Homeಮುಖಪುಟಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

ಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

- Advertisement -
- Advertisement -

ಅಮಾನವೀಯ ಹಿಂಸಾಚಾರದ ಬೆನ್ನಲ್ಲೇ ಪಶ್ಚಿಮ ದೆಹಲಿಯಲ್ಲಿ ಸಂಜೆ 7 ರಿಂದ ಮಧ್ಯರಾತ್ರಿಯ ನಡುವೆ ಐದು ಗಂಟೆಗಳ ಅವಧಿಯಲ್ಲಿ ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) 481 ಅಪಾಯದ ಕರೆಗಳು ಬಂದಿವೆ..

ಪಶ್ಚಿಮ ದೆಹಲಿಯಲ್ಲಿ 12 ಪೊಲೀಸ್ ಠಾಣೆಗಳಿದ್ದು ಈ ಕರೆಗಳಲ್ಲಿ 148 ಕರೆಗಳು ತಿಲಕ್ ನಗರ ಪ್ರದೇಶದಿಂದ ಬಂದಿದ್ದರೆ, 143 ಕರೆಗಳು ಖಯಾಲ ಪೊಲೀಸ್ ಠಾಣೆಯ ಮಿತಿಯಿಂದ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೌರಿ ಗಾರ್ಡನ್ (96), ಪಂಜಾಬಿ ಬಾಗ್ (26), ಹರಿ ನಗರ (24), ಮೋತಿ ನಗರ (17) ಮತ್ತು ಜನಕ್ಪುರಿ (11) ಮುಂತಾದ ಪ್ರದೇಶಗಳಿಂದ ಪೊಲೀಸರಿಗೆ ಕರೆಗಳು ಬಂದಿದ್ದು ಎಲ್ಲಾ ಕರೆಗಳು ನಕಲಿ ಕರೆಗಳಾಗಿವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ..

ಕರೆ ಮಾಡಿದವರೆಲ್ಲರೂ ತಮ್ಮ ಪ್ರದೇಶಗಳಲ್ಲಿ ಕೋಮು ಉದ್ವೇಗವಿದೆ ಎಂದು ಹೇಳಿಕೊಂಡಿದ್ದರು. ಈ ಬೋಗಸ್‌ ಕರೆಗಳ ಕುರಿತು ದೆಹಲಿ ಪೊಲೀಸರು ಭಾನುವಾರ ನಡೆದ ಘಟನೆಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

“ಅವೆಲ್ಲವೂ ನಕಲಿ ಕರೆಗಳಾಗಿವೆ, ಆದರೆ ಭೀತಿ ನಗರವನ್ನು ಹಿಡಿದಿಟ್ಟುಕೊಂಡಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ನಂಬಬೇಡಿ ಎಂದು ಪೊಲೀಸರು ಭಾನುವಾರ ಸಂಜೆ ಜನರಿಗೆ ಮನವಿ ಮಾಡಿದ್ದಾರೆ. ‌ಅಲ್ಲದೇ ವದಂತಿಗಳನ್ನು ಹರಡಿದ್ದಕ್ಕಾಗಿ ಕೆಲವು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

“ಈಗ ಪರಿಸ್ಥಿತಿ ತುಂಬಾ ಸಾಮಾನ್ಯವಾಗಿದೆ. ಇದು ನಿಯಂತ್ರಣದಲ್ಲಿದೆ. ನಮಗೆ ಅನೇಕ ಕರೆಗಳು ಬಂದವು. ಎಲ್ಲಾ ಕರೆಗಳು ನಕಲಿ ಎಂದು ಕಂಡುಬಂದಿದೆ. ನಾವು ಕರೆಗಳನ್ನು ಎಸ್‌ಎಚ್‌ಒಗಳು, ಇನ್ಸ್‌ಪೆಕ್ಟರ್‌ಗಳಿಗೆ ಕಳುಹಿಸಿದ್ದೇವೆ. ನಾವು ಈ ಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದೇವೆ ಎಂದು “ಆಗ್ನೇಯ ದೆಹಲಿಯ ಉಪ ಪೊಲೀಸ್ ಆಯುಕ್ತ ಆರ್.ಪಿ. ಮೀನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಕೆಲವು ಸಮಾಜ ವಿರೋಧಿಗಳು ವದಂತಿಗಳನ್ನು ಹರಡಿದ್ದಾರೆ. ನಮಗೆ ಅನೇಕ ಪಿಸಿಆರ್ ಕರೆಗಳು ಬಂದಿವೆ. ಪರಿಸ್ಥಿತಿ ಸಂಪೂರ್ಣವಾಗಿ ಸಾಮಾನ್ಯವಾಗಿದೆ. ಎಲ್ಲೆಡೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವದಂತಿಗಳಿಗೆ ಗಮನ ಕೊಡಬೇಡಿ ಮತ್ತು ಈ ಬಗ್ಗೆ ಪೊಲೀಸರಿಗೆ ತಿಳಿಸಿ” ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಂ.ಎಸ್. ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು.

“ಜನಸಾಮಾನ್ಯರಲ್ಲಿ ಭೀತಿ ಉಂಟುಮಾಡಲು ಮತ್ತು ಮಾಧ್ಯಮಗಳಿಂದ ಸಹಾನುಭೂತಿ ಮತ್ತು ಗಮನವನ್ನು ಸೆಳೆಯಲು ಈ ಕಾರ್ಯವಿಧಾನವನ್ನು ಕೆಲವು ಕಿಡಿಗೇಡಿಗಳು ಅಳವಡಿಸಿಕೊಂಡಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಪ್ರಕಾರ, ಪ್ಯಾನಿಕ್ ಕರೆಗಳು ಮಾತ್ರವಲ್ಲದೆ ವಾಟ್ಸಾಪ್ ಸಂದೇಶಗಳು ಸಹ ಪ್ರಸಾರವಾಗುತ್ತಿರುವುದು ಗೊಂದಲವನ್ನು ಹೆಚ್ಚಿಸಿದೆ.

“ಅಂತರ್ಜಾಲದಲ್ಲಿ ಇಂತಹ ಚಟುವಟಿಕೆಗಳು ಸಾಕ್ಷಿಗಳಾಗುತ್ತವೆ ಎಂಬುದನ್ನು ದಯವಿಟ್ಟು ನೆನಪಿಡಿ. ಗಲಭೆಯನ್ನು ಪ್ರಚೋದಿಸುವುದು ತೀವ್ರ ಪರಿಣಾಮಗಳನ್ನು ಉಂಟುಮಾಡುತ್ತದೆ … ಮತ್ತು ತೀವ್ರವಾದ ಅಪರಾಧ ಹೊಣೆಗಾರಿಕೆಯನ್ನು ಅನುಭವಿಸಬೇಕಾಗುತ್ತದೆ. ದಯವಿಟ್ಟು ಜವಾಬ್ದಾರಿಯುತ ನಾಗರಿಕರಾಗಿರಿ. ಯಾವುದೇ ಸಂದೇಶವನ್ನು ರವಾನಿಸುವ ಮೊದಲು ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಿ …” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...