Homeಮುಖಪುಟಅಮಿತ್ ಶಾ ಪ್ರೊಫೈಲ್‌ ಚಿತ್ರ ಡಿಲೀಟ್ ಮಾಡಿ, ಅಜಾಗರೂಕ ದೋಷ ಎಂದ ಟ್ವಿಟರ್‌!

ಅಮಿತ್ ಶಾ ಪ್ರೊಫೈಲ್‌ ಚಿತ್ರ ಡಿಲೀಟ್ ಮಾಡಿ, ಅಜಾಗರೂಕ ದೋಷ ಎಂದ ಟ್ವಿಟರ್‌!

ಸಾಮಾಜಿಕ ಮಾಧ್ಯಮವು ತನ್ನ ಜಾಗತಿಕ ಹಕ್ಕುಸ್ವಾಮ್ಯ ನೀತಿಗಳ ಅಡಿಯಲ್ಲಿ ಅಮಿತ್ ಶಾ ಅವರ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಬೇಕಾಯಿತು ಎಂದು ಟ್ವಿಟರ್ ವಕ್ತಾರರು ಮಾಹಿತಿ ನೀಡಿದ್ದಾರೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಟ್ವಿಟರ್‌ ಖಾತೆಯಿಂದ ಅವರ ಪ್ರೊಫೈಲ್‌ ಚಿತ್ರವನ್ನು ಟ್ವಿಟ್ಟರ್ ತೆಗೆದುಹಾಕಿದೆ. ಕೆಲವು ದೋಷದಿಂದಾಗಿ, ಸಾಮಾಜಿಕ ಮಾಧ್ಯಮವು ತನ್ನ ಜಾಗತಿಕ ಹಕ್ಕುಸ್ವಾಮ್ಯ ನೀತಿಗಳ ಅಡಿಯಲ್ಲಿ ಅಮಿತ್ ಶಾ ಅವರ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಬೇಕಾಯಿತು ಎಂದು ಟ್ವಿಟರ್ ವಕ್ತಾರರು ಮಾಹಿತಿ ನೀಡಿದ್ದಾರೆ.

ಶಾ ಅವರ ಅಧಿಕೃತ ಖಾತೆಯ ಪ್ರೊಫೈಲ್‌ ಚಿತ್ರದ ಮೇಲೆ ಕ್ಲಿಕಿಸಿದರೆ, ‘ಮಾಧ್ಯಮವನ್ನು ಪ್ರದರ್ಶಿಸಲಾಗದು. ಕಾಪಿರೈಟ್‌ (ಕೃತಿಸ್ವಾಮ್ಯ) ಹೊಂದಿರುವವರ ವರದಿಗೆ ಪ್ರತಿಕ್ರಿಯೆಯಾಗಿ ಈ ಚಿತ್ರವನ್ನು ತೆಗೆದುಹಾಕಲಾಗಿದೆ’ ಎಂದು ತೋರಿಸಲಾಗುತ್ತಿತ್ತು. ಇದಕ್ಕೆ ಟ್ವಿಟರ್ ಈಗ ಪ್ರತಿಕ್ರಿಯೆ ನೀಡಿದ್ದು, ಅಜಾಗರೂಕತೆಯಿಂದ ಅದು ಸಂಭವಿಸಿದೆ ಎಂದಿದೆ.

’ಅಜಾಗರೂಕ ದೋಷದಿಂದಾಗಿ, ನಮ್ಮ ಜಾಗತಿಕ ಹಕ್ಕುಸ್ವಾಮ್ಯ ನೀತಿಗಳ ಅಡಿಯಲ್ಲಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೇವು. ಈ  ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಲಾಗಿದೆ. ಸದ್ಯ ಖಾತೆಯು ಸಂಪೂರ್ಣವಾಗಿ ಕ್ರಿಯಾತ್ಮಕವಾಗಿದೆ” ಎಂದು ಟ್ವಿಟರ್‌ ವಕ್ತಾರರು ಹೇಳಿದ್ದಾರೆ.

ಇದನ್ನೂ ಓದಿ: ಬುಡಕಟ್ಟು ನಾಯಕ ಬಿರ್ಸಾ ಮುಂಡಾಗೆ ಅಮಿತ್ ಶಾ ಅವಮಾನ: ಟಿಎಂಸಿ ಆಕ್ರೋಶ

ಗುರುವಾರ, 23.6 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಶಾ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಪ್ರೊಫೈಲ್‌ ಚಿತ್ರವನ್ನು ಅವರ ತೆಗೆದುಹಾಕಲಾಗಿತ್ತು. ಇದು “ಕೃತಿಸ್ವಾಮ್ಯ ಹೊಂದಿರುವವರ ವರದಿಗೆ” ಪ್ರತಿಕ್ರಿಯೆಯಾಗಿ ಎಂದು ತಿಳಿಸಲಾಗಿತ್ತು. ಪ್ರೊಫೈಲ್‌ ಚಿತ್ರವನ್ನು ಮರುಸ್ಥಾಪಿಸಿದ ಟ್ವಿಟರ್ ಇತರ ವಿವರಗಳನ್ನು ಹಂಚಿಕೊಂಡಿಲ್ಲ.

ಕೆಲ ದಿನಗಳ ಹಿಂದಷ್ಟೇ ಕೇಂದ್ರ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಟ್ವಿಟರ್‌ಗೆ ನೋಟಿಸ್ ನೀಡಿತ್ತು. ಏಕೆಂದರೆ, ಟ್ವಿಟರ್‌ ಲಡಕ್ ಬದಲು ಲೇಹ್ ಅನ್ನು ಜಮ್ಮು ಮತ್ತು ಕಾಶ್ಮೀರದ ಭಾಗವಾಗಿ ತೋರಿತ್ತು. ಈ ಕುರಿತು ಟ್ವಿಟರ್‌ ವಿರುದ್ಧ ಕಾನೂನು ಕ್ರಮ ಏಕೆ ತೆಗೆದುಕೊಳ್ಳಬಾರದು ಎಂದು ಪ್ರಶ್ನಿಸಿ ಉತ್ತರಿಸುವಂತೆ ಐದು ದಿನಗಳ ಸಮಯ ನೀಡಿತ್ತು.


ಇದನ್ನೂ ಓದಿ: ಪಶ್ಚಿಮ ಬಂಗಾಳದ ವೈಭವ ಮರುಸ್ಥಾಪಿಸುವ ಅಗತ್ಯವಿದೆ: ಗೃಹ ಸಚಿವ ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...