Homeಕರ್ನಾಟಕವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಎಲ್ಲಾ ಕೆಲಸಗಳೂ ಆನ್‌ಲೈನ್‌ನಲ್ಲೇ ನಡೆಯುತ್ತಿರುವ  ಇಂಥಾ ಸಂದರ್ಭದಲ್ಲಿ ಹೆರಿಗೆಯು ಸಹ ಆನ್‌ಲೈನ್‌ ಸಹಾಯದಲ್ಲೇ ನಡೆದ ಅಪರೂಪದ ಪ್ರಕರಣ ಹಾವೇರಿಯಲ್ಲಿ ವರದಿಯಾಗಿದೆ.

ಕಳೆದ ಭಾನುವಾರ ವಾಸವಿ ಫಟ್ಟೆಪುರ ಎಂಬ ಮಹಿಳೆಗೆ ನಿಗದಿತ ದಿನಾಂಕಕ್ಕೆ ಮೊದಲೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರ ಪತಿ ರಾಘವೇಂದ್ರ ವಾಹನ ತರಲು ಹೋದವನು ಬರುವುದಕ್ಕೆ ತಡವಾಗಿದೆ.  ಅಂದು ವಾರಾಂತ್ಯ ಲಾಕ್ ಡೌನ್ ಇದ್ದಿದ್ದರಿಂದ ಯಾವುದೇ ಖಾಸಗೀ ವಾಹನಗಳು ಸಿಗಲಿಲ್ಲ. ನಂತರ ಮನೆಯಲ್ಲಿದ್ದವರು ಸಹಾಯಕ್ಕಾಗಿ ನೆರೆಯವರನ್ನು ಕೂಗಿದ್ದಾರೆ. ಆದರೆ ಅವರು ಬರುವುದರೊಳಗಾಗಿ ಮನೆಯಲ್ಲಿಯೇ ಹೆರಿಗೆ ಆಗಿತ್ತು ಎಂದು ನೆರೆಮನೆಯ ಮಧುಲಿಕಾ ದೇಸಾಯಿ ನಾನುಗೌರಿಗೆ ತಿಳಿಸಿದರು.

ನಂತರ ಅವರ ಪತಿ ಆಂಬುಲೆನ್ಸ್ ಗೆ ಕರೆ ಮಾಡಿದಾಗ, ಕೊರೊನಾ ಕರ್ತವ್ಯದಲ್ಲಿರುವುದಾಗಿಯೂ, ಬರುವುದಕ್ಕೆ 30-40 ನಿಮಿಷ ಆಗುತ್ತದೆ ಎಂದು ಮಧುಲಿಕಾ ಹೇಳಿದರು.

‘ನಾನು ಬಂದು ನೋಡಿದಾಗ ತಾಯಿ ಮತ್ತು ಮಗು ನೆಲದ ಮೇಲೆ ಮಲಗಿದ್ದರು. ನನಗೆ ಏನು ಮಾಡಬೆಕೆಂದು ತೋಚಲಿಲ್ಲ. ಮಗು ಮತ್ತು ತಾಯಿಯ ಜೀವ ಕಾಪಾಡಬೇಕಾಗಿದ್ದರಿಂದ, ನಮ್ಮದೇ ಬೀದಿಯ ಪ್ರಿಯಾಂಕ ಎನ್ನುವ ವೈದ್ಯೆಯೊಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದು ನೆನಪಿಗೆ ಬಂದು ತಕ್ಷಣ ಅವರಿಗೆ ವೀಡಿಯೋ ಕರೆ ಮಾಡಿ ಪರಿಸ್ಥಿತಿ ತಿಳಿಸಲಾಯಿತು’ ಎಂದು ಮಧುಲಿಕಾ ಹೇಳಿದರು.

ಡಾ. ಪ್ರಿಯಾಂಕ ಮಂತಗಿ ಆಗತಾನೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ವಿಷಯ ತಿಳಿದ ತಕ್ಷಣ ‘ಹೆದರಬೇಡಿ. ಈಗಾಗಲೇ ಹೆರಿಗೆ ಆಗಿರುವುದರಿಂದ ಹೆಚ್ಚು ತಡಮಾಡದೇ ಹೊಕ್ಕುಳಬಳ್ಳಿ ಕತ್ತರಿಸಿ. ಎರಡೂ ಬದಿಯಲ್ಲಿ ಸ್ವಲ್ಪ ಜಾಗ ಬಿಟ್ಟು ಕತ್ತರಿಸಿದಾಗ ಹೆಚ್ಚು ರಕ್ತಸ್ರಾವವಾಗದಂತೆ ಎರಡು ಕಡೆ ಕಟ್ಟಬೇಕು. ನಂತರ ಮಧ್ಯದಲ್ಲಿ ಕತ್ತರಿಸ ಬೇಕು. ಇಲ್ಲದಿದ್ದರೆ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯ’ ಎಂದು ವೈದ್ಯರು ವೀಡಿಯೋ ಕರೆಯಲ್ಲಿಯೇ ಮಾರ್ಗದರ್ಶನ ಮಾಡಿದ್ದಾರೆ.

ಮಧುಲಿಕಾ ವೈದ್ಯರ ನಿರ್ದೇಶನದ ಮೇರೆಗೆ, ವಿಜಯಲಕ್ಷ್ಮಿ ಜೋಶಿ, ಮಾಧುರಿ ಕಾಮನಹಳ್ಳಿ, ಮುಕ್ತಾ ಕಾಮನಹಳ್ಳಿ ಮತ್ತು ಶಿವಲೀಲಾ ಪಟ್ಟಾರ್ ಅವರ ಸಹಾಯದೊಂದಿಗೆ ಗ್ಲೌಸ್ ಮತ್ತು ಮಾಸ್ಕ್ ಹಾಕಿಕೊಂಡು, ಹೊಸದಾದ ಬ್ಲೇಡ್ ನಿಂದ ಹೊಕ್ಕುಳಬಳ್ಳಿ ಕತ್ತರಿಸಿ, ಮಗು ಮತ್ತು ತಾಯಿಯನ್ನು ರಕ್ಷಿಸಿದ್ದಾರೆ.

ನಂತರ ಮಗುವನ್ನು ಸ್ವಚ್ಚಗೊಳಿಸಿ, ಬೆಚ್ಚಗಿನ ಬಟ್ಟೆಯಲ್ಲಿ ಹೊದಿಸಿ, ತಾಯಿಗೆ ಹಾಲುಣಿಸಲು ಹೇಳಿದರು. ಅಷ್ಟರಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಬಂದಿತ್ತು.

ಈಗ ವಾಸವಿಯವರ ತವರೂರಾದ ನವಲಗುಂದದಲ್ಲಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.


ಇದನ್ನೂ ಓದಿ: ರಫೇಲ್ ಒಂದು ಗೇಮ್ ಚೇಂಜರ್, ಚೀನಾದ ಜೆ20 ಇದಕ್ಕೆ ಸಮವಲ್ಲ: ಮಾಜಿ ವಾಯುದಳ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...