Homeಕರ್ನಾಟಕಧ್ವಜ ಸಂಹಿತೆ ಉಲ್ಲಂಘನೆ: ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಳಪೆಯಾಗಿ ಹೊಲಿದ ತ್ರಿವರ್ಣ ಧ್ವಜ ಮಾರಾಟ

ಧ್ವಜ ಸಂಹಿತೆ ಉಲ್ಲಂಘನೆ: ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಳಪೆಯಾಗಿ ಹೊಲಿದ ತ್ರಿವರ್ಣ ಧ್ವಜ ಮಾರಾಟ

- Advertisement -
- Advertisement -

ಭಾರತದ ಧ್ವಜ ಸಂಹಿತೆಯನ್ನು ಉಲ್ಲಂಘಿಸಿ ವಿರೂಪಗೊಳಿಸಲಾಗಿರುವ ಮತ್ತು ಕಳಪೆಯಾಗಿ ಹೊಲಿದ ಧ್ವಜಗಳನ್ನು ರಾಜ್ಯ ಬಿಜೆಪಿ ತನ್ನ ಕೇಂದ್ರ ಕಚೇರಿಯ ಮಳಿಗೆಯಲ್ಲಿ ಮಾರಾಟ ಮಾಡುತ್ತಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಜುಲೈ 31 ರಂದು ಸಚಿವ ಎಸ್ ಟಿ ಸೋಮಶೇಖರ್ ಅವರು ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ‘ಹರ್ ಘರ್ ತಿರಂಗ’ ಅಭಿಯಾನದ ಅಂಗವಾಗಿ ತ್ರಿವರ್ಣ ಧ್ವಜವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಈ ಮಾರಾಟದ ಮಳಿಗೆಯನ್ನು ಉದ್ಘಾಟಿಸಿದ್ದರು.

ಮಲ್ಲೇಶ್ವರಂನಲ್ಲಿರುವ ತನ್ನ ರಾಜ್ಯ ಕೇಂದ್ರ ಕಚೇರಿಯಿಂದ 10 ಲಕ್ಷ ಸೇರಿದಂತೆ ಕರ್ನಾಟಕದಾದ್ಯಂತ 75 ಲಕ್ಷ ಧ್ವಜಗಳನ್ನು ಪ್ರತಿ ಮನೆಯಲ್ಲಿ ಹಾರಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಬಿಜೆಪಿ ಕಚೇರಿಯಿಂದ ಮಾರಾಟವಾಗುವ ಧ್ವಜಗಳು ಪಾಲಿಯೆಸ್ಟರ್‌ನಿಂದ ತಯಾರಿಸಲ್ಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಹರ್ ಘರ್ ತಿರಂಗಾ’ ಅಭಿಯಾನಕ್ಕಾಗಿ ಪಾಲಿಯೆಸ್ಟರ್ ಮತ್ತು ಯಂತ್ರ-ನಿರ್ಮಿತ ರಾಷ್ಟ್ರಧ್ವಜಗಳ ಉತ್ಪಾದನೆಯನ್ನು ಅನುಮತಿಸಲು ಕೇಂದ್ರ ಸರ್ಕಾರವು 2021ರ ಡಿಸೆಂಬರ್ 30 ರಂದು ಭಾರತದ ಧ್ವಜ ಸಂಹಿತೆಯನ್ನು ತಿದ್ದುಪಡಿ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಧ್ವಜದ ಸಂಹಿತೆ ಪ್ರಕಾರ, “ತ್ರಿವರ್ಣ ಧ್ವಜವು ಆಯತಾಕಾರದ ಆಕಾರದಲ್ಲಿರಬೇಕು. ಧ್ವಜವೂ ಯಾವುದೇ ಗಾತ್ರದ್ದಾಗಿದ್ದರೂ ಅದರ ಉದ್ದ ಮತ್ತು ಅಗಲದ ಅನುಪಾತವು 3:2 ಆಗಿರಬೇಕು. ಅಶೋಕ ಚಕ್ರವನ್ನು ಮಧ್ಯದಲ್ಲಿ ಇಡಬೇಕು. ಮೂರು ಅಡ್ಡ ಪಟ್ಟೆಗಳು (ಕೇಸರಿ, ಬಿಳಿ, ಹಸಿರು) ಸಮಾನ ಪ್ರಮಾಣದಲ್ಲಿರಬೇಕು”

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾರಾಟ ಮಾಡಲಾಗುತ್ತಿರುವ ಅನೇಕ ಧ್ವಜಗಳು ಆಯತಾಕಾರ ಅಥವಾ 3:2 ಅನುಪಾತಕ್ಕೆ ಅನುಗುಣವಾಗಿಲ್ಲ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. “ಕೆಲವು ಧ್ವಜಗಳಲ್ಲಿ ಅಶೋಕ ಚಕ್ರ ಮಧ್ಯದಲ್ಲಿ ಇಲ್ಲ. ಇನ್ನೂ ಕೆಲವು ಧ್ವಜಗಳಲ್ಲಿ ಹಸಿರು ಪಟ್ಟೆಗಳು ಕೇಸರಿ ಮತ್ತು ಬಿಳಿ ಬಣ್ಣಗಳಿಗಿಂತ ದೊಡ್ಡದಾಗಿವೆ” ಎಂದು ವರದಿಯು ಉಲ್ಲೇಖಿಸಿದೆ. ಗುಣಮಟ್ಟ ತುಂಬಾ ಕಳಪೆಯಾಗಿದ್ದು, ಅನೇಕ ಧ್ವಜಗಳು ಕೆಟ್ಟದಾಗಿ ಹೊಲಿಯಲಾಗಿದೆ ಎಂದು ಅದು ಹೇಳಿದೆ.

ಪ್ರತಿಯೊಂದು ಧ್ವಜವನ್ನು 25 ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ನಗದು ರೂಪದಲ್ಲಿ ಪಾವತಿಸಲು ಕೇಳಲಾಗುತ್ತಿದೆ. ಯಾವುದೇ ಕಾರ್ಡ್/ಯುಪಿಐ ಪಾವತಿಯನ್ನು ಸ್ವೀಕರಿಸಲಾಗುತ್ತಿಲ್ಲ ಎಂದು ವರದಿ ಹೇಳಿದೆ. ಪಾವತಿ ಮಾಡಿರುವುದಕ್ಕೆ ಯಾವುದೇ ರಸೀದಿ ನೀಡಲಾಗುವುದಿಲ್ಲ. ಧ್ವಜ ಖರೀದಿಸುವವರು ತಮ್ಮ ಹೆಸರನ್ನು ನೀಡಬೇಕಾಗಿದೆ. ಹಲವು ದೋಷಗಳ ಹೊರತಾಗಿಯೂ, ಧ್ವಜಗಳು ಬಿಸಿ ಕೇಕ್‌ನಂತೆ ಮಾರಾಟವಾಗುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

“ಮಾರಾಟವು ಉತ್ತಮವಾಗಿದ್ದು, ಹೆಚ್ಚಿನ ಜನರು ದೊಡ್ಡ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ” ಎಂದು ಪಕ್ಷದ ಕಾರ್ಯಕರ್ತರೊಬ್ಬರು ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ನಾವು ಈಗಾಗಲೇ ನಮ್ಮ ಕಚೇರಿಯಿಂದ ಸುಮಾರು 3 ಲಕ್ಷ ಧ್ವಜಗಳನ್ನು ಮಾರಾಟ ಮಾಡಿದ್ದೇವೆ” ಎಂದು ಪಕ್ಷದ ಎಂಎಲ್‌ಸಿ, ಕರ್ನಾಟಕದಲ್ಲಿ ತಿರಂಗ ಪ್ರಚಾರದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಧ್ವಜಗಳಲ್ಲಿ ಯಾವುದೇ ಉತ್ಪಾದನಾ ದೋಷಗಳನ್ನು ತಾನು ಗಮನಿಸಿಲ್ಲ ಎಂದು ರವಿಕುಮಾರ್ ಹೇಳಿಕೊಂಡಿದ್ದು, ಧ್ವಜದ ವಿರೂಪಗೊಂಡ ವಿಚಾರದ ಬಗ್ಗೆ ಪರಿಶೀಲಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ನಾವು ಅದನ್ನು 25 ರೂ.ಗೆ ಖರೀದಿಸಿ ಅದೇ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ. ಸಾರಿಗೆ ಸೇರಿದಂತೆ ಇತ್ಯಾದಿ ಯಾವುದೇ ಶುಲ್ಕ ವಿಧಿಸುತ್ತಿಲ್ಲ. ವಿವಿಧ ಮಾರಾಟಗಾರರಿಂದ ಧ್ವಜಗಳನ್ನು ಪಡೆಯಲಾಗಿದೆ. ಪಕ್ಷದ ಕಾರ್ಯಕರ್ತರು ಕೂಡಾ ಧ್ವಜಗಳನ್ನು ಸ್ವಯಂಪ್ರೇರಿತರಾಗಿ ಹೊಲಿಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು

ಆಡಳಿತ ಪಕ್ಷ ಬಿಜೆಪಿ ಮಾರಾಟ ಮಾಡುತ್ತಿರುವ ಕೆಲವು ಧ್ವಜಗಳು ಭಾರತದ ಧ್ವಜ ಸಂಹಿತೆಯಲ್ಲಿ ಸೂಚಿಸಲಾದ ಮಾರ್ಗಸೂಚಿಗಳನ್ನು “ಸ್ಪಷ್ಟವಾಗಿ ಉಲ್ಲಂಘಿಸುತ್ತವೆ” ಎಂದು ಕಾನೂನು ತಜ್ಞರು ಹೇಳಿದ್ದಾರೆಂದು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆ ವರದಿಯಲ್ಲಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...