Homeಕರ್ನಾಟಕಶ್ರೀರಾಮಸೇನೆ ದುಷ್ಕರ್ಮಿಗಳಿಂದ ದಾಳಿಗೊಳಾಗಿದ್ದ ನಬೀಸಾಬ್‌ರಿಂದ ‘ಮೇ ಸಾಹಿತ್ಯ ಮೇಳ’ ಉದ್ಘಾಟನೆ!

ಶ್ರೀರಾಮಸೇನೆ ದುಷ್ಕರ್ಮಿಗಳಿಂದ ದಾಳಿಗೊಳಾಗಿದ್ದ ನಬೀಸಾಬ್‌ರಿಂದ ‘ಮೇ ಸಾಹಿತ್ಯ ಮೇಳ’ ಉದ್ಘಾಟನೆ!

- Advertisement -
- Advertisement -

ಧಾರವಾಡದಲ್ಲಿ ಬಲಪಂಥೀಯ ಶ್ರೀರಾಮಸೇನೆಯ ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ. ಕಲ್ಲಂಗಡಿ ವ್ಯಾಪಾರಿ ನಬೀಸಾಬ್ ಕಿಲ್ಲೇದಾರ್‌‌ ಅವರು ‘8ನೇ ಮೇ ಸಾಹಿತ್ಯ ಮೇಳ’ದ ಉದ್ಘಾಟನೆ ನಡೆಸಲಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರಾದ ಬಸವರಾಜ್ ಸೂಳಿಬಾವಿ ಹೇಳಿದ್ದಾರೆ. ನಬೀಸಾಬ್ ಜೊತೆಗೆ ರೈತ, ಬೀಡಿ ಕಾರ್ಮಿಕ ಮಹಿಳೆ ಹಾಗೂ ಪೌರ ಕಾರ್ಮಿಕ ಮಹಿಳೆಯರು ಕೂಡಾ ಕಾರ್ಯಕ್ರಮದ ಉದ್ಘಾಟಿನೆಯಲ್ಲಿ ಇರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

8ನೇ ವರ್ಷದ ಮೇ ಸಾಹಿತ್ಯ ಮೇಳ ದಾವಣಗೆರೆಯ ತಾಜ್‌ ಪ್ಯಾಲೆಸ್‌ನಲ್ಲಿ ಈ ತಿಂಗಳ 27-28 ರಂದು ನಡೆಯಲಿದೆ. ಸಾಹಿತ್ಯ ಮೇಳವನ್ನು ಗದಗದ ‘ಲಡಾಯಿ ಪ್ರಕಾಶನ’, ಕವಲಕ್ಕಿಯ ‘ಕವಿ ಪ್ರಕಾಶನ’, ಧಾರವಾಡದ ‘ಚಿತ್ತಾರ ಕಲಾ ಬಳಗ’ ಹಾಗೂ ದಾವಣಗೆರೆಯ ‘ಮೇ ಸಾಹಿತ್ಯ ಮೇಳದ ಬಳಗ’ ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ತಿಂಗಳು ಧಾರವಾಡದ ನುಗ್ಗಿಕೇರಿಯ ಆಂಜನೇಯ ದೇವಸ್ಥಾನ ಮುಂಭಾಗದಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಶ್ರೀರಾಮಸೇನೆಯ ಕಾರ್ಯಕರ್ತರು ಹಣ್ಣಿನ ಅಂಗಡಿಯನ್ನು ಧ್ವಂಸಗೊಳಿಸಿದ್ದರು. ನಬೀಸಾಬ್‌ ಅವರು ಬಂಡವಾಳ ಹಾಕಿ ತಂದಿದ್ದ ಕಲ್ಲಂಗಡಿ ಹಣ್ಣುಗಳನ್ನು ರಸ್ತೆಯಲ್ಲಿ ಹೊಡೆದುಹಾಕಿ ವಿಕೃತಿ ಮರೆಯಲಾಗಿತ್ತು. ಕಿಡಿಗೇಡಿಗಳ ಕೃತ್ಯದಿಂದ ನಬೀಸಾಬ್‌ ಸಾಕಷ್ಟು ನಷ್ಟ ಅನುಭವಿಸಿದ್ದರು.

ಇದನ್ನೂ ಓದಿ: ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ದುಷ್ಕರ್ಮಿಗಳ ಈ ಕೃತ್ಯದ ವಿರುದ್ದ ದೇಶದಾದ್ಯಂತ ಆಕ್ರೋಶ ಕೂಡಾ ವ್ಯಕ್ತವಾಗಿ, ಜನತೆಯೂ ಸಂತ್ರಸ್ತ್ರ ನಬೀಸಾಬ್ ಅವರ ಪರವಾಗಿ ಮಾತನಾಡಿದ್ದರು ಮತ್ತು ಅವರಿಗೆ ನೆರವು ನೀಡಿದ್ದರು.

ಇದೀಗ, ಮೇ 27 ಮತ್ತು 28 ರಂದು ದಾವಣೆಗೆರೆಯಲ್ಲಿ ನಡೆಯುತ್ತಿರುವ 8ನೇ “ಮೇ ಸಾಹಿತ್ಯ ಮೇಳ” ಉದ್ಘಾಟನೆಗೆ ವ್ಯಾಪಾರಿ ನಬೀಸಾಬ್ ಕಿಲ್ಲೇದಾರ್ ಅವರನ್ನು ಆಹ್ವಾನಿಸಲಾಗಿದೆ. ಅವರ ಜೊತೆಗೆ, ರೈತ, ಬೀಡಿ ಕಾರ್ಮಿಕ ಮಹಿಳೆ ಹಾಗೂ ಪೌರ ಕಾರ್ಮಿಕ ಮಹಿಳೆಯರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

“ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುವುದು ಮತ್ತು ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಖಂಡಿಸುವುದು ನಮ್ಮ ಉದ್ದೇಶವಾಗಿದೆ” ಎಂದು ಸಾಹಿತ್ಯ ಮೇಳದ ಸಂಘಟಕರಲ್ಲಿ ಒಬ್ಬರಾದ ಬಸವರಾಜ ಸೂಳಿಭಾವಿ ಅವರು ತಿಳಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

“ಇತ್ತೀಚಿಗೆ ಧಾರವಾಡದಲ್ಲಿ ಮುಸ್ಲಿಂ ವ್ಯಾಪಾರಿಯ ಮೇಲೆ ನಡೆದ ಹಲ್ಲೆಯಂತಹ ಘಟನೆಗಳು ರಾಜ್ಯದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಿವೆ. ಸೌಹಾರ್ದತೆಯ ಸಂದೇಶವನ್ನು ಹರಡಲು ನಾವು ವಿವಿಧ ಸಮುದಾಯಗಳು ಮತ್ತು ಸಮಾಜದ ಎಲ್ಲಾ ವರ್ಗದ ಜನರನ್ನು ಆಹ್ವಾನಿಸಿದ್ದೇವೆ. ಸಾಹಿತ್ಯ ಮೇಳದಲ್ಲಿ ಭಾಗಿಯಾಗುವವರು ದೀನದಲಿತ, ಅಲ್ಪಸಂಖ್ಯಾತ ಸಮುದಾಯಗಳನ್ನು ಪ್ರತಿನಿಧಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ

ಕಾರ್ಯಕ್ರಮ ಅಯೋಜಕರಾದ ಹೆಗ್ಗೆರೆ ರಂಗಪ್ಪ ಮತ್ತು ಸನಾವುಲ್ಲಾ ನವಿಲೇಹಾಳ್ ಮಾತನಾಡಿ, “ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಸಮಾನ ಮನಸ್ಕರು, ಸಾಹಿತಿಗಳು, ಕಲಾವಿದರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಭಾಗಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಿವೃತ್ತ ಜಸ್ಟಿಸ್‌ ಕೆ.ಚಂದ್ರು, ಹೋರಾಟಗಾರ್ತಿ ಕವಿತಾ ಕೃಷ್ಣನ್‌, ಪತ್ರಕರ್ತ ಪಿ.ಸಾಯಿನಾಥ್‌ ಹಾಗೂ ಅಬ್ದುಲ್ ಸಲಾಂ ಪುತ್ತಿಗೆ ಅವರುಗಳು ಕಾರ್ಯಕ್ರಮದಲ್ಲಿ ದಿಕ್ಸೂಚಿ ಮಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...