Homeಕರ್ನಾಟಕಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

ಬ್ಯಾನರ್ ಬಂಟಿಂಗ್ ತೆರವುಗೊಳಿಸಲು ಹೋಗಿ ಪೌರ ಕಾರ್ಮಿಕ ಸಾವು

- Advertisement -
- Advertisement -

ಗಣಪತಿ ಮತ್ತು ದಸರಾ ಹಬ್ಬಕ್ಕೆಂದು ತುಮಕೂರು ನಗರದಾದ್ಯಂತ ರಸ್ತೆಗಳಲ್ಲಿ ಅಳವಡಿಸಿದ್ದ ಕೇಸರಿ ಬ್ಯಾನರ್ ಗಳ ಮತ್ತು ಬಂಟಿಂಗ್ ತೆರವುಗೊಳಿಸಲು ಹೋದ ಪೌರ ಕಾರ್ಮಿಕರೊಬ್ಬರು ಮೃತಪ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹದಿನೈದನೇ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಟೌನ್ ಹಾಲ್ ಸರ್ಕಲ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಕೇಸರಿ ಬ್ಯಾನರ್ ಮತ್ತು ಬಂಟಿಂಗ್ ಬಿಚ್ಚುವಾಗ ಘಟನೆ ನಡೆದಿದೆ. ವಾರ್ಡ್ ನ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಸೂಚನೆ ಮೇರೆಗೆ ಪೌರ ಕಾರ್ಮಿಕ ನರಸಿಂಹಯ್ಯ (34)ಗೆ ಬ್ಯಾನರ್ ಬಿಚ್ಚಿಸುವ ವೇಳೆ ವಿದ್ಯುತ್ ಪ್ರವಹಿಸಿ ದುರಂತ ನಡೆದಿದೆ.

ಗಮ್ ಬೂಟ್ ಮತ್ತು ಕೈಗ್ಲೌಸು ನೀಡದೆಯೇ ಕಬ್ಬಿಣದ ಸಲಾಕೆ ನೀಡಿ ಬ್ಯಾನರ್ ಬಿಚ್ಚುವಂತೆ ಹೇಳಲಾಗಿದೆ. ಹೀಗಾಗಿ ನರಸಿಂಹಯ್ಯ ಕಬ್ಬಿಣದ ಸಲಾಕೆಯಿಂದ ಬ್ಯಾನರ್ ಕೀಳುತ್ತಿದ್ದಂತೆಯೇ ಕಬ್ಬಿಣದ ರಾಡು ಹೈಟೆನ್ಷನ್ ವೈರ್ ಗೆ ತಗುಲಿ ವಿದ್ಯುತ್ ಪ್ರವಹಿಸಿ ಪೌರ ಕಾರ್ಮಿಕ ನರಸಿಂಹಯ್ಯ ರಸ್ತೆಗೆ ಬಿದ್ದಿದ್ದಾನೆ. ಅಲ್ಲಿಯೇ ಇದ್ದ ಇತರೆ ಪೌರ ಕಾರ್ಮಿಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ನರಸಿಂಹಯ್ಯ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಬ್ಯಾನರ್ ಮತ್ತು ಬಂಟಿಂಗ್ ಕಟ್ಟಿದವರೇ ಅವುಗಳನ್ನು ತೆರವುಗೊಳಿಸಬೇಕು ಎಂಬ ನಿಯಮವಿದೆ. ಆದರೆ ಕೇಸರಿ ಬ್ಯಾನರ್ ಮತ್ತು ಕೇಸರಿ ಬಂಟಿಂಗ್ ಅಳವಡಿಸಲೂ ಸಹ ಅನುಮತಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಹೆಲ್ತ್ ಇನ್ಸ್ ಪೆಕ್ಟರ್ ಮತ್ತು ಪರಿಸರ ಇಂಜಿನಿಯರ್ ಕೇಸರಿ ಬ್ಯಾನರ್ ತೆರವುಗೊಳಿಸುವಂತೆ ನರಸಿಂಹಯ್ಯರಿಗೆ ಹೇಳಿದಾಗ ಈ ಘಟನೆ ನಡೆದಿದ್ದು ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ.

ಯಾವುದೇ ತರಬೇತಿ ನೀಡದೆ ಹಂದಿ ಹಿಡಿಯಲು, ಚರಂಡಿ ಮತ್ತು ಮ್ಯಾನ್ ಹೋಲ್ ಸ್ವಚ್ಛಗೊಳಿಸಲು, ಮರದ ಕೊಂಬೆಗಳನ್ನು ಕತ್ತರಿಸಲು ಮತ್ತು ವಿದ್ಯುತ್ ಕಂಬಕ್ಕೆ ಕಟ್ಟಿರುವ ಬ್ಯಾನರ್ ಗಳನ್ನು ತೆರವುಗೊಳಿಸಲು ಪೌರ ಕಾರ್ಮಿಕರನ್ನು ಬಳಸಿಕೊಳ್ಳುತ್ತಾರೆ ಎಂದು ಕಾರ್ಮಿಕ ಮುಖಂಡರು ಆರೋಪಿಸಿದ್ದಾರೆ. ಕಾಲಿಗೆ ಗಮ್ ಬೂಟ್ ಮತ್ತು ಕೈಗಳಿಗೆ ಕೈಗ್ಲೌಸು ನೀಡಬೇಕು. ಅದರೆ ಯಾವುದೇ ಸುರಕ್ಷತಾ ಸಲಕರಣೆ ನೀಡದೆ ಕೆಲಸ ಮಾಡಿಸುತ್ತಾರೆ. ಸುರಕ್ಷತಾ ಸಲಕರಣೆ ನೀಡುವಂತೆ ಎರಡು ಬಾರಿ ಮನವಿ ಮಾಡಿದ್ದರೂ ಗಮನಹರಿಸಿಲ್ಲ ಎಂದು ಕಾರ್ಮಿಕರು ದೂರಿದ್ದಾರೆ.

ನೇರ ಪಾವತಿಯಡಿ ನರಸಿಂಹಯ್ಯ ಪೌರ ಕಾರ್ಮಿಕರಾಗಿ ನೇಮಕಗೊಂಡಿದ್ದರು. ಅವರು ಮೃತಪಟ್ಟ ಹಿನ್ನೆಲೆ ಕೆಲಸವನ್ನು ಸ್ಥಗಿತಗೊಳಿಸಿದ ಎಲ್ಲಾ ಪೌರ ಕಾರ್ಮಿಕರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಶವ ಎತ್ತದಂತೆ ತಡೆದದ್ದರಿಂದ ಸ್ಥಳಕ್ಕೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್‌, ನಗರ ಪಾಲಿಕೆ ಹಂಗಾಮಿ ಆಯುಕ್ತರು, ಮೇಯರ್ ಮತ್ತು ಉಪಮೇಯರ್ ಸ್ಥಳಕ್ಕೆ ಬಂದು ಸಭೆ ನಡೆಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವಂತೆ ಪೌರ ಕಾರ್ಮಿಕರು ಪಟ್ಟು ಹಿಡಿದರು. ಹೀಗಾಗಿ ಪಾಲಿಕೆ ಮತ್ತು ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಲಾಯಿತು.

ಮೃತನ ಪತ್ನಿಗೆ ನೇರ ಪಾವತಿಯಡಿ ಉದ್ಯೋಗ ನೀಡುವುದು ಮತ್ತು ದಿಬ್ಬೂರಿನಲ್ಲಿ ಒಂದು ಮನೆ ಕೊಡುವ ಭರವಸೆ ನೀಡಿದ ನಂತರ ಶವ ತೆಗೆಯಲು ಅವಕಾಶ ಮಾಡಿ ಕೊಡಲಾಯಿತು. ತುಮಕೂರಿನಲ್ಲಿ ಇದು ಎರಡನೇ ಘಟನೆಯಾಗಿದ್ದು ಈ ಬಗ್ಗೆ ಪಾಲಿಕೆಯ ಗಮನ ಸೆಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಐಟಿಯು ಪೌರ ಕಾರ್ಮಿಕರ ಸಂಘ ದೂರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನಮ್ಮ ಹೆಮ್ಮೆಯ ದೇಶದಲ್ಲಿ, ಬಡವರ ಜೀವಕ್ಕೆ ಬೆಲೆಯೇ ಇಲ್ಲ. ಇಂತಹ ಪರಿಸ್ಥಿತಿ ಕೊನೆಗೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...