Homeಕರ್ನಾಟಕಧ್ವಜ ಸಂಹಿತೆ ಉಲ್ಲಂಘನೆ: ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಳಪೆಯಾಗಿ ಹೊಲಿದ ತ್ರಿವರ್ಣ ಧ್ವಜ ಮಾರಾಟ

ಧ್ವಜ ಸಂಹಿತೆ ಉಲ್ಲಂಘನೆ: ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಳಪೆಯಾಗಿ ಹೊಲಿದ ತ್ರಿವರ್ಣ ಧ್ವಜ ಮಾರಾಟ

- Advertisement -
- Advertisement -

ಭಾರತದ ಧ್ವಜ ಸಂಹಿತೆಯನ್ನು ಉಲ್ಲಂಘಿಸಿ ವಿರೂಪಗೊಳಿಸಲಾಗಿರುವ ಮತ್ತು ಕಳಪೆಯಾಗಿ ಹೊಲಿದ ಧ್ವಜಗಳನ್ನು ರಾಜ್ಯ ಬಿಜೆಪಿ ತನ್ನ ಕೇಂದ್ರ ಕಚೇರಿಯ ಮಳಿಗೆಯಲ್ಲಿ ಮಾರಾಟ ಮಾಡುತ್ತಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಜುಲೈ 31 ರಂದು ಸಚಿವ ಎಸ್ ಟಿ ಸೋಮಶೇಖರ್ ಅವರು ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ‘ಹರ್ ಘರ್ ತಿರಂಗ’ ಅಭಿಯಾನದ ಅಂಗವಾಗಿ ತ್ರಿವರ್ಣ ಧ್ವಜವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಈ ಮಾರಾಟದ ಮಳಿಗೆಯನ್ನು ಉದ್ಘಾಟಿಸಿದ್ದರು.

ಮಲ್ಲೇಶ್ವರಂನಲ್ಲಿರುವ ತನ್ನ ರಾಜ್ಯ ಕೇಂದ್ರ ಕಚೇರಿಯಿಂದ 10 ಲಕ್ಷ ಸೇರಿದಂತೆ ಕರ್ನಾಟಕದಾದ್ಯಂತ 75 ಲಕ್ಷ ಧ್ವಜಗಳನ್ನು ಪ್ರತಿ ಮನೆಯಲ್ಲಿ ಹಾರಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಬಿಜೆಪಿ ಕಚೇರಿಯಿಂದ ಮಾರಾಟವಾಗುವ ಧ್ವಜಗಳು ಪಾಲಿಯೆಸ್ಟರ್‌ನಿಂದ ತಯಾರಿಸಲ್ಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಹರ್ ಘರ್ ತಿರಂಗಾ’ ಅಭಿಯಾನಕ್ಕಾಗಿ ಪಾಲಿಯೆಸ್ಟರ್ ಮತ್ತು ಯಂತ್ರ-ನಿರ್ಮಿತ ರಾಷ್ಟ್ರಧ್ವಜಗಳ ಉತ್ಪಾದನೆಯನ್ನು ಅನುಮತಿಸಲು ಕೇಂದ್ರ ಸರ್ಕಾರವು 2021ರ ಡಿಸೆಂಬರ್ 30 ರಂದು ಭಾರತದ ಧ್ವಜ ಸಂಹಿತೆಯನ್ನು ತಿದ್ದುಪಡಿ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಧ್ವಜದ ಸಂಹಿತೆ ಪ್ರಕಾರ, “ತ್ರಿವರ್ಣ ಧ್ವಜವು ಆಯತಾಕಾರದ ಆಕಾರದಲ್ಲಿರಬೇಕು. ಧ್ವಜವೂ ಯಾವುದೇ ಗಾತ್ರದ್ದಾಗಿದ್ದರೂ ಅದರ ಉದ್ದ ಮತ್ತು ಅಗಲದ ಅನುಪಾತವು 3:2 ಆಗಿರಬೇಕು. ಅಶೋಕ ಚಕ್ರವನ್ನು ಮಧ್ಯದಲ್ಲಿ ಇಡಬೇಕು. ಮೂರು ಅಡ್ಡ ಪಟ್ಟೆಗಳು (ಕೇಸರಿ, ಬಿಳಿ, ಹಸಿರು) ಸಮಾನ ಪ್ರಮಾಣದಲ್ಲಿರಬೇಕು”

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾರಾಟ ಮಾಡಲಾಗುತ್ತಿರುವ ಅನೇಕ ಧ್ವಜಗಳು ಆಯತಾಕಾರ ಅಥವಾ 3:2 ಅನುಪಾತಕ್ಕೆ ಅನುಗುಣವಾಗಿಲ್ಲ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. “ಕೆಲವು ಧ್ವಜಗಳಲ್ಲಿ ಅಶೋಕ ಚಕ್ರ ಮಧ್ಯದಲ್ಲಿ ಇಲ್ಲ. ಇನ್ನೂ ಕೆಲವು ಧ್ವಜಗಳಲ್ಲಿ ಹಸಿರು ಪಟ್ಟೆಗಳು ಕೇಸರಿ ಮತ್ತು ಬಿಳಿ ಬಣ್ಣಗಳಿಗಿಂತ ದೊಡ್ಡದಾಗಿವೆ” ಎಂದು ವರದಿಯು ಉಲ್ಲೇಖಿಸಿದೆ. ಗುಣಮಟ್ಟ ತುಂಬಾ ಕಳಪೆಯಾಗಿದ್ದು, ಅನೇಕ ಧ್ವಜಗಳು ಕೆಟ್ಟದಾಗಿ ಹೊಲಿಯಲಾಗಿದೆ ಎಂದು ಅದು ಹೇಳಿದೆ.

ಪ್ರತಿಯೊಂದು ಧ್ವಜವನ್ನು 25 ರೂ.ಗೆ ಮಾರಾಟ ಮಾಡಲಾಗುತ್ತಿದ್ದು, ನಗದು ರೂಪದಲ್ಲಿ ಪಾವತಿಸಲು ಕೇಳಲಾಗುತ್ತಿದೆ. ಯಾವುದೇ ಕಾರ್ಡ್/ಯುಪಿಐ ಪಾವತಿಯನ್ನು ಸ್ವೀಕರಿಸಲಾಗುತ್ತಿಲ್ಲ ಎಂದು ವರದಿ ಹೇಳಿದೆ. ಪಾವತಿ ಮಾಡಿರುವುದಕ್ಕೆ ಯಾವುದೇ ರಸೀದಿ ನೀಡಲಾಗುವುದಿಲ್ಲ. ಧ್ವಜ ಖರೀದಿಸುವವರು ತಮ್ಮ ಹೆಸರನ್ನು ನೀಡಬೇಕಾಗಿದೆ. ಹಲವು ದೋಷಗಳ ಹೊರತಾಗಿಯೂ, ಧ್ವಜಗಳು ಬಿಸಿ ಕೇಕ್‌ನಂತೆ ಮಾರಾಟವಾಗುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

“ಮಾರಾಟವು ಉತ್ತಮವಾಗಿದ್ದು, ಹೆಚ್ಚಿನ ಜನರು ದೊಡ್ಡ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ” ಎಂದು ಪಕ್ಷದ ಕಾರ್ಯಕರ್ತರೊಬ್ಬರು ಹೇಳಿಕೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

“ನಾವು ಈಗಾಗಲೇ ನಮ್ಮ ಕಚೇರಿಯಿಂದ ಸುಮಾರು 3 ಲಕ್ಷ ಧ್ವಜಗಳನ್ನು ಮಾರಾಟ ಮಾಡಿದ್ದೇವೆ” ಎಂದು ಪಕ್ಷದ ಎಂಎಲ್‌ಸಿ, ಕರ್ನಾಟಕದಲ್ಲಿ ತಿರಂಗ ಪ್ರಚಾರದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಧ್ವಜಗಳಲ್ಲಿ ಯಾವುದೇ ಉತ್ಪಾದನಾ ದೋಷಗಳನ್ನು ತಾನು ಗಮನಿಸಿಲ್ಲ ಎಂದು ರವಿಕುಮಾರ್ ಹೇಳಿಕೊಂಡಿದ್ದು, ಧ್ವಜದ ವಿರೂಪಗೊಂಡ ವಿಚಾರದ ಬಗ್ಗೆ ಪರಿಶೀಲಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

“ನಾವು ಅದನ್ನು 25 ರೂ.ಗೆ ಖರೀದಿಸಿ ಅದೇ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ. ಸಾರಿಗೆ ಸೇರಿದಂತೆ ಇತ್ಯಾದಿ ಯಾವುದೇ ಶುಲ್ಕ ವಿಧಿಸುತ್ತಿಲ್ಲ. ವಿವಿಧ ಮಾರಾಟಗಾರರಿಂದ ಧ್ವಜಗಳನ್ನು ಪಡೆಯಲಾಗಿದೆ. ಪಕ್ಷದ ಕಾರ್ಯಕರ್ತರು ಕೂಡಾ ಧ್ವಜಗಳನ್ನು ಸ್ವಯಂಪ್ರೇರಿತರಾಗಿ ಹೊಲಿಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು

ಆಡಳಿತ ಪಕ್ಷ ಬಿಜೆಪಿ ಮಾರಾಟ ಮಾಡುತ್ತಿರುವ ಕೆಲವು ಧ್ವಜಗಳು ಭಾರತದ ಧ್ವಜ ಸಂಹಿತೆಯಲ್ಲಿ ಸೂಚಿಸಲಾದ ಮಾರ್ಗಸೂಚಿಗಳನ್ನು “ಸ್ಪಷ್ಟವಾಗಿ ಉಲ್ಲಂಘಿಸುತ್ತವೆ” ಎಂದು ಕಾನೂನು ತಜ್ಞರು ಹೇಳಿದ್ದಾರೆಂದು ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆ ವರದಿಯಲ್ಲಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...