Homeಕರ್ನಾಟಕವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ವೀಡಿಯೋ ಕರೆಯ ಮೂಲಕ ವೈದ್ಯರ ಮಾರ್ಗದರ್ಶನದಿಂದ ಯಶಸ್ವಿ ಹೆರಿಗೆ ಪ್ರಕ್ರಿಯೆ!

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.

- Advertisement -
- Advertisement -

ಎಲ್ಲಾ ಕೆಲಸಗಳೂ ಆನ್‌ಲೈನ್‌ನಲ್ಲೇ ನಡೆಯುತ್ತಿರುವ  ಇಂಥಾ ಸಂದರ್ಭದಲ್ಲಿ ಹೆರಿಗೆಯು ಸಹ ಆನ್‌ಲೈನ್‌ ಸಹಾಯದಲ್ಲೇ ನಡೆದ ಅಪರೂಪದ ಪ್ರಕರಣ ಹಾವೇರಿಯಲ್ಲಿ ವರದಿಯಾಗಿದೆ.

ಕಳೆದ ಭಾನುವಾರ ವಾಸವಿ ಫಟ್ಟೆಪುರ ಎಂಬ ಮಹಿಳೆಗೆ ನಿಗದಿತ ದಿನಾಂಕಕ್ಕೆ ಮೊದಲೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಅವರ ಪತಿ ರಾಘವೇಂದ್ರ ವಾಹನ ತರಲು ಹೋದವನು ಬರುವುದಕ್ಕೆ ತಡವಾಗಿದೆ.  ಅಂದು ವಾರಾಂತ್ಯ ಲಾಕ್ ಡೌನ್ ಇದ್ದಿದ್ದರಿಂದ ಯಾವುದೇ ಖಾಸಗೀ ವಾಹನಗಳು ಸಿಗಲಿಲ್ಲ. ನಂತರ ಮನೆಯಲ್ಲಿದ್ದವರು ಸಹಾಯಕ್ಕಾಗಿ ನೆರೆಯವರನ್ನು ಕೂಗಿದ್ದಾರೆ. ಆದರೆ ಅವರು ಬರುವುದರೊಳಗಾಗಿ ಮನೆಯಲ್ಲಿಯೇ ಹೆರಿಗೆ ಆಗಿತ್ತು ಎಂದು ನೆರೆಮನೆಯ ಮಧುಲಿಕಾ ದೇಸಾಯಿ ನಾನುಗೌರಿಗೆ ತಿಳಿಸಿದರು.

ನಂತರ ಅವರ ಪತಿ ಆಂಬುಲೆನ್ಸ್ ಗೆ ಕರೆ ಮಾಡಿದಾಗ, ಕೊರೊನಾ ಕರ್ತವ್ಯದಲ್ಲಿರುವುದಾಗಿಯೂ, ಬರುವುದಕ್ಕೆ 30-40 ನಿಮಿಷ ಆಗುತ್ತದೆ ಎಂದು ಮಧುಲಿಕಾ ಹೇಳಿದರು.

‘ನಾನು ಬಂದು ನೋಡಿದಾಗ ತಾಯಿ ಮತ್ತು ಮಗು ನೆಲದ ಮೇಲೆ ಮಲಗಿದ್ದರು. ನನಗೆ ಏನು ಮಾಡಬೆಕೆಂದು ತೋಚಲಿಲ್ಲ. ಮಗು ಮತ್ತು ತಾಯಿಯ ಜೀವ ಕಾಪಾಡಬೇಕಾಗಿದ್ದರಿಂದ, ನಮ್ಮದೇ ಬೀದಿಯ ಪ್ರಿಯಾಂಕ ಎನ್ನುವ ವೈದ್ಯೆಯೊಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದುದು ನೆನಪಿಗೆ ಬಂದು ತಕ್ಷಣ ಅವರಿಗೆ ವೀಡಿಯೋ ಕರೆ ಮಾಡಿ ಪರಿಸ್ಥಿತಿ ತಿಳಿಸಲಾಯಿತು’ ಎಂದು ಮಧುಲಿಕಾ ಹೇಳಿದರು.

ಡಾ. ಪ್ರಿಯಾಂಕ ಮಂತಗಿ ಆಗತಾನೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ವಿಷಯ ತಿಳಿದ ತಕ್ಷಣ ‘ಹೆದರಬೇಡಿ. ಈಗಾಗಲೇ ಹೆರಿಗೆ ಆಗಿರುವುದರಿಂದ ಹೆಚ್ಚು ತಡಮಾಡದೇ ಹೊಕ್ಕುಳಬಳ್ಳಿ ಕತ್ತರಿಸಿ. ಎರಡೂ ಬದಿಯಲ್ಲಿ ಸ್ವಲ್ಪ ಜಾಗ ಬಿಟ್ಟು ಕತ್ತರಿಸಿದಾಗ ಹೆಚ್ಚು ರಕ್ತಸ್ರಾವವಾಗದಂತೆ ಎರಡು ಕಡೆ ಕಟ್ಟಬೇಕು. ನಂತರ ಮಧ್ಯದಲ್ಲಿ ಕತ್ತರಿಸ ಬೇಕು. ಇಲ್ಲದಿದ್ದರೆ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯ’ ಎಂದು ವೈದ್ಯರು ವೀಡಿಯೋ ಕರೆಯಲ್ಲಿಯೇ ಮಾರ್ಗದರ್ಶನ ಮಾಡಿದ್ದಾರೆ.

ಮಧುಲಿಕಾ ವೈದ್ಯರ ನಿರ್ದೇಶನದ ಮೇರೆಗೆ, ವಿಜಯಲಕ್ಷ್ಮಿ ಜೋಶಿ, ಮಾಧುರಿ ಕಾಮನಹಳ್ಳಿ, ಮುಕ್ತಾ ಕಾಮನಹಳ್ಳಿ ಮತ್ತು ಶಿವಲೀಲಾ ಪಟ್ಟಾರ್ ಅವರ ಸಹಾಯದೊಂದಿಗೆ ಗ್ಲೌಸ್ ಮತ್ತು ಮಾಸ್ಕ್ ಹಾಕಿಕೊಂಡು, ಹೊಸದಾದ ಬ್ಲೇಡ್ ನಿಂದ ಹೊಕ್ಕುಳಬಳ್ಳಿ ಕತ್ತರಿಸಿ, ಮಗು ಮತ್ತು ತಾಯಿಯನ್ನು ರಕ್ಷಿಸಿದ್ದಾರೆ.

ನಂತರ ಮಗುವನ್ನು ಸ್ವಚ್ಚಗೊಳಿಸಿ, ಬೆಚ್ಚಗಿನ ಬಟ್ಟೆಯಲ್ಲಿ ಹೊದಿಸಿ, ತಾಯಿಗೆ ಹಾಲುಣಿಸಲು ಹೇಳಿದರು. ಅಷ್ಟರಲ್ಲಿ ಸ್ಥಳಕ್ಕೆ ಆಂಬುಲೆನ್ಸ್ ಬಂದಿತ್ತು.

ಈಗ ವಾಸವಿಯವರ ತವರೂರಾದ ನವಲಗುಂದದಲ್ಲಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಮಹತ್ವದ ಕೆಲಸ ಮಾಡಿದ್ದಕ್ಕಾಗಿ ವೈದ್ಯರು ಮತ್ತು ನೆರಯವರಾದ ಮಧುಲಿಕಾ ದೇಸಾಯಿಯವರು ಅಭಿನಂದನೆಗೆ ಪಾತ್ರರಾಗಿದ್ದಾರೆ.


ಇದನ್ನೂ ಓದಿ: ರಫೇಲ್ ಒಂದು ಗೇಮ್ ಚೇಂಜರ್, ಚೀನಾದ ಜೆ20 ಇದಕ್ಕೆ ಸಮವಲ್ಲ: ಮಾಜಿ ವಾಯುದಳ ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...