Homeಮುಖಪುಟಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

ಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

- Advertisement -
- Advertisement -

ಅಮಾನವೀಯ ಹಿಂಸಾಚಾರದ ಬೆನ್ನಲ್ಲೇ ಪಶ್ಚಿಮ ದೆಹಲಿಯಲ್ಲಿ ಸಂಜೆ 7 ರಿಂದ ಮಧ್ಯರಾತ್ರಿಯ ನಡುವೆ ಐದು ಗಂಟೆಗಳ ಅವಧಿಯಲ್ಲಿ ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) 481 ಅಪಾಯದ ಕರೆಗಳು ಬಂದಿವೆ..

ಪಶ್ಚಿಮ ದೆಹಲಿಯಲ್ಲಿ 12 ಪೊಲೀಸ್ ಠಾಣೆಗಳಿದ್ದು ಈ ಕರೆಗಳಲ್ಲಿ 148 ಕರೆಗಳು ತಿಲಕ್ ನಗರ ಪ್ರದೇಶದಿಂದ ಬಂದಿದ್ದರೆ, 143 ಕರೆಗಳು ಖಯಾಲ ಪೊಲೀಸ್ ಠಾಣೆಯ ಮಿತಿಯಿಂದ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೌರಿ ಗಾರ್ಡನ್ (96), ಪಂಜಾಬಿ ಬಾಗ್ (26), ಹರಿ ನಗರ (24), ಮೋತಿ ನಗರ (17) ಮತ್ತು ಜನಕ್ಪುರಿ (11) ಮುಂತಾದ ಪ್ರದೇಶಗಳಿಂದ ಪೊಲೀಸರಿಗೆ ಕರೆಗಳು ಬಂದಿದ್ದು ಎಲ್ಲಾ ಕರೆಗಳು ನಕಲಿ ಕರೆಗಳಾಗಿವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ..

ಕರೆ ಮಾಡಿದವರೆಲ್ಲರೂ ತಮ್ಮ ಪ್ರದೇಶಗಳಲ್ಲಿ ಕೋಮು ಉದ್ವೇಗವಿದೆ ಎಂದು ಹೇಳಿಕೊಂಡಿದ್ದರು. ಈ ಬೋಗಸ್‌ ಕರೆಗಳ ಕುರಿತು ದೆಹಲಿ ಪೊಲೀಸರು ಭಾನುವಾರ ನಡೆದ ಘಟನೆಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

“ಅವೆಲ್ಲವೂ ನಕಲಿ ಕರೆಗಳಾಗಿವೆ, ಆದರೆ ಭೀತಿ ನಗರವನ್ನು ಹಿಡಿದಿಟ್ಟುಕೊಂಡಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ನಂಬಬೇಡಿ ಎಂದು ಪೊಲೀಸರು ಭಾನುವಾರ ಸಂಜೆ ಜನರಿಗೆ ಮನವಿ ಮಾಡಿದ್ದಾರೆ. ‌ಅಲ್ಲದೇ ವದಂತಿಗಳನ್ನು ಹರಡಿದ್ದಕ್ಕಾಗಿ ಕೆಲವು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

“ಈಗ ಪರಿಸ್ಥಿತಿ ತುಂಬಾ ಸಾಮಾನ್ಯವಾಗಿದೆ. ಇದು ನಿಯಂತ್ರಣದಲ್ಲಿದೆ. ನಮಗೆ ಅನೇಕ ಕರೆಗಳು ಬಂದವು. ಎಲ್ಲಾ ಕರೆಗಳು ನಕಲಿ ಎಂದು ಕಂಡುಬಂದಿದೆ. ನಾವು ಕರೆಗಳನ್ನು ಎಸ್‌ಎಚ್‌ಒಗಳು, ಇನ್ಸ್‌ಪೆಕ್ಟರ್‌ಗಳಿಗೆ ಕಳುಹಿಸಿದ್ದೇವೆ. ನಾವು ಈ ಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದೇವೆ ಎಂದು “ಆಗ್ನೇಯ ದೆಹಲಿಯ ಉಪ ಪೊಲೀಸ್ ಆಯುಕ್ತ ಆರ್.ಪಿ. ಮೀನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಕೆಲವು ಸಮಾಜ ವಿರೋಧಿಗಳು ವದಂತಿಗಳನ್ನು ಹರಡಿದ್ದಾರೆ. ನಮಗೆ ಅನೇಕ ಪಿಸಿಆರ್ ಕರೆಗಳು ಬಂದಿವೆ. ಪರಿಸ್ಥಿತಿ ಸಂಪೂರ್ಣವಾಗಿ ಸಾಮಾನ್ಯವಾಗಿದೆ. ಎಲ್ಲೆಡೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವದಂತಿಗಳಿಗೆ ಗಮನ ಕೊಡಬೇಡಿ ಮತ್ತು ಈ ಬಗ್ಗೆ ಪೊಲೀಸರಿಗೆ ತಿಳಿಸಿ” ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಂ.ಎಸ್. ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು.

“ಜನಸಾಮಾನ್ಯರಲ್ಲಿ ಭೀತಿ ಉಂಟುಮಾಡಲು ಮತ್ತು ಮಾಧ್ಯಮಗಳಿಂದ ಸಹಾನುಭೂತಿ ಮತ್ತು ಗಮನವನ್ನು ಸೆಳೆಯಲು ಈ ಕಾರ್ಯವಿಧಾನವನ್ನು ಕೆಲವು ಕಿಡಿಗೇಡಿಗಳು ಅಳವಡಿಸಿಕೊಂಡಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಪ್ರಕಾರ, ಪ್ಯಾನಿಕ್ ಕರೆಗಳು ಮಾತ್ರವಲ್ಲದೆ ವಾಟ್ಸಾಪ್ ಸಂದೇಶಗಳು ಸಹ ಪ್ರಸಾರವಾಗುತ್ತಿರುವುದು ಗೊಂದಲವನ್ನು ಹೆಚ್ಚಿಸಿದೆ.

“ಅಂತರ್ಜಾಲದಲ್ಲಿ ಇಂತಹ ಚಟುವಟಿಕೆಗಳು ಸಾಕ್ಷಿಗಳಾಗುತ್ತವೆ ಎಂಬುದನ್ನು ದಯವಿಟ್ಟು ನೆನಪಿಡಿ. ಗಲಭೆಯನ್ನು ಪ್ರಚೋದಿಸುವುದು ತೀವ್ರ ಪರಿಣಾಮಗಳನ್ನು ಉಂಟುಮಾಡುತ್ತದೆ … ಮತ್ತು ತೀವ್ರವಾದ ಅಪರಾಧ ಹೊಣೆಗಾರಿಕೆಯನ್ನು ಅನುಭವಿಸಬೇಕಾಗುತ್ತದೆ. ದಯವಿಟ್ಟು ಜವಾಬ್ದಾರಿಯುತ ನಾಗರಿಕರಾಗಿರಿ. ಯಾವುದೇ ಸಂದೇಶವನ್ನು ರವಾನಿಸುವ ಮೊದಲು ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಿ …” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...