Homeಕರ್ನಾಟಕವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಎಲ್ಲಾ ಕೆಲಸಗಳೂ ಆನ್‌ಲೈನ್‌ನಲ್ಲೇ ನಡೆಯುತ್ತಿರುವ  ಇಂಥಾ ಸಂದರ್ಭದಲ್ಲಿ ಹೆರಿಗೆಯು ಸಹ ಆನ್‌ಲೈನ್‌ ಸಹಾಯದಲ್ಲೇ ನಡೆದ ಅಪರೂಪದ ಪ್ರಕರಣ ಹಾವೇರಿಯಲ್ಲಿ ವರದಿಯಾಗಿದೆ.

ಕಳೆದ ಭಾನುವಾರ ವಾಸವಿ ಫಟ್ಟೆಪುರ ಎಂಬ ಮಹಿಳೆಗೆ ನಿಗದಿತ ದಿನಾಂಕಕ್ಕೆ ಮೊದಲೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರ ಪತಿ ರಾಘವೇಂದ್ರ ವಾಹನ ತರಲು ಹೋದವನು ಬರುವುದಕ್ಕೆ ತಡವಾಗಿದೆ.  ಅಂದು ವಾರಾಂತ್ಯ ಲಾಕ್ ಡೌನ್ ಇದ್ದಿದ್ದರಿಂದ ಯಾವುದೇ ಖಾಸಗೀ ವಾಹನಗಳು ಸಿಗಲಿಲ್ಲ. ನಂತರ ಮನೆಯಲ್ಲಿದ್ದವರು ಸಹಾಯಕ್ಕಾಗಿ ನೆರೆಯವರನ್ನು ಕೂಗಿದ್ದಾರೆ. ಆದರೆ ಅವರು ಬರುವುದರೊಳಗಾಗಿ ಮನೆಯಲ್ಲಿಯೇ ಹೆರಿಗೆ ಆಗಿತ್ತು ಎಂದು ನೆರೆಮನೆಯ ಮಧುಲಿಕಾ ದೇಸಾಯಿ ನಾನುಗೌರಿಗೆ ತಿಳಿಸಿದರು.

ನಂತರ ಅವರ ಪತಿ ಆಂಬುಲೆನ್ಸ್ ಗೆ ಕರೆ ಮಾಡಿದಾಗ, ಕೊರೊನಾ ಕರ್ತವ್ಯದಲ್ಲಿರುವುದಾಗಿಯೂ, ಬರುವುದಕ್ಕೆ 30-40 ನಿಮಿಷ ಆಗುತ್ತದೆ ಎಂದು ಮಧುಲಿಕಾ ಹೇಳಿದರು.

‘ನಾನು ಬಂದು ನೋಡಿದಾಗ ತಾಯಿ ಮತ್ತು ಮಗು ನೆಲದ ಮೇಲೆ ಮಲಗಿದ್ದರು. ನನಗೆ ಏನು ಮಾಡಬೆಕೆಂದು ತೋಚಲಿಲ್ಲ. ಮಗು ಮತ್ತು ತಾಯಿಯ ಜೀವ ಕಾಪಾಡಬೇಕಾಗಿದ್ದರಿಂದ, ನಮ್ಮದೇ ಬೀದಿಯ ಪ್ರಿಯಾಂಕ ಎನ್ನುವ ವೈದ್ಯೆಯೊಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದು ನೆನಪಿಗೆ ಬಂದು ತಕ್ಷಣ ಅವರಿಗೆ ವೀಡಿಯೋ ಕರೆ ಮಾಡಿ ಪರಿಸ್ಥಿತಿ ತಿಳಿಸಲಾಯಿತು’ ಎಂದು ಮಧುಲಿಕಾ ಹೇಳಿದರು.

ಡಾ. ಪ್ರಿಯಾಂಕ ಮಂತಗಿ ಆಗತಾನೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ವಿಷಯ ತಿಳಿದ ತಕ್ಷಣ ‘ಹೆದರಬೇಡಿ. ಈಗಾಗಲೇ ಹೆರಿಗೆ ಆಗಿರುವುದರಿಂದ ಹೆಚ್ಚು ತಡಮಾಡದೇ ಹೊಕ್ಕುಳಬಳ್ಳಿ ಕತ್ತರಿಸಿ. ಎರಡೂ ಬದಿಯಲ್ಲಿ ಸ್ವಲ್ಪ ಜಾಗ ಬಿಟ್ಟು ಕತ್ತರಿಸಿದಾಗ ಹೆಚ್ಚು ರಕ್ತಸ್ರಾವವಾಗದಂತೆ ಎರಡು ಕಡೆ ಕಟ್ಟಬೇಕು. ನಂತರ ಮಧ್ಯದಲ್ಲಿ ಕತ್ತರಿಸ ಬೇಕು. ಇಲ್ಲದಿದ್ದರೆ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯ’ ಎಂದು ವೈದ್ಯರು ವೀಡಿಯೋ ಕರೆಯಲ್ಲಿಯೇ ಮಾರ್ಗದರ್ಶನ ಮಾಡಿದ್ದಾರೆ.

ಮಧುಲಿಕಾ ವೈದ್ಯರ ನಿರ್ದೇಶನದ ಮೇರೆಗೆ, ವಿಜಯಲಕ್ಷ್ಮಿ ಜೋಶಿ, ಮಾಧುರಿ ಕಾಮನಹಳ್ಳಿ, ಮುಕ್ತಾ ಕಾಮನಹಳ್ಳಿ ಮತ್ತು ಶಿವಲೀಲಾ ಪಟ್ಟಾರ್ ಅವರ ಸಹಾಯದೊಂದಿಗೆ ಗ್ಲೌಸ್ ಮತ್ತು ಮಾಸ್ಕ್ ಹಾಕಿಕೊಂಡು, ಹೊಸದಾದ ಬ್ಲೇಡ್ ನಿಂದ ಹೊಕ್ಕುಳಬಳ್ಳಿ ಕತ್ತರಿಸಿ, ಮಗು ಮತ್ತು ತಾಯಿಯನ್ನು ರಕ್ಷಿಸಿದ್ದಾರೆ.

ನಂತರ ಮಗುವನ್ನು ಸ್ವಚ್ಚಗೊಳಿಸಿ, ಬೆಚ್ಚಗಿನ ಬಟ್ಟೆಯಲ್ಲಿ ಹೊದಿಸಿ, ತಾಯಿಗೆ ಹಾಲುಣಿಸಲು ಹೇಳಿದರು. ಅಷ್ಟರಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಬಂದಿತ್ತು.

ಈಗ ವಾಸವಿಯವರ ತವರೂರಾದ ನವಲಗುಂದದಲ್ಲಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.


ಇದನ್ನೂ ಓದಿ: ರಫೇಲ್ ಒಂದು ಗೇಮ್ ಚೇಂಜರ್, ಚೀನಾದ ಜೆ20 ಇದಕ್ಕೆ ಸಮವಲ್ಲ: ಮಾಜಿ ವಾಯುದಳ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...