Homeಕರ್ನಾಟಕಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

ಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

- Advertisement -
- Advertisement -

ಗಣಪತಿ ಮತ್ತು ದಸರಾ ಹಬ್ಬಕ್ಕೆಂದು ತುಮಕೂರು ನಗರದಾದ್ಯಂತ ರಸ್ತೆಗಳಲ್ಲಿ ಅಳವಡಿಸಿದ್ದ ಕೇಸರಿ ಬ್ಯಾನರ್ ಗಳ ಮತ್ತು ಬಂಟಿಂಗ್ ತೆರವುಗೊಳಿಸಲು ಹೋದ ಪೌರ ಕಾರ್ಮಿಕರೊಬ್ಬರು ಮೃತಪ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹದಿನೈದನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಟೌನ್ ಹಾಲ್ ಸರ್ಕಲ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಕೇಸರಿ ಬ್ಯಾನರ್ ಮತ್ತು ಬಂಟಿಂಗ್ ಬಿಚ್ಚುವಾಗ ಘಟನೆ ನಡೆದಿದೆ. ವಾರ್ಡ್ ನ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಸೂಚನೆ ಮೇರೆಗೆ ಪೌರ ಕಾರ್ಮಿಕ ನರಸಿಂಹಯ್ಯ (34)ಗೆ ಬ್ಯಾನರ್ ಬಿಚ್ಚಿಸುವ ವೇಳೆ ವಿದ್ಯುತ್ ಪ್ರವಹಿಸಿ ದುರಂತ ನಡೆದಿದೆ.

ಗಮ್ ಬೂಟ್ ಮತ್ತು ಕೈಗ್ಲೌಸು ನೀಡದೆಯೇ ಕಬ್ಬಿಣದ ಸಲಾಕೆ ನೀಡಿ ಬ್ಯಾನರ್ ಬಿಚ್ಚುವಂತೆ ಹೇಳಲಾಗಿದೆ. ಹೀಗಾಗಿ ನರಸಿಂಹಯ್ಯ ಕಬ್ಬಿಣದ ಸಲಾಕೆಯಿಂದ ಬ್ಯಾನರ್ ಕೀಳುತ್ತಿದ್ದಂತೆಯೇ ಕಬ್ಬಿಣದ ರಾಡು ಹೈಟೆನ್ಷನ್ ವೈರ್ ಗೆ ತಗುಲಿ ವಿದ್ಯುತ್ ಪ್ರವಹಿಸಿ ಪೌರ ಕಾರ್ಮಿಕ ನರಸಿಂಹಯ್ಯ ರಸ್ತೆಗೆ ಬಿದ್ದಿದ್ದಾನೆ. ಅಲ್ಲಿಯೇ ಇದ್ದ ಇತರೆ ಪೌರ ಕಾರ್ಮಿಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ನರಸಿಂಹಯ್ಯ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಬ್ಯಾನರ್ ಮತ್ತು ಬಂಟಿಂಗ್ ಕಟ್ಟಿದವರೇ ಅವುಗಳನ್ನು ತೆರವುಗೊಳಿಸಬೇಕು ಎಂಬ ನಿಯಮವಿದೆ. ಆದರೆ ಕೇಸರಿ ಬ್ಯಾನರ್ ಮತ್ತು ಕೇಸರಿ ಬಂಟಿಂಗ್ ಅಳವಡಿಸಲೂ ಸಹ ಅನುಮತಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಕೇಸರಿ ಬ್ಯಾನರ್ ತೆರವುಗೊಳಿಸುವಂತೆ ನರಸಿಂಹಯ್ಯರಿಗೆ ಹೇಳಿದಾಗ ಈ ಘಟನೆ ನಡೆದಿದ್ದು ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಯಾವುದೇ ತರಬೇತಿ ನೀಡದೆ ಹಂದಿ ಹಿಡಿಯಲು, ಚರಂಡಿ ಮತ್ತು ಮ್ಯಾನ್ ಹೋಲ್ ಸ್ವಚ್ಛಗೊಳಿಸಲು, ಮರದ ಕೊಂಬೆಗಳನ್ನು ಕತ್ತರಿಸಲು ಮತ್ತು ವಿದ್ಯುತ್ ಕಂಬಕ್ಕೆ ಕಟ್ಟಿರುವ ಬ್ಯಾನರ್ ಗಳನ್ನು ತೆರವುಗೊಳಿಸಲು ಪೌರ ಕಾರ್ಮಿಕರನ್ನು ಬಳಸಿಕೊಳ್ಳುತ್ತಾರೆ ಎಂದು ಕಾರ್ಮಿಕ ಮುಖಂಡರು ಆರೋಪಿಸಿದ್ದಾರೆ. ಕಾಲಿಗೆ ಗಮ್ ಬೂಟ್ ಮತ್ತು ಕೈಗಳಿಗೆ ಕೈಗ್ಲೌಸು ನೀಡಬೇಕು. ಅದರೆ ಯಾವುದೇ ಸುರಕ್ಷತಾ ಸಲಕರಣೆ ನೀಡದೆ ಕೆಲಸ ಮಾಡಿಸುತ್ತಾರೆ. ಸುರಕ್ಷತಾ ಸಲಕರಣೆ ನೀಡುವಂತೆ ಎರಡು ಬಾರಿ ಮನವಿ ಮಾಡಿದ್ದರೂ ಗಮನಹರಿಸಿಲ್ಲ ಎಂದು ಕಾರ್ಮಿಕರು ದೂರಿದ್ದಾರೆ.

ನೇರ ಪಾವತಿಯಡಿ ನರಸಿಂಹಯ್ಯ ಪೌರ ಕಾರ್ಮಿಕರಾಗಿ ನೇಮಕಗೊಂಡಿದ್ದರು. ಅವರು ಮೃತಪಟ್ಟ ಹಿನ್ನೆಲೆ ಕೆಲಸವನ್ನು ಸ್ಥಗಿತಗೊಳಿಸಿದ ಎಲ್ಲಾ ಪೌರ ಕಾರ್ಮಿಕರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಶವ ಎತ್ತದಂತೆ ತಡೆದದ್ದರಿಂದ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್‌, ನಗರ ಪಾಲಿಕೆ ಹಂಗಾಮಿ ಆಯುಕ್ತರು, ಮೇಯರ್ ಮತ್ತು ಉಪಮೇಯರ್ ಸ್ಥಳಕ್ಕೆ ಬಂದು ಸಭೆ ನಡೆಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವಂತೆ ಪೌರ ಕಾರ್ಮಿಕರು ಪಟ್ಟು ಹಿಡಿದರು. ಹೀಗಾಗಿ ಪಾಲಿಕೆ ಮತ್ತು ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಲಾಯಿತು.

ಮೃತನ ಪತ್ನಿಗೆ ನೇರ ಪಾವತಿಯಡಿ ಉದ್ಯೋಗ ನೀಡುವುದು ಮತ್ತು ದಿಬ್ಬೂರಿನಲ್ಲಿ ಒಂದು ಮನೆ ಕೊಡುವ ಭರವಸೆ ನೀಡಿದ ನಂತರ ಶವ ತೆಗೆಯಲು ಅವಕಾಶ ಮಾಡಿ ಕೊಡಲಾಯಿತು. ತುಮಕೂರಿನಲ್ಲಿ ಇದು ಎರಡನೇ ಘಟನೆಯಾಗಿದ್ದು ಈ ಬಗ್ಗೆ ಪಾಲಿಕೆಯ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಐಟಿಯು ಪೌರ ಕಾರ್ಮಿಕರ ಸಂಘ ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನಮ್ಮ ಹೆಮ್ಮೆಯ ದೇಶದಲ್ಲಿ, ಬಡವರ ಜೀವಕ್ಕೆ ಬೆಲೆಯೇ ಇಲ್ಲ. ಇಂತಹ ಪರಿಸ್ಥಿತಿ ಕೊನೆಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...