Homeಕರ್ನಾಟಕಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

ಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

- Advertisement -
- Advertisement -

ಗಣಪತಿ ಮತ್ತು ದಸರಾ ಹಬ್ಬಕ್ಕೆಂದು ತುಮಕೂರು ನಗರದಾದ್ಯಂತ ರಸ್ತೆಗಳಲ್ಲಿ ಅಳವಡಿಸಿದ್ದ ಕೇಸರಿ ಬ್ಯಾನರ್ ಗಳ ಮತ್ತು ಬಂಟಿಂಗ್ ತೆರವುಗೊಳಿಸಲು ಹೋದ ಪೌರ ಕಾರ್ಮಿಕರೊಬ್ಬರು ಮೃತಪ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹದಿನೈದನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಟೌನ್ ಹಾಲ್ ಸರ್ಕಲ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಕೇಸರಿ ಬ್ಯಾನರ್ ಮತ್ತು ಬಂಟಿಂಗ್ ಬಿಚ್ಚುವಾಗ ಘಟನೆ ನಡೆದಿದೆ. ವಾರ್ಡ್ ನ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಸೂಚನೆ ಮೇರೆಗೆ ಪೌರ ಕಾರ್ಮಿಕ ನರಸಿಂಹಯ್ಯ (34)ಗೆ ಬ್ಯಾನರ್ ಬಿಚ್ಚಿಸುವ ವೇಳೆ ವಿದ್ಯುತ್ ಪ್ರವಹಿಸಿ ದುರಂತ ನಡೆದಿದೆ.

ಗಮ್ ಬೂಟ್ ಮತ್ತು ಕೈಗ್ಲೌಸು ನೀಡದೆಯೇ ಕಬ್ಬಿಣದ ಸಲಾಕೆ ನೀಡಿ ಬ್ಯಾನರ್ ಬಿಚ್ಚುವಂತೆ ಹೇಳಲಾಗಿದೆ. ಹೀಗಾಗಿ ನರಸಿಂಹಯ್ಯ ಕಬ್ಬಿಣದ ಸಲಾಕೆಯಿಂದ ಬ್ಯಾನರ್ ಕೀಳುತ್ತಿದ್ದಂತೆಯೇ ಕಬ್ಬಿಣದ ರಾಡು ಹೈಟೆನ್ಷನ್ ವೈರ್ ಗೆ ತಗುಲಿ ವಿದ್ಯುತ್ ಪ್ರವಹಿಸಿ ಪೌರ ಕಾರ್ಮಿಕ ನರಸಿಂಹಯ್ಯ ರಸ್ತೆಗೆ ಬಿದ್ದಿದ್ದಾನೆ. ಅಲ್ಲಿಯೇ ಇದ್ದ ಇತರೆ ಪೌರ ಕಾರ್ಮಿಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ನರಸಿಂಹಯ್ಯ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಬ್ಯಾನರ್ ಮತ್ತು ಬಂಟಿಂಗ್ ಕಟ್ಟಿದವರೇ ಅವುಗಳನ್ನು ತೆರವುಗೊಳಿಸಬೇಕು ಎಂಬ ನಿಯಮವಿದೆ. ಆದರೆ ಕೇಸರಿ ಬ್ಯಾನರ್ ಮತ್ತು ಕೇಸರಿ ಬಂಟಿಂಗ್ ಅಳವಡಿಸಲೂ ಸಹ ಅನುಮತಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಕೇಸರಿ ಬ್ಯಾನರ್ ತೆರವುಗೊಳಿಸುವಂತೆ ನರಸಿಂಹಯ್ಯರಿಗೆ ಹೇಳಿದಾಗ ಈ ಘಟನೆ ನಡೆದಿದ್ದು ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಯಾವುದೇ ತರಬೇತಿ ನೀಡದೆ ಹಂದಿ ಹಿಡಿಯಲು, ಚರಂಡಿ ಮತ್ತು ಮ್ಯಾನ್ ಹೋಲ್ ಸ್ವಚ್ಛಗೊಳಿಸಲು, ಮರದ ಕೊಂಬೆಗಳನ್ನು ಕತ್ತರಿಸಲು ಮತ್ತು ವಿದ್ಯುತ್ ಕಂಬಕ್ಕೆ ಕಟ್ಟಿರುವ ಬ್ಯಾನರ್ ಗಳನ್ನು ತೆರವುಗೊಳಿಸಲು ಪೌರ ಕಾರ್ಮಿಕರನ್ನು ಬಳಸಿಕೊಳ್ಳುತ್ತಾರೆ ಎಂದು ಕಾರ್ಮಿಕ ಮುಖಂಡರು ಆರೋಪಿಸಿದ್ದಾರೆ. ಕಾಲಿಗೆ ಗಮ್ ಬೂಟ್ ಮತ್ತು ಕೈಗಳಿಗೆ ಕೈಗ್ಲೌಸು ನೀಡಬೇಕು. ಅದರೆ ಯಾವುದೇ ಸುರಕ್ಷತಾ ಸಲಕರಣೆ ನೀಡದೆ ಕೆಲಸ ಮಾಡಿಸುತ್ತಾರೆ. ಸುರಕ್ಷತಾ ಸಲಕರಣೆ ನೀಡುವಂತೆ ಎರಡು ಬಾರಿ ಮನವಿ ಮಾಡಿದ್ದರೂ ಗಮನಹರಿಸಿಲ್ಲ ಎಂದು ಕಾರ್ಮಿಕರು ದೂರಿದ್ದಾರೆ.

ನೇರ ಪಾವತಿಯಡಿ ನರಸಿಂಹಯ್ಯ ಪೌರ ಕಾರ್ಮಿಕರಾಗಿ ನೇಮಕಗೊಂಡಿದ್ದರು. ಅವರು ಮೃತಪಟ್ಟ ಹಿನ್ನೆಲೆ ಕೆಲಸವನ್ನು ಸ್ಥಗಿತಗೊಳಿಸಿದ ಎಲ್ಲಾ ಪೌರ ಕಾರ್ಮಿಕರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಶವ ಎತ್ತದಂತೆ ತಡೆದದ್ದರಿಂದ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್‌, ನಗರ ಪಾಲಿಕೆ ಹಂಗಾಮಿ ಆಯುಕ್ತರು, ಮೇಯರ್ ಮತ್ತು ಉಪಮೇಯರ್ ಸ್ಥಳಕ್ಕೆ ಬಂದು ಸಭೆ ನಡೆಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವಂತೆ ಪೌರ ಕಾರ್ಮಿಕರು ಪಟ್ಟು ಹಿಡಿದರು. ಹೀಗಾಗಿ ಪಾಲಿಕೆ ಮತ್ತು ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಲಾಯಿತು.

ಮೃತನ ಪತ್ನಿಗೆ ನೇರ ಪಾವತಿಯಡಿ ಉದ್ಯೋಗ ನೀಡುವುದು ಮತ್ತು ದಿಬ್ಬೂರಿನಲ್ಲಿ ಒಂದು ಮನೆ ಕೊಡುವ ಭರವಸೆ ನೀಡಿದ ನಂತರ ಶವ ತೆಗೆಯಲು ಅವಕಾಶ ಮಾಡಿ ಕೊಡಲಾಯಿತು. ತುಮಕೂರಿನಲ್ಲಿ ಇದು ಎರಡನೇ ಘಟನೆಯಾಗಿದ್ದು ಈ ಬಗ್ಗೆ ಪಾಲಿಕೆಯ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಐಟಿಯು ಪೌರ ಕಾರ್ಮಿಕರ ಸಂಘ ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನಮ್ಮ ಹೆಮ್ಮೆಯ ದೇಶದಲ್ಲಿ, ಬಡವರ ಜೀವಕ್ಕೆ ಬೆಲೆಯೇ ಇಲ್ಲ. ಇಂತಹ ಪರಿಸ್ಥಿತಿ ಕೊನೆಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...