Homeಕರ್ನಾಟಕಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

ಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

- Advertisement -
- Advertisement -

ಗಣಪತಿ ಮತ್ತು ದಸರಾ ಹಬ್ಬಕ್ಕೆಂದು ತುಮಕೂರು ನಗರದಾದ್ಯಂತ ರಸ್ತೆಗಳಲ್ಲಿ ಅಳವಡಿಸಿದ್ದ ಕೇಸರಿ ಬ್ಯಾನರ್ ಗಳ ಮತ್ತು ಬಂಟಿಂಗ್ ತೆರವುಗೊಳಿಸಲು ಹೋದ ಪೌರ ಕಾರ್ಮಿಕರೊಬ್ಬರು ಮೃತಪ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹದಿನೈದನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಟೌನ್ ಹಾಲ್ ಸರ್ಕಲ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಕೇಸರಿ ಬ್ಯಾನರ್ ಮತ್ತು ಬಂಟಿಂಗ್ ಬಿಚ್ಚುವಾಗ ಘಟನೆ ನಡೆದಿದೆ. ವಾರ್ಡ್ ನ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಸೂಚನೆ ಮೇರೆಗೆ ಪೌರ ಕಾರ್ಮಿಕ ನರಸಿಂಹಯ್ಯ (34)ಗೆ ಬ್ಯಾನರ್ ಬಿಚ್ಚಿಸುವ ವೇಳೆ ವಿದ್ಯುತ್ ಪ್ರವಹಿಸಿ ದುರಂತ ನಡೆದಿದೆ.

ಗಮ್ ಬೂಟ್ ಮತ್ತು ಕೈಗ್ಲೌಸು ನೀಡದೆಯೇ ಕಬ್ಬಿಣದ ಸಲಾಕೆ ನೀಡಿ ಬ್ಯಾನರ್ ಬಿಚ್ಚುವಂತೆ ಹೇಳಲಾಗಿದೆ. ಹೀಗಾಗಿ ನರಸಿಂಹಯ್ಯ ಕಬ್ಬಿಣದ ಸಲಾಕೆಯಿಂದ ಬ್ಯಾನರ್ ಕೀಳುತ್ತಿದ್ದಂತೆಯೇ ಕಬ್ಬಿಣದ ರಾಡು ಹೈಟೆನ್ಷನ್ ವೈರ್ ಗೆ ತಗುಲಿ ವಿದ್ಯುತ್ ಪ್ರವಹಿಸಿ ಪೌರ ಕಾರ್ಮಿಕ ನರಸಿಂಹಯ್ಯ ರಸ್ತೆಗೆ ಬಿದ್ದಿದ್ದಾನೆ. ಅಲ್ಲಿಯೇ ಇದ್ದ ಇತರೆ ಪೌರ ಕಾರ್ಮಿಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ನರಸಿಂಹಯ್ಯ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಬ್ಯಾನರ್ ಮತ್ತು ಬಂಟಿಂಗ್ ಕಟ್ಟಿದವರೇ ಅವುಗಳನ್ನು ತೆರವುಗೊಳಿಸಬೇಕು ಎಂಬ ನಿಯಮವಿದೆ. ಆದರೆ ಕೇಸರಿ ಬ್ಯಾನರ್ ಮತ್ತು ಕೇಸರಿ ಬಂಟಿಂಗ್ ಅಳವಡಿಸಲೂ ಸಹ ಅನುಮತಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಕೇಸರಿ ಬ್ಯಾನರ್ ತೆರವುಗೊಳಿಸುವಂತೆ ನರಸಿಂಹಯ್ಯರಿಗೆ ಹೇಳಿದಾಗ ಈ ಘಟನೆ ನಡೆದಿದ್ದು ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಯಾವುದೇ ತರಬೇತಿ ನೀಡದೆ ಹಂದಿ ಹಿಡಿಯಲು, ಚರಂಡಿ ಮತ್ತು ಮ್ಯಾನ್ ಹೋಲ್ ಸ್ವಚ್ಛಗೊಳಿಸಲು, ಮರದ ಕೊಂಬೆಗಳನ್ನು ಕತ್ತರಿಸಲು ಮತ್ತು ವಿದ್ಯುತ್ ಕಂಬಕ್ಕೆ ಕಟ್ಟಿರುವ ಬ್ಯಾನರ್ ಗಳನ್ನು ತೆರವುಗೊಳಿಸಲು ಪೌರ ಕಾರ್ಮಿಕರನ್ನು ಬಳಸಿಕೊಳ್ಳುತ್ತಾರೆ ಎಂದು ಕಾರ್ಮಿಕ ಮುಖಂಡರು ಆರೋಪಿಸಿದ್ದಾರೆ. ಕಾಲಿಗೆ ಗಮ್ ಬೂಟ್ ಮತ್ತು ಕೈಗಳಿಗೆ ಕೈಗ್ಲೌಸು ನೀಡಬೇಕು. ಅದರೆ ಯಾವುದೇ ಸುರಕ್ಷತಾ ಸಲಕರಣೆ ನೀಡದೆ ಕೆಲಸ ಮಾಡಿಸುತ್ತಾರೆ. ಸುರಕ್ಷತಾ ಸಲಕರಣೆ ನೀಡುವಂತೆ ಎರಡು ಬಾರಿ ಮನವಿ ಮಾಡಿದ್ದರೂ ಗಮನಹರಿಸಿಲ್ಲ ಎಂದು ಕಾರ್ಮಿಕರು ದೂರಿದ್ದಾರೆ.

ನೇರ ಪಾವತಿಯಡಿ ನರಸಿಂಹಯ್ಯ ಪೌರ ಕಾರ್ಮಿಕರಾಗಿ ನೇಮಕಗೊಂಡಿದ್ದರು. ಅವರು ಮೃತಪಟ್ಟ ಹಿನ್ನೆಲೆ ಕೆಲಸವನ್ನು ಸ್ಥಗಿತಗೊಳಿಸಿದ ಎಲ್ಲಾ ಪೌರ ಕಾರ್ಮಿಕರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಶವ ಎತ್ತದಂತೆ ತಡೆದದ್ದರಿಂದ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್‌, ನಗರ ಪಾಲಿಕೆ ಹಂಗಾಮಿ ಆಯುಕ್ತರು, ಮೇಯರ್ ಮತ್ತು ಉಪಮೇಯರ್ ಸ್ಥಳಕ್ಕೆ ಬಂದು ಸಭೆ ನಡೆಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವಂತೆ ಪೌರ ಕಾರ್ಮಿಕರು ಪಟ್ಟು ಹಿಡಿದರು. ಹೀಗಾಗಿ ಪಾಲಿಕೆ ಮತ್ತು ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಲಾಯಿತು.

ಮೃತನ ಪತ್ನಿಗೆ ನೇರ ಪಾವತಿಯಡಿ ಉದ್ಯೋಗ ನೀಡುವುದು ಮತ್ತು ದಿಬ್ಬೂರಿನಲ್ಲಿ ಒಂದು ಮನೆ ಕೊಡುವ ಭರವಸೆ ನೀಡಿದ ನಂತರ ಶವ ತೆಗೆಯಲು ಅವಕಾಶ ಮಾಡಿ ಕೊಡಲಾಯಿತು. ತುಮಕೂರಿನಲ್ಲಿ ಇದು ಎರಡನೇ ಘಟನೆಯಾಗಿದ್ದು ಈ ಬಗ್ಗೆ ಪಾಲಿಕೆಯ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಐಟಿಯು ಪೌರ ಕಾರ್ಮಿಕರ ಸಂಘ ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನಮ್ಮ ಹೆಮ್ಮೆಯ ದೇಶದಲ್ಲಿ, ಬಡವರ ಜೀವಕ್ಕೆ ಬೆಲೆಯೇ ಇಲ್ಲ. ಇಂತಹ ಪರಿಸ್ಥಿತಿ ಕೊನೆಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...