Homeಕರ್ನಾಟಕಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

ಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

- Advertisement -
- Advertisement -

ಗಣಪತಿ ಮತ್ತು ದಸರಾ ಹಬ್ಬಕ್ಕೆಂದು ತುಮಕೂರು ನಗರದಾದ್ಯಂತ ರಸ್ತೆಗಳಲ್ಲಿ ಅಳವಡಿಸಿದ್ದ ಕೇಸರಿ ಬ್ಯಾನರ್ ಗಳ ಮತ್ತು ಬಂಟಿಂಗ್ ತೆರವುಗೊಳಿಸಲು ಹೋದ ಪೌರ ಕಾರ್ಮಿಕರೊಬ್ಬರು ಮೃತಪ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹದಿನೈದನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಟೌನ್ ಹಾಲ್ ಸರ್ಕಲ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಕೇಸರಿ ಬ್ಯಾನರ್ ಮತ್ತು ಬಂಟಿಂಗ್ ಬಿಚ್ಚುವಾಗ ಘಟನೆ ನಡೆದಿದೆ. ವಾರ್ಡ್ ನ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಸೂಚನೆ ಮೇರೆಗೆ ಪೌರ ಕಾರ್ಮಿಕ ನರಸಿಂಹಯ್ಯ (34)ಗೆ ಬ್ಯಾನರ್ ಬಿಚ್ಚಿಸುವ ವೇಳೆ ವಿದ್ಯುತ್ ಪ್ರವಹಿಸಿ ದುರಂತ ನಡೆದಿದೆ.

ಗಮ್ ಬೂಟ್ ಮತ್ತು ಕೈಗ್ಲೌಸು ನೀಡದೆಯೇ ಕಬ್ಬಿಣದ ಸಲಾಕೆ ನೀಡಿ ಬ್ಯಾನರ್ ಬಿಚ್ಚುವಂತೆ ಹೇಳಲಾಗಿದೆ. ಹೀಗಾಗಿ ನರಸಿಂಹಯ್ಯ ಕಬ್ಬಿಣದ ಸಲಾಕೆಯಿಂದ ಬ್ಯಾನರ್ ಕೀಳುತ್ತಿದ್ದಂತೆಯೇ ಕಬ್ಬಿಣದ ರಾಡು ಹೈಟೆನ್ಷನ್ ವೈರ್ ಗೆ ತಗುಲಿ ವಿದ್ಯುತ್ ಪ್ರವಹಿಸಿ ಪೌರ ಕಾರ್ಮಿಕ ನರಸಿಂಹಯ್ಯ ರಸ್ತೆಗೆ ಬಿದ್ದಿದ್ದಾನೆ. ಅಲ್ಲಿಯೇ ಇದ್ದ ಇತರೆ ಪೌರ ಕಾರ್ಮಿಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ನರಸಿಂಹಯ್ಯ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಬ್ಯಾನರ್ ಮತ್ತು ಬಂಟಿಂಗ್ ಕಟ್ಟಿದವರೇ ಅವುಗಳನ್ನು ತೆರವುಗೊಳಿಸಬೇಕು ಎಂಬ ನಿಯಮವಿದೆ. ಆದರೆ ಕೇಸರಿ ಬ್ಯಾನರ್ ಮತ್ತು ಕೇಸರಿ ಬಂಟಿಂಗ್ ಅಳವಡಿಸಲೂ ಸಹ ಅನುಮತಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಕೇಸರಿ ಬ್ಯಾನರ್ ತೆರವುಗೊಳಿಸುವಂತೆ ನರಸಿಂಹಯ್ಯರಿಗೆ ಹೇಳಿದಾಗ ಈ ಘಟನೆ ನಡೆದಿದ್ದು ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಯಾವುದೇ ತರಬೇತಿ ನೀಡದೆ ಹಂದಿ ಹಿಡಿಯಲು, ಚರಂಡಿ ಮತ್ತು ಮ್ಯಾನ್ ಹೋಲ್ ಸ್ವಚ್ಛಗೊಳಿಸಲು, ಮರದ ಕೊಂಬೆಗಳನ್ನು ಕತ್ತರಿಸಲು ಮತ್ತು ವಿದ್ಯುತ್ ಕಂಬಕ್ಕೆ ಕಟ್ಟಿರುವ ಬ್ಯಾನರ್ ಗಳನ್ನು ತೆರವುಗೊಳಿಸಲು ಪೌರ ಕಾರ್ಮಿಕರನ್ನು ಬಳಸಿಕೊಳ್ಳುತ್ತಾರೆ ಎಂದು ಕಾರ್ಮಿಕ ಮುಖಂಡರು ಆರೋಪಿಸಿದ್ದಾರೆ. ಕಾಲಿಗೆ ಗಮ್ ಬೂಟ್ ಮತ್ತು ಕೈಗಳಿಗೆ ಕೈಗ್ಲೌಸು ನೀಡಬೇಕು. ಅದರೆ ಯಾವುದೇ ಸುರಕ್ಷತಾ ಸಲಕರಣೆ ನೀಡದೆ ಕೆಲಸ ಮಾಡಿಸುತ್ತಾರೆ. ಸುರಕ್ಷತಾ ಸಲಕರಣೆ ನೀಡುವಂತೆ ಎರಡು ಬಾರಿ ಮನವಿ ಮಾಡಿದ್ದರೂ ಗಮನಹರಿಸಿಲ್ಲ ಎಂದು ಕಾರ್ಮಿಕರು ದೂರಿದ್ದಾರೆ.

ನೇರ ಪಾವತಿಯಡಿ ನರಸಿಂಹಯ್ಯ ಪೌರ ಕಾರ್ಮಿಕರಾಗಿ ನೇಮಕಗೊಂಡಿದ್ದರು. ಅವರು ಮೃತಪಟ್ಟ ಹಿನ್ನೆಲೆ ಕೆಲಸವನ್ನು ಸ್ಥಗಿತಗೊಳಿಸಿದ ಎಲ್ಲಾ ಪೌರ ಕಾರ್ಮಿಕರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಶವ ಎತ್ತದಂತೆ ತಡೆದದ್ದರಿಂದ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್‌, ನಗರ ಪಾಲಿಕೆ ಹಂಗಾಮಿ ಆಯುಕ್ತರು, ಮೇಯರ್ ಮತ್ತು ಉಪಮೇಯರ್ ಸ್ಥಳಕ್ಕೆ ಬಂದು ಸಭೆ ನಡೆಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವಂತೆ ಪೌರ ಕಾರ್ಮಿಕರು ಪಟ್ಟು ಹಿಡಿದರು. ಹೀಗಾಗಿ ಪಾಲಿಕೆ ಮತ್ತು ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಲಾಯಿತು.

ಮೃತನ ಪತ್ನಿಗೆ ನೇರ ಪಾವತಿಯಡಿ ಉದ್ಯೋಗ ನೀಡುವುದು ಮತ್ತು ದಿಬ್ಬೂರಿನಲ್ಲಿ ಒಂದು ಮನೆ ಕೊಡುವ ಭರವಸೆ ನೀಡಿದ ನಂತರ ಶವ ತೆಗೆಯಲು ಅವಕಾಶ ಮಾಡಿ ಕೊಡಲಾಯಿತು. ತುಮಕೂರಿನಲ್ಲಿ ಇದು ಎರಡನೇ ಘಟನೆಯಾಗಿದ್ದು ಈ ಬಗ್ಗೆ ಪಾಲಿಕೆಯ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಐಟಿಯು ಪೌರ ಕಾರ್ಮಿಕರ ಸಂಘ ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನಮ್ಮ ಹೆಮ್ಮೆಯ ದೇಶದಲ್ಲಿ, ಬಡವರ ಜೀವಕ್ಕೆ ಬೆಲೆಯೇ ಇಲ್ಲ. ಇಂತಹ ಪರಿಸ್ಥಿತಿ ಕೊನೆಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...