Homeಮುಖಪುಟಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

ಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

- Advertisement -
- Advertisement -

ಅಮಾನವೀಯ ಹಿಂಸಾಚಾರದ ಬೆನ್ನಲ್ಲೇ ಪಶ್ಚಿಮ ದೆಹಲಿಯಲ್ಲಿ ಸಂಜೆ 7 ರಿಂದ ಮಧ್ಯರಾತ್ರಿಯ ನಡುವೆ ಐದು ಗಂಟೆಗಳ ಅವಧಿಯಲ್ಲಿ ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) 481 ಅಪಾಯದ ಕರೆಗಳು ಬಂದಿವೆ..

ಪಶ್ಚಿಮ ದೆಹಲಿಯಲ್ಲಿ 12 ಪೊಲೀಸ್ ಠಾಣೆಗಳಿದ್ದು ಈ ಕರೆಗಳಲ್ಲಿ 148 ಕರೆಗಳು ತಿಲಕ್ ನಗರ ಪ್ರದೇಶದಿಂದ ಬಂದಿದ್ದರೆ, 143 ಕರೆಗಳು ಖಯಾಲ ಪೊಲೀಸ್ ಠಾಣೆಯ ಮಿತಿಯಿಂದ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೌರಿ ಗಾರ್ಡನ್ (96), ಪಂಜಾಬಿ ಬಾಗ್ (26), ಹರಿ ನಗರ (24), ಮೋತಿ ನಗರ (17) ಮತ್ತು ಜನಕ್ಪುರಿ (11) ಮುಂತಾದ ಪ್ರದೇಶಗಳಿಂದ ಪೊಲೀಸರಿಗೆ ಕರೆಗಳು ಬಂದಿದ್ದು ಎಲ್ಲಾ ಕರೆಗಳು ನಕಲಿ ಕರೆಗಳಾಗಿವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ..

ಕರೆ ಮಾಡಿದವರೆಲ್ಲರೂ ತಮ್ಮ ಪ್ರದೇಶಗಳಲ್ಲಿ ಕೋಮು ಉದ್ವೇಗವಿದೆ ಎಂದು ಹೇಳಿಕೊಂಡಿದ್ದರು. ಈ ಬೋಗಸ್‌ ಕರೆಗಳ ಕುರಿತು ದೆಹಲಿ ಪೊಲೀಸರು ಭಾನುವಾರ ನಡೆದ ಘಟನೆಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

“ಅವೆಲ್ಲವೂ ನಕಲಿ ಕರೆಗಳಾಗಿವೆ, ಆದರೆ ಭೀತಿ ನಗರವನ್ನು ಹಿಡಿದಿಟ್ಟುಕೊಂಡಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ನಂಬಬೇಡಿ ಎಂದು ಪೊಲೀಸರು ಭಾನುವಾರ ಸಂಜೆ ಜನರಿಗೆ ಮನವಿ ಮಾಡಿದ್ದಾರೆ. ‌ಅಲ್ಲದೇ ವದಂತಿಗಳನ್ನು ಹರಡಿದ್ದಕ್ಕಾಗಿ ಕೆಲವು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

“ಈಗ ಪರಿಸ್ಥಿತಿ ತುಂಬಾ ಸಾಮಾನ್ಯವಾಗಿದೆ. ಇದು ನಿಯಂತ್ರಣದಲ್ಲಿದೆ. ನಮಗೆ ಅನೇಕ ಕರೆಗಳು ಬಂದವು. ಎಲ್ಲಾ ಕರೆಗಳು ನಕಲಿ ಎಂದು ಕಂಡುಬಂದಿದೆ. ನಾವು ಕರೆಗಳನ್ನು ಎಸ್‌ಎಚ್‌ಒಗಳು, ಇನ್ಸ್‌ಪೆಕ್ಟರ್‌ಗಳಿಗೆ ಕಳುಹಿಸಿದ್ದೇವೆ. ನಾವು ಈ ಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದೇವೆ ಎಂದು “ಆಗ್ನೇಯ ದೆಹಲಿಯ ಉಪ ಪೊಲೀಸ್ ಆಯುಕ್ತ ಆರ್.ಪಿ. ಮೀನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಕೆಲವು ಸಮಾಜ ವಿರೋಧಿಗಳು ವದಂತಿಗಳನ್ನು ಹರಡಿದ್ದಾರೆ. ನಮಗೆ ಅನೇಕ ಪಿಸಿಆರ್ ಕರೆಗಳು ಬಂದಿವೆ. ಪರಿಸ್ಥಿತಿ ಸಂಪೂರ್ಣವಾಗಿ ಸಾಮಾನ್ಯವಾಗಿದೆ. ಎಲ್ಲೆಡೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವದಂತಿಗಳಿಗೆ ಗಮನ ಕೊಡಬೇಡಿ ಮತ್ತು ಈ ಬಗ್ಗೆ ಪೊಲೀಸರಿಗೆ ತಿಳಿಸಿ” ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಂ.ಎಸ್. ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು.

“ಜನಸಾಮಾನ್ಯರಲ್ಲಿ ಭೀತಿ ಉಂಟುಮಾಡಲು ಮತ್ತು ಮಾಧ್ಯಮಗಳಿಂದ ಸಹಾನುಭೂತಿ ಮತ್ತು ಗಮನವನ್ನು ಸೆಳೆಯಲು ಈ ಕಾರ್ಯವಿಧಾನವನ್ನು ಕೆಲವು ಕಿಡಿಗೇಡಿಗಳು ಅಳವಡಿಸಿಕೊಂಡಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಪ್ರಕಾರ, ಪ್ಯಾನಿಕ್ ಕರೆಗಳು ಮಾತ್ರವಲ್ಲದೆ ವಾಟ್ಸಾಪ್ ಸಂದೇಶಗಳು ಸಹ ಪ್ರಸಾರವಾಗುತ್ತಿರುವುದು ಗೊಂದಲವನ್ನು ಹೆಚ್ಚಿಸಿದೆ.

“ಅಂತರ್ಜಾಲದಲ್ಲಿ ಇಂತಹ ಚಟುವಟಿಕೆಗಳು ಸಾಕ್ಷಿಗಳಾಗುತ್ತವೆ ಎಂಬುದನ್ನು ದಯವಿಟ್ಟು ನೆನಪಿಡಿ. ಗಲಭೆಯನ್ನು ಪ್ರಚೋದಿಸುವುದು ತೀವ್ರ ಪರಿಣಾಮಗಳನ್ನು ಉಂಟುಮಾಡುತ್ತದೆ … ಮತ್ತು ತೀವ್ರವಾದ ಅಪರಾಧ ಹೊಣೆಗಾರಿಕೆಯನ್ನು ಅನುಭವಿಸಬೇಕಾಗುತ್ತದೆ. ದಯವಿಟ್ಟು ಜವಾಬ್ದಾರಿಯುತ ನಾಗರಿಕರಾಗಿರಿ. ಯಾವುದೇ ಸಂದೇಶವನ್ನು ರವಾನಿಸುವ ಮೊದಲು ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಿ …” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....