Homeಕರ್ನಾಟಕಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

ಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

- Advertisement -
- Advertisement -

ಗಣಪತಿ ಮತ್ತು ದಸರಾ ಹಬ್ಬಕ್ಕೆಂದು ತುಮಕೂರು ನಗರದಾದ್ಯಂತ ರಸ್ತೆಗಳಲ್ಲಿ ಅಳವಡಿಸಿದ್ದ ಕೇಸರಿ ಬ್ಯಾನರ್ ಗಳ ಮತ್ತು ಬಂಟಿಂಗ್ ತೆರವುಗೊಳಿಸಲು ಹೋದ ಪೌರ ಕಾರ್ಮಿಕರೊಬ್ಬರು ಮೃತಪ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹದಿನೈದನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಟೌನ್ ಹಾಲ್ ಸರ್ಕಲ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಕೇಸರಿ ಬ್ಯಾನರ್ ಮತ್ತು ಬಂಟಿಂಗ್ ಬಿಚ್ಚುವಾಗ ಘಟನೆ ನಡೆದಿದೆ. ವಾರ್ಡ್ ನ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಸೂಚನೆ ಮೇರೆಗೆ ಪೌರ ಕಾರ್ಮಿಕ ನರಸಿಂಹಯ್ಯ (34)ಗೆ ಬ್ಯಾನರ್ ಬಿಚ್ಚಿಸುವ ವೇಳೆ ವಿದ್ಯುತ್ ಪ್ರವಹಿಸಿ ದುರಂತ ನಡೆದಿದೆ.

ಗಮ್ ಬೂಟ್ ಮತ್ತು ಕೈಗ್ಲೌಸು ನೀಡದೆಯೇ ಕಬ್ಬಿಣದ ಸಲಾಕೆ ನೀಡಿ ಬ್ಯಾನರ್ ಬಿಚ್ಚುವಂತೆ ಹೇಳಲಾಗಿದೆ. ಹೀಗಾಗಿ ನರಸಿಂಹಯ್ಯ ಕಬ್ಬಿಣದ ಸಲಾಕೆಯಿಂದ ಬ್ಯಾನರ್ ಕೀಳುತ್ತಿದ್ದಂತೆಯೇ ಕಬ್ಬಿಣದ ರಾಡು ಹೈಟೆನ್ಷನ್ ವೈರ್ ಗೆ ತಗುಲಿ ವಿದ್ಯುತ್ ಪ್ರವಹಿಸಿ ಪೌರ ಕಾರ್ಮಿಕ ನರಸಿಂಹಯ್ಯ ರಸ್ತೆಗೆ ಬಿದ್ದಿದ್ದಾನೆ. ಅಲ್ಲಿಯೇ ಇದ್ದ ಇತರೆ ಪೌರ ಕಾರ್ಮಿಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ನರಸಿಂಹಯ್ಯ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಬ್ಯಾನರ್ ಮತ್ತು ಬಂಟಿಂಗ್ ಕಟ್ಟಿದವರೇ ಅವುಗಳನ್ನು ತೆರವುಗೊಳಿಸಬೇಕು ಎಂಬ ನಿಯಮವಿದೆ. ಆದರೆ ಕೇಸರಿ ಬ್ಯಾನರ್ ಮತ್ತು ಕೇಸರಿ ಬಂಟಿಂಗ್ ಅಳವಡಿಸಲೂ ಸಹ ಅನುಮತಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಕೇಸರಿ ಬ್ಯಾನರ್ ತೆರವುಗೊಳಿಸುವಂತೆ ನರಸಿಂಹಯ್ಯರಿಗೆ ಹೇಳಿದಾಗ ಈ ಘಟನೆ ನಡೆದಿದ್ದು ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಯಾವುದೇ ತರಬೇತಿ ನೀಡದೆ ಹಂದಿ ಹಿಡಿಯಲು, ಚರಂಡಿ ಮತ್ತು ಮ್ಯಾನ್ ಹೋಲ್ ಸ್ವಚ್ಛಗೊಳಿಸಲು, ಮರದ ಕೊಂಬೆಗಳನ್ನು ಕತ್ತರಿಸಲು ಮತ್ತು ವಿದ್ಯುತ್ ಕಂಬಕ್ಕೆ ಕಟ್ಟಿರುವ ಬ್ಯಾನರ್ ಗಳನ್ನು ತೆರವುಗೊಳಿಸಲು ಪೌರ ಕಾರ್ಮಿಕರನ್ನು ಬಳಸಿಕೊಳ್ಳುತ್ತಾರೆ ಎಂದು ಕಾರ್ಮಿಕ ಮುಖಂಡರು ಆರೋಪಿಸಿದ್ದಾರೆ. ಕಾಲಿಗೆ ಗಮ್ ಬೂಟ್ ಮತ್ತು ಕೈಗಳಿಗೆ ಕೈಗ್ಲೌಸು ನೀಡಬೇಕು. ಅದರೆ ಯಾವುದೇ ಸುರಕ್ಷತಾ ಸಲಕರಣೆ ನೀಡದೆ ಕೆಲಸ ಮಾಡಿಸುತ್ತಾರೆ. ಸುರಕ್ಷತಾ ಸಲಕರಣೆ ನೀಡುವಂತೆ ಎರಡು ಬಾರಿ ಮನವಿ ಮಾಡಿದ್ದರೂ ಗಮನಹರಿಸಿಲ್ಲ ಎಂದು ಕಾರ್ಮಿಕರು ದೂರಿದ್ದಾರೆ.

ನೇರ ಪಾವತಿಯಡಿ ನರಸಿಂಹಯ್ಯ ಪೌರ ಕಾರ್ಮಿಕರಾಗಿ ನೇಮಕಗೊಂಡಿದ್ದರು. ಅವರು ಮೃತಪಟ್ಟ ಹಿನ್ನೆಲೆ ಕೆಲಸವನ್ನು ಸ್ಥಗಿತಗೊಳಿಸಿದ ಎಲ್ಲಾ ಪೌರ ಕಾರ್ಮಿಕರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಶವ ಎತ್ತದಂತೆ ತಡೆದದ್ದರಿಂದ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್‌, ನಗರ ಪಾಲಿಕೆ ಹಂಗಾಮಿ ಆಯುಕ್ತರು, ಮೇಯರ್ ಮತ್ತು ಉಪಮೇಯರ್ ಸ್ಥಳಕ್ಕೆ ಬಂದು ಸಭೆ ನಡೆಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವಂತೆ ಪೌರ ಕಾರ್ಮಿಕರು ಪಟ್ಟು ಹಿಡಿದರು. ಹೀಗಾಗಿ ಪಾಲಿಕೆ ಮತ್ತು ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಲಾಯಿತು.

ಮೃತನ ಪತ್ನಿಗೆ ನೇರ ಪಾವತಿಯಡಿ ಉದ್ಯೋಗ ನೀಡುವುದು ಮತ್ತು ದಿಬ್ಬೂರಿನಲ್ಲಿ ಒಂದು ಮನೆ ಕೊಡುವ ಭರವಸೆ ನೀಡಿದ ನಂತರ ಶವ ತೆಗೆಯಲು ಅವಕಾಶ ಮಾಡಿ ಕೊಡಲಾಯಿತು. ತುಮಕೂರಿನಲ್ಲಿ ಇದು ಎರಡನೇ ಘಟನೆಯಾಗಿದ್ದು ಈ ಬಗ್ಗೆ ಪಾಲಿಕೆಯ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಐಟಿಯು ಪೌರ ಕಾರ್ಮಿಕರ ಸಂಘ ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನಮ್ಮ ಹೆಮ್ಮೆಯ ದೇಶದಲ್ಲಿ, ಬಡವರ ಜೀವಕ್ಕೆ ಬೆಲೆಯೇ ಇಲ್ಲ. ಇಂತಹ ಪರಿಸ್ಥಿತಿ ಕೊನೆಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...