Homeಮುಖಪುಟಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

ಕೇವಲ 5 ಗಂಟೆ ಅವಧಿಯಲ್ಲಿ ದೆಹಲಿ ಪೊಲೀಸರಿಗೆ ಬಂದ 481 ಅಪಾಯದ ಕರೆಗಳು! ಎಲ್ಲವೂ ಬೋಗಸ್‌

- Advertisement -
- Advertisement -

ಅಮಾನವೀಯ ಹಿಂಸಾಚಾರದ ಬೆನ್ನಲ್ಲೇ ಪಶ್ಚಿಮ ದೆಹಲಿಯಲ್ಲಿ ಸಂಜೆ 7 ರಿಂದ ಮಧ್ಯರಾತ್ರಿಯ ನಡುವೆ ಐದು ಗಂಟೆಗಳ ಅವಧಿಯಲ್ಲಿ ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) 481 ಅಪಾಯದ ಕರೆಗಳು ಬಂದಿವೆ..

ಪಶ್ಚಿಮ ದೆಹಲಿಯಲ್ಲಿ 12 ಪೊಲೀಸ್ ಠಾಣೆಗಳಿದ್ದು ಈ ಕರೆಗಳಲ್ಲಿ 148 ಕರೆಗಳು ತಿಲಕ್ ನಗರ ಪ್ರದೇಶದಿಂದ ಬಂದಿದ್ದರೆ, 143 ಕರೆಗಳು ಖಯಾಲ ಪೊಲೀಸ್ ಠಾಣೆಯ ಮಿತಿಯಿಂದ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೌರಿ ಗಾರ್ಡನ್ (96), ಪಂಜಾಬಿ ಬಾಗ್ (26), ಹರಿ ನಗರ (24), ಮೋತಿ ನಗರ (17) ಮತ್ತು ಜನಕ್ಪುರಿ (11) ಮುಂತಾದ ಪ್ರದೇಶಗಳಿಂದ ಪೊಲೀಸರಿಗೆ ಕರೆಗಳು ಬಂದಿದ್ದು ಎಲ್ಲಾ ಕರೆಗಳು ನಕಲಿ ಕರೆಗಳಾಗಿವೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ..

ಕರೆ ಮಾಡಿದವರೆಲ್ಲರೂ ತಮ್ಮ ಪ್ರದೇಶಗಳಲ್ಲಿ ಕೋಮು ಉದ್ವೇಗವಿದೆ ಎಂದು ಹೇಳಿಕೊಂಡಿದ್ದರು. ಈ ಬೋಗಸ್‌ ಕರೆಗಳ ಕುರಿತು ದೆಹಲಿ ಪೊಲೀಸರು ಭಾನುವಾರ ನಡೆದ ಘಟನೆಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

“ಅವೆಲ್ಲವೂ ನಕಲಿ ಕರೆಗಳಾಗಿವೆ, ಆದರೆ ಭೀತಿ ನಗರವನ್ನು ಹಿಡಿದಿಟ್ಟುಕೊಂಡಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ನಂಬಬೇಡಿ ಎಂದು ಪೊಲೀಸರು ಭಾನುವಾರ ಸಂಜೆ ಜನರಿಗೆ ಮನವಿ ಮಾಡಿದ್ದಾರೆ. ‌ಅಲ್ಲದೇ ವದಂತಿಗಳನ್ನು ಹರಡಿದ್ದಕ್ಕಾಗಿ ಕೆಲವು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

“ಈಗ ಪರಿಸ್ಥಿತಿ ತುಂಬಾ ಸಾಮಾನ್ಯವಾಗಿದೆ. ಇದು ನಿಯಂತ್ರಣದಲ್ಲಿದೆ. ನಮಗೆ ಅನೇಕ ಕರೆಗಳು ಬಂದವು. ಎಲ್ಲಾ ಕರೆಗಳು ನಕಲಿ ಎಂದು ಕಂಡುಬಂದಿದೆ. ನಾವು ಕರೆಗಳನ್ನು ಎಸ್‌ಎಚ್‌ಒಗಳು, ಇನ್ಸ್‌ಪೆಕ್ಟರ್‌ಗಳಿಗೆ ಕಳುಹಿಸಿದ್ದೇವೆ. ನಾವು ಈ ಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದೇವೆ ಎಂದು “ಆಗ್ನೇಯ ದೆಹಲಿಯ ಉಪ ಪೊಲೀಸ್ ಆಯುಕ್ತ ಆರ್.ಪಿ. ಮೀನಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ಕೆಲವು ಸಮಾಜ ವಿರೋಧಿಗಳು ವದಂತಿಗಳನ್ನು ಹರಡಿದ್ದಾರೆ. ನಮಗೆ ಅನೇಕ ಪಿಸಿಆರ್ ಕರೆಗಳು ಬಂದಿವೆ. ಪರಿಸ್ಥಿತಿ ಸಂಪೂರ್ಣವಾಗಿ ಸಾಮಾನ್ಯವಾಗಿದೆ. ಎಲ್ಲೆಡೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವದಂತಿಗಳಿಗೆ ಗಮನ ಕೊಡಬೇಡಿ ಮತ್ತು ಈ ಬಗ್ಗೆ ಪೊಲೀಸರಿಗೆ ತಿಳಿಸಿ” ಎಂದು ದೆಹಲಿ ಪೊಲೀಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಂ.ಎಸ್. ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು.

“ಜನಸಾಮಾನ್ಯರಲ್ಲಿ ಭೀತಿ ಉಂಟುಮಾಡಲು ಮತ್ತು ಮಾಧ್ಯಮಗಳಿಂದ ಸಹಾನುಭೂತಿ ಮತ್ತು ಗಮನವನ್ನು ಸೆಳೆಯಲು ಈ ಕಾರ್ಯವಿಧಾನವನ್ನು ಕೆಲವು ಕಿಡಿಗೇಡಿಗಳು ಅಳವಡಿಸಿಕೊಂಡಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಪ್ರಕಾರ, ಪ್ಯಾನಿಕ್ ಕರೆಗಳು ಮಾತ್ರವಲ್ಲದೆ ವಾಟ್ಸಾಪ್ ಸಂದೇಶಗಳು ಸಹ ಪ್ರಸಾರವಾಗುತ್ತಿರುವುದು ಗೊಂದಲವನ್ನು ಹೆಚ್ಚಿಸಿದೆ.

“ಅಂತರ್ಜಾಲದಲ್ಲಿ ಇಂತಹ ಚಟುವಟಿಕೆಗಳು ಸಾಕ್ಷಿಗಳಾಗುತ್ತವೆ ಎಂಬುದನ್ನು ದಯವಿಟ್ಟು ನೆನಪಿಡಿ. ಗಲಭೆಯನ್ನು ಪ್ರಚೋದಿಸುವುದು ತೀವ್ರ ಪರಿಣಾಮಗಳನ್ನು ಉಂಟುಮಾಡುತ್ತದೆ … ಮತ್ತು ತೀವ್ರವಾದ ಅಪರಾಧ ಹೊಣೆಗಾರಿಕೆಯನ್ನು ಅನುಭವಿಸಬೇಕಾಗುತ್ತದೆ. ದಯವಿಟ್ಟು ಜವಾಬ್ದಾರಿಯುತ ನಾಗರಿಕರಾಗಿರಿ. ಯಾವುದೇ ಸಂದೇಶವನ್ನು ರವಾನಿಸುವ ಮೊದಲು ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಿ …” ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...