Homeಕರ್ನಾಟಕಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

ಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

- Advertisement -
- Advertisement -

ಗಣಪತಿ ಮತ್ತು ದಸರಾ ಹಬ್ಬಕ್ಕೆಂದು ತುಮಕೂರು ನಗರದಾದ್ಯಂತ ರಸ್ತೆಗಳಲ್ಲಿ ಅಳವಡಿಸಿದ್ದ ಕೇಸರಿ ಬ್ಯಾನರ್ ಗಳ ಮತ್ತು ಬಂಟಿಂಗ್ ತೆರವುಗೊಳಿಸಲು ಹೋದ ಪೌರ ಕಾರ್ಮಿಕರೊಬ್ಬರು ಮೃತಪ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹದಿನೈದನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಟೌನ್ ಹಾಲ್ ಸರ್ಕಲ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಕೇಸರಿ ಬ್ಯಾನರ್ ಮತ್ತು ಬಂಟಿಂಗ್ ಬಿಚ್ಚುವಾಗ ಘಟನೆ ನಡೆದಿದೆ. ವಾರ್ಡ್ ನ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಸೂಚನೆ ಮೇರೆಗೆ ಪೌರ ಕಾರ್ಮಿಕ ನರಸಿಂಹಯ್ಯ (34)ಗೆ ಬ್ಯಾನರ್ ಬಿಚ್ಚಿಸುವ ವೇಳೆ ವಿದ್ಯುತ್ ಪ್ರವಹಿಸಿ ದುರಂತ ನಡೆದಿದೆ.

ಗಮ್ ಬೂಟ್ ಮತ್ತು ಕೈಗ್ಲೌಸು ನೀಡದೆಯೇ ಕಬ್ಬಿಣದ ಸಲಾಕೆ ನೀಡಿ ಬ್ಯಾನರ್ ಬಿಚ್ಚುವಂತೆ ಹೇಳಲಾಗಿದೆ. ಹೀಗಾಗಿ ನರಸಿಂಹಯ್ಯ ಕಬ್ಬಿಣದ ಸಲಾಕೆಯಿಂದ ಬ್ಯಾನರ್ ಕೀಳುತ್ತಿದ್ದಂತೆಯೇ ಕಬ್ಬಿಣದ ರಾಡು ಹೈಟೆನ್ಷನ್ ವೈರ್ ಗೆ ತಗುಲಿ ವಿದ್ಯುತ್ ಪ್ರವಹಿಸಿ ಪೌರ ಕಾರ್ಮಿಕ ನರಸಿಂಹಯ್ಯ ರಸ್ತೆಗೆ ಬಿದ್ದಿದ್ದಾನೆ. ಅಲ್ಲಿಯೇ ಇದ್ದ ಇತರೆ ಪೌರ ಕಾರ್ಮಿಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ನರಸಿಂಹಯ್ಯ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಬ್ಯಾನರ್ ಮತ್ತು ಬಂಟಿಂಗ್ ಕಟ್ಟಿದವರೇ ಅವುಗಳನ್ನು ತೆರವುಗೊಳಿಸಬೇಕು ಎಂಬ ನಿಯಮವಿದೆ. ಆದರೆ ಕೇಸರಿ ಬ್ಯಾನರ್ ಮತ್ತು ಕೇಸರಿ ಬಂಟಿಂಗ್ ಅಳವಡಿಸಲೂ ಸಹ ಅನುಮತಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಕೇಸರಿ ಬ್ಯಾನರ್ ತೆರವುಗೊಳಿಸುವಂತೆ ನರಸಿಂಹಯ್ಯರಿಗೆ ಹೇಳಿದಾಗ ಈ ಘಟನೆ ನಡೆದಿದ್ದು ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಯಾವುದೇ ತರಬೇತಿ ನೀಡದೆ ಹಂದಿ ಹಿಡಿಯಲು, ಚರಂಡಿ ಮತ್ತು ಮ್ಯಾನ್ ಹೋಲ್ ಸ್ವಚ್ಛಗೊಳಿಸಲು, ಮರದ ಕೊಂಬೆಗಳನ್ನು ಕತ್ತರಿಸಲು ಮತ್ತು ವಿದ್ಯುತ್ ಕಂಬಕ್ಕೆ ಕಟ್ಟಿರುವ ಬ್ಯಾನರ್ ಗಳನ್ನು ತೆರವುಗೊಳಿಸಲು ಪೌರ ಕಾರ್ಮಿಕರನ್ನು ಬಳಸಿಕೊಳ್ಳುತ್ತಾರೆ ಎಂದು ಕಾರ್ಮಿಕ ಮುಖಂಡರು ಆರೋಪಿಸಿದ್ದಾರೆ. ಕಾಲಿಗೆ ಗಮ್ ಬೂಟ್ ಮತ್ತು ಕೈಗಳಿಗೆ ಕೈಗ್ಲೌಸು ನೀಡಬೇಕು. ಅದರೆ ಯಾವುದೇ ಸುರಕ್ಷತಾ ಸಲಕರಣೆ ನೀಡದೆ ಕೆಲಸ ಮಾಡಿಸುತ್ತಾರೆ. ಸುರಕ್ಷತಾ ಸಲಕರಣೆ ನೀಡುವಂತೆ ಎರಡು ಬಾರಿ ಮನವಿ ಮಾಡಿದ್ದರೂ ಗಮನಹರಿಸಿಲ್ಲ ಎಂದು ಕಾರ್ಮಿಕರು ದೂರಿದ್ದಾರೆ.

ನೇರ ಪಾವತಿಯಡಿ ನರಸಿಂಹಯ್ಯ ಪೌರ ಕಾರ್ಮಿಕರಾಗಿ ನೇಮಕಗೊಂಡಿದ್ದರು. ಅವರು ಮೃತಪಟ್ಟ ಹಿನ್ನೆಲೆ ಕೆಲಸವನ್ನು ಸ್ಥಗಿತಗೊಳಿಸಿದ ಎಲ್ಲಾ ಪೌರ ಕಾರ್ಮಿಕರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಶವ ಎತ್ತದಂತೆ ತಡೆದದ್ದರಿಂದ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್‌, ನಗರ ಪಾಲಿಕೆ ಹಂಗಾಮಿ ಆಯುಕ್ತರು, ಮೇಯರ್ ಮತ್ತು ಉಪಮೇಯರ್ ಸ್ಥಳಕ್ಕೆ ಬಂದು ಸಭೆ ನಡೆಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವಂತೆ ಪೌರ ಕಾರ್ಮಿಕರು ಪಟ್ಟು ಹಿಡಿದರು. ಹೀಗಾಗಿ ಪಾಲಿಕೆ ಮತ್ತು ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಲಾಯಿತು.

ಮೃತನ ಪತ್ನಿಗೆ ನೇರ ಪಾವತಿಯಡಿ ಉದ್ಯೋಗ ನೀಡುವುದು ಮತ್ತು ದಿಬ್ಬೂರಿನಲ್ಲಿ ಒಂದು ಮನೆ ಕೊಡುವ ಭರವಸೆ ನೀಡಿದ ನಂತರ ಶವ ತೆಗೆಯಲು ಅವಕಾಶ ಮಾಡಿ ಕೊಡಲಾಯಿತು. ತುಮಕೂರಿನಲ್ಲಿ ಇದು ಎರಡನೇ ಘಟನೆಯಾಗಿದ್ದು ಈ ಬಗ್ಗೆ ಪಾಲಿಕೆಯ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಐಟಿಯು ಪೌರ ಕಾರ್ಮಿಕರ ಸಂಘ ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನಮ್ಮ ಹೆಮ್ಮೆಯ ದೇಶದಲ್ಲಿ, ಬಡವರ ಜೀವಕ್ಕೆ ಬೆಲೆಯೇ ಇಲ್ಲ. ಇಂತಹ ಪರಿಸ್ಥಿತಿ ಕೊನೆಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...