Homeಮುಖಪುಟಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

ಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

- Advertisement -
- Advertisement -

ಅಮಾನವೀಯ ಹಿಂಸಾಚಾರದ ಬೆನ್ನಲ್ಲೇ ಪಶ್ಚಿಮ ದೆಹಲಿಯಲ್ಲಿ ಸಂಜೆ 7 ರಿಂದ ಮಧ್ಯರಾತ್ರಿಯ ನಡುವೆ ಐದು ಗಂಟೆಗಳ ಅವಧಿಯಲ್ಲಿ ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) 481 ಅಪಾಯದ ಕರೆಗಳು ಬಂದಿವೆ..

ಪಶ್ಚಿಮ ದೆಹಲಿಯಲ್ಲಿ 12 ಪೊಲೀಸ್ ಠಾಣೆಗಳಿದ್ದು ಈ ಕರೆಗಳಲ್ಲಿ 148 ಕರೆಗಳು ತಿಲಕ್ ನಗರ ಪ್ರದೇಶದಿಂದ ಬಂದಿದ್ದರೆ, 143 ಕರೆಗಳು ಖಯಾಲ ಪೊಲೀಸ್ ಠಾಣೆಯ ಮಿತಿಯಿಂದ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೌರಿ ಗಾರ್ಡನ್ (96), ಪಂಜಾಬಿ ಬಾಗ್ (26), ಹರಿ ನಗರ (24), ಮೋತಿ ನಗರ (17) ಮತ್ತು ಜನಕ್ಪುರಿ (11) ಮುಂತಾದ ಪ್ರದೇಶಗಳಿಂದ ಪೊಲೀಸರಿಗೆ ಕರೆಗಳು ಬಂದಿದ್ದು ಎಲ್ಲಾ ಕರೆಗಳು ನಕಲಿ ಕರೆಗಳಾಗಿವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ..

ಕರೆ ಮಾಡಿದವರೆಲ್ಲರೂ ತಮ್ಮ ಪ್ರದೇಶಗಳಲ್ಲಿ ಕೋಮು ಉದ್ವೇಗವಿದೆ ಎಂದು ಹೇಳಿಕೊಂಡಿದ್ದರು. ಈ ಬೋಗಸ್‌ ಕರೆಗಳ ಕುರಿತು ದೆಹಲಿ ಪೊಲೀಸರು ಭಾನುವಾರ ನಡೆದ ಘಟನೆಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

“ಅವೆಲ್ಲವೂ ನಕಲಿ ಕರೆಗಳಾಗಿವೆ, ಆದರೆ ಭೀತಿ ನಗರವನ್ನು ಹಿಡಿದಿಟ್ಟುಕೊಂಡಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ನಂಬಬೇಡಿ ಎಂದು ಪೊಲೀಸರು ಭಾನುವಾರ ಸಂಜೆ ಜನರಿಗೆ ಮನವಿ ಮಾಡಿದ್ದಾರೆ. ‌ಅಲ್ಲದೇ ವದಂತಿಗಳನ್ನು ಹರಡಿದ್ದಕ್ಕಾಗಿ ಕೆಲವು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

“ಈಗ ಪರಿಸ್ಥಿತಿ ತುಂಬಾ ಸಾಮಾನ್ಯವಾಗಿದೆ. ಇದು ನಿಯಂತ್ರಣದಲ್ಲಿದೆ. ನಮಗೆ ಅನೇಕ ಕರೆಗಳು ಬಂದವು. ಎಲ್ಲಾ ಕರೆಗಳು ನಕಲಿ ಎಂದು ಕಂಡುಬಂದಿದೆ. ನಾವು ಕರೆಗಳನ್ನು ಎಸ್‌ಎಚ್‌ಒಗಳು, ಇನ್ಸ್‌ಪೆಕ್ಟರ್‌ಗಳಿಗೆ ಕಳುಹಿಸಿದ್ದೇವೆ. ನಾವು ಈ ಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದೇವೆ ಎಂದು “ಆಗ್ನೇಯ ದೆಹಲಿಯ ಉಪ ಪೊಲೀಸ್ ಆಯುಕ್ತ ಆರ್.ಪಿ. ಮೀನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಕೆಲವು ಸಮಾಜ ವಿರೋಧಿಗಳು ವದಂತಿಗಳನ್ನು ಹರಡಿದ್ದಾರೆ. ನಮಗೆ ಅನೇಕ ಪಿಸಿಆರ್ ಕರೆಗಳು ಬಂದಿವೆ. ಪರಿಸ್ಥಿತಿ ಸಂಪೂರ್ಣವಾಗಿ ಸಾಮಾನ್ಯವಾಗಿದೆ. ಎಲ್ಲೆಡೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವದಂತಿಗಳಿಗೆ ಗಮನ ಕೊಡಬೇಡಿ ಮತ್ತು ಈ ಬಗ್ಗೆ ಪೊಲೀಸರಿಗೆ ತಿಳಿಸಿ” ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಂ.ಎಸ್. ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು.

“ಜನಸಾಮಾನ್ಯರಲ್ಲಿ ಭೀತಿ ಉಂಟುಮಾಡಲು ಮತ್ತು ಮಾಧ್ಯಮಗಳಿಂದ ಸಹಾನುಭೂತಿ ಮತ್ತು ಗಮನವನ್ನು ಸೆಳೆಯಲು ಈ ಕಾರ್ಯವಿಧಾನವನ್ನು ಕೆಲವು ಕಿಡಿಗೇಡಿಗಳು ಅಳವಡಿಸಿಕೊಂಡಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಪ್ರಕಾರ, ಪ್ಯಾನಿಕ್ ಕರೆಗಳು ಮಾತ್ರವಲ್ಲದೆ ವಾಟ್ಸಾಪ್ ಸಂದೇಶಗಳು ಸಹ ಪ್ರಸಾರವಾಗುತ್ತಿರುವುದು ಗೊಂದಲವನ್ನು ಹೆಚ್ಚಿಸಿದೆ.

“ಅಂತರ್ಜಾಲದಲ್ಲಿ ಇಂತಹ ಚಟುವಟಿಕೆಗಳು ಸಾಕ್ಷಿಗಳಾಗುತ್ತವೆ ಎಂಬುದನ್ನು ದಯವಿಟ್ಟು ನೆನಪಿಡಿ. ಗಲಭೆಯನ್ನು ಪ್ರಚೋದಿಸುವುದು ತೀವ್ರ ಪರಿಣಾಮಗಳನ್ನು ಉಂಟುಮಾಡುತ್ತದೆ … ಮತ್ತು ತೀವ್ರವಾದ ಅಪರಾಧ ಹೊಣೆಗಾರಿಕೆಯನ್ನು ಅನುಭವಿಸಬೇಕಾಗುತ್ತದೆ. ದಯವಿಟ್ಟು ಜವಾಬ್ದಾರಿಯುತ ನಾಗರಿಕರಾಗಿರಿ. ಯಾವುದೇ ಸಂದೇಶವನ್ನು ರವಾನಿಸುವ ಮೊದಲು ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಿ …” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...