವಾಜ ಅವರು ವಿಮಾನದ ಕಲ್ಪನೆಯನ್ನು ಮಾಡಿದ್ದರು ಎಂದು ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಸೋಮವಾರ ಹೇಳಿಕೊಂಡಿದ್ದಾರೆ. ಅವರು ಲಕ್ನೋದಲ್ಲಿ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಭಾಷಾ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡುತ್ತಿದ್ದರು. ವೇದ ಕಾಲದಲ್ಲೆ

ವಿಮಾನದ ಕಲ್ಪನೆಯನ್ನು ಮೊದಲು ಪ್ರತಿಪಾದಿಸಿದ್ದು ವೈದಿಕಕಾಲದ ಋಷಿ ಭಾರದ್ವಾಜ್ ಅವರೇ ಹೊತು ರೈಟ್ ಸಹೋದರರಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. “ವಿದ್ಯಾರ್ಥಿಗಳು ತಮ್ಮ ಪೂರ್ವಜರು ಮಾಡಿದ ಅಪ್ರತಿಮ ಸಂಶೋಧನೆಗಳನ್ನು ಪ್ರಶಂಸಿಸಲು ಪ್ರಾಚೀನ ಭಾರತೀಯ ಪಠ್ಯಗಳನ್ನು ಅಧ್ಯಯನ ಮಾಡಬೇಕು” ಎಂದು ಅವರು ಸಲಹೆ ನೀಡಿದ್ದಾರೆ. ವೇದ ಕಾಲದಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಾಚೀನ ಭಾರತದ ಋಷಿಗಳು ಮತ್ತು ವಿದ್ವಾಂಸರು ಗಮನಾರ್ಹವಾದ ಆವಿಷ್ಕಾರಗಳನ್ನು ಮಾಡಿದ್ದು, ಅದು ಇಂದಿಗೂ ಜಗತ್ತಿಗೆ ಪ್ರಯೋಜನಕಾರಿಯಾಗಿವೆ ಎಂದು ಅವರು ಭಾರದ್ವಾಜ ಅವರ ಉದಾಹರಣೆಯನ್ನು ಉಲ್ಲೇಖಿಸಿ, “ಅವರು ವಿಮಾನದ ಕಲ್ಪನೆಯನ್ನು ಆಗಲೆ ಮಾಡಿದ್ದರು. ಆದರೆ ಅದರ ಆವಿಷ್ಕಾರದ ಶ್ರೇಯಸ್ಸು ಮತ್ತೊಂದು ರಾಷ್ಟ್ರಕ್ಕೆ ನೀಡಲಾಯಿತು. ಈಗ ಅದರ ಆವಿಷ್ಕಾರ ಮಾಡಿದ್ದು ರೈಟ್ ಸಹೋದರರು ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಡಿಸೆಂಬರ್ 17, 1903 ರಂದು ಆರ್ವಿಲ್ಲೆ ಮತ್ತು ವಿಲ್ಬರ್ ರೈಟ್ ಸಹೋದರರು ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಮೊದಲ ಸ್ವಯಂ ಚಾಲಿತ ವಿಮಾನವನ್ನು ಹಾರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅದಾಗ್ಯೂ, ಕೆಲವು ಬಿಜೆಪಿ ನಾಯಕರು ರಾಮಾಯಣದಲ್ಲಿ ವಿವರಿಸಿರುವ ‘ಪುಷ್ಪಕ ವಿಮಾನ’ದ ಬಗ್ಗೆ ಉಲ್ಲೇಖಿಸಿ, ವಿಮಾನದ ಪರಿಕಲ್ಪನೆಯನ್ನು ರಾಮಾಯಣ ಕಾಲದಲ್ಲೆ ಮಾಡಲಾಗಿದೆ ಎಂದು ವಾದಿಸುತ್ತಿದ್ದಾರೆ. ಅಲ್ಲದೆ, ಭಾರತದಲ್ಲಿ ಸುಮಾರು 7,000 ವರ್ಷಗಳ ಹಿಂದೆಯೆ ವಿಮಾನಗಳು ಅಸ್ತಿತ್ವದಲ್ಲಿದ್ದವು ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ರಾಂಪುರ ರಝಾ ಗ್ರಂಥಾಲಯವನ್ನು ಉಲ್ಲೇಖಿಸಿದ ಅವರು, ಪ್ರಾಚೀನ ಪುಸ್ತಕಗಳು ಮತ್ತು ಕಲಾಕೃತಿಗಳ ಅಮೂಲ್ಯವಾದ ಸಂಗ್ರಹವನ್ನು ಎತ್ತಿ ತೋರಿಸಿದ್ದಾರೆ. ಅವುಗಳಲ್ಲಿ ಕೆಲವು ಇಂದಿಗೂ ರೋಮಾಂಚಕವಾಗಿವೆ ಎಂದು ಅವರು ಹೇಳಿದ್ದಾರೆ. “ನೈಸರ್ಗಿಕವಾಗಿ ಸಸ್ಯಗಳಿಂದ ಪಡೆದ ಈ ಚಿತ್ರಗಳಲ್ಲಿ ಬಳಸಲಾದ ಬಣ್ಣಗಳು ಇಷ್ಟು ಕಾಲವಾಗಿಯೂ ಹದಗೆಟ್ಟಿಲ್ಲ” ಎಂದು ರಾಜಪಾಲರಾದ ಆನಂದಿ ಹೇಳಿದ್ದಾರೆ.

ಬುದ್ಧನ ನಾಡಾದ ಭಾರತವು ಯಾವಾಗಲೂ ಸಂಘರ್ಷಕ್ಕಿಂತ ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಧಾನ ಮಂತ್ರಿಯ ಕಾರಣಕ್ಕೆ 1.4 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತದ ಘನತೆ ಜಾಗತಿಕ ವೇದಿಕೆಯಲ್ಲಿ ಹೆಚ್ಚಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ಆರ್ಮ್‌ಸ್ಟ್ರಾಂಗ್ ಕೊಲೆ ಪ್ರಕರಣ | ಆರೋಪಿಗಳ ಬಂಧನದ ಪ್ರಯತ್ನಗಳಲ್ಲಿ ತಮಿಳುನಾಡು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...