Homeಕರ್ನಾಟಕವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಎಲ್ಲಾ ಕೆಲಸಗಳೂ ಆನ್‌ಲೈನ್‌ನಲ್ಲೇ ನಡೆಯುತ್ತಿರುವ  ಇಂಥಾ ಸಂದರ್ಭದಲ್ಲಿ ಹೆರಿಗೆಯು ಸಹ ಆನ್‌ಲೈನ್‌ ಸಹಾಯದಲ್ಲೇ ನಡೆದ ಅಪರೂಪದ ಪ್ರಕರಣ ಹಾವೇರಿಯಲ್ಲಿ ವರದಿಯಾಗಿದೆ.

ಕಳೆದ ಭಾನುವಾರ ವಾಸವಿ ಫಟ್ಟೆಪುರ ಎಂಬ ಮಹಿಳೆಗೆ ನಿಗದಿತ ದಿನಾಂಕಕ್ಕೆ ಮೊದಲೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರ ಪತಿ ರಾಘವೇಂದ್ರ ವಾಹನ ತರಲು ಹೋದವನು ಬರುವುದಕ್ಕೆ ತಡವಾಗಿದೆ.  ಅಂದು ವಾರಾಂತ್ಯ ಲಾಕ್ ಡೌನ್ ಇದ್ದಿದ್ದರಿಂದ ಯಾವುದೇ ಖಾಸಗೀ ವಾಹನಗಳು ಸಿಗಲಿಲ್ಲ. ನಂತರ ಮನೆಯಲ್ಲಿದ್ದವರು ಸಹಾಯಕ್ಕಾಗಿ ನೆರೆಯವರನ್ನು ಕೂಗಿದ್ದಾರೆ. ಆದರೆ ಅವರು ಬರುವುದರೊಳಗಾಗಿ ಮನೆಯಲ್ಲಿಯೇ ಹೆರಿಗೆ ಆಗಿತ್ತು ಎಂದು ನೆರೆಮನೆಯ ಮಧುಲಿಕಾ ದೇಸಾಯಿ ನಾನುಗೌರಿಗೆ ತಿಳಿಸಿದರು.

ನಂತರ ಅವರ ಪತಿ ಆಂಬುಲೆನ್ಸ್ ಗೆ ಕರೆ ಮಾಡಿದಾಗ, ಕೊರೊನಾ ಕರ್ತವ್ಯದಲ್ಲಿರುವುದಾಗಿಯೂ, ಬರುವುದಕ್ಕೆ 30-40 ನಿಮಿಷ ಆಗುತ್ತದೆ ಎಂದು ಮಧುಲಿಕಾ ಹೇಳಿದರು.

‘ನಾನು ಬಂದು ನೋಡಿದಾಗ ತಾಯಿ ಮತ್ತು ಮಗು ನೆಲದ ಮೇಲೆ ಮಲಗಿದ್ದರು. ನನಗೆ ಏನು ಮಾಡಬೆಕೆಂದು ತೋಚಲಿಲ್ಲ. ಮಗು ಮತ್ತು ತಾಯಿಯ ಜೀವ ಕಾಪಾಡಬೇಕಾಗಿದ್ದರಿಂದ, ನಮ್ಮದೇ ಬೀದಿಯ ಪ್ರಿಯಾಂಕ ಎನ್ನುವ ವೈದ್ಯೆಯೊಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದು ನೆನಪಿಗೆ ಬಂದು ತಕ್ಷಣ ಅವರಿಗೆ ವೀಡಿಯೋ ಕರೆ ಮಾಡಿ ಪರಿಸ್ಥಿತಿ ತಿಳಿಸಲಾಯಿತು’ ಎಂದು ಮಧುಲಿಕಾ ಹೇಳಿದರು.

ಡಾ. ಪ್ರಿಯಾಂಕ ಮಂತಗಿ ಆಗತಾನೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ವಿಷಯ ತಿಳಿದ ತಕ್ಷಣ ‘ಹೆದರಬೇಡಿ. ಈಗಾಗಲೇ ಹೆರಿಗೆ ಆಗಿರುವುದರಿಂದ ಹೆಚ್ಚು ತಡಮಾಡದೇ ಹೊಕ್ಕುಳಬಳ್ಳಿ ಕತ್ತರಿಸಿ. ಎರಡೂ ಬದಿಯಲ್ಲಿ ಸ್ವಲ್ಪ ಜಾಗ ಬಿಟ್ಟು ಕತ್ತರಿಸಿದಾಗ ಹೆಚ್ಚು ರಕ್ತಸ್ರಾವವಾಗದಂತೆ ಎರಡು ಕಡೆ ಕಟ್ಟಬೇಕು. ನಂತರ ಮಧ್ಯದಲ್ಲಿ ಕತ್ತರಿಸ ಬೇಕು. ಇಲ್ಲದಿದ್ದರೆ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯ’ ಎಂದು ವೈದ್ಯರು ವೀಡಿಯೋ ಕರೆಯಲ್ಲಿಯೇ ಮಾರ್ಗದರ್ಶನ ಮಾಡಿದ್ದಾರೆ.

ಮಧುಲಿಕಾ ವೈದ್ಯರ ನಿರ್ದೇಶನದ ಮೇರೆಗೆ, ವಿಜಯಲಕ್ಷ್ಮಿ ಜೋಶಿ, ಮಾಧುರಿ ಕಾಮನಹಳ್ಳಿ, ಮುಕ್ತಾ ಕಾಮನಹಳ್ಳಿ ಮತ್ತು ಶಿವಲೀಲಾ ಪಟ್ಟಾರ್ ಅವರ ಸಹಾಯದೊಂದಿಗೆ ಗ್ಲೌಸ್ ಮತ್ತು ಮಾಸ್ಕ್ ಹಾಕಿಕೊಂಡು, ಹೊಸದಾದ ಬ್ಲೇಡ್ ನಿಂದ ಹೊಕ್ಕುಳಬಳ್ಳಿ ಕತ್ತರಿಸಿ, ಮಗು ಮತ್ತು ತಾಯಿಯನ್ನು ರಕ್ಷಿಸಿದ್ದಾರೆ.

ನಂತರ ಮಗುವನ್ನು ಸ್ವಚ್ಚಗೊಳಿಸಿ, ಬೆಚ್ಚಗಿನ ಬಟ್ಟೆಯಲ್ಲಿ ಹೊದಿಸಿ, ತಾಯಿಗೆ ಹಾಲುಣಿಸಲು ಹೇಳಿದರು. ಅಷ್ಟರಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಬಂದಿತ್ತು.

ಈಗ ವಾಸವಿಯವರ ತವರೂರಾದ ನವಲಗುಂದದಲ್ಲಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.


ಇದನ್ನೂ ಓದಿ: ರಫೇಲ್ ಒಂದು ಗೇಮ್ ಚೇಂಜರ್, ಚೀನಾದ ಜೆ20 ಇದಕ್ಕೆ ಸಮವಲ್ಲ: ಮಾಜಿ ವಾಯುದಳ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....