Homeಕರ್ನಾಟಕಶ್ರೀರಾಮಸೇನೆ ದುಷ್ಕರ್ಮಿಗಳಿಂದ ದಾಳಿಗೊಳಾಗಿದ್ದ ನಬೀಸಾಬ್‌ರಿಂದ ‘ಮೇ ಸಾಹಿತ್ಯ ಮೇಳ’ ಉದ್ಘಾಟನೆ!

ಶ್ರೀರಾಮಸೇನೆ ದುಷ್ಕರ್ಮಿಗಳಿಂದ ದಾಳಿಗೊಳಾಗಿದ್ದ ನಬೀಸಾಬ್‌ರಿಂದ ‘ಮೇ ಸಾಹಿತ್ಯ ಮೇಳ’ ಉದ್ಘಾಟನೆ!

- Advertisement -
- Advertisement -

ಧಾರವಾಡದಲ್ಲಿ ಬಲಪಂಥೀಯ ಶ್ರೀರಾಮಸೇನೆಯ ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ. ಕಲ್ಲಂಗಡಿ ವ್ಯಾಪಾರಿ ನಬೀಸಾಬ್ ಕಿಲ್ಲೇದಾರ್‌‌ ಅವರು ‘8ನೇ ಮೇ ಸಾಹಿತ್ಯ ಮೇಳ’ದ ಉದ್ಘಾಟನೆ ನಡೆಸಲಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರಾದ ಬಸವರಾಜ್ ಸೂಳಿಬಾವಿ ಹೇಳಿದ್ದಾರೆ. ನಬೀಸಾಬ್ ಜೊತೆಗೆ ರೈತ, ಬೀಡಿ ಕಾರ್ಮಿಕ ಮಹಿಳೆ ಹಾಗೂ ಪೌರ ಕಾರ್ಮಿಕ ಮಹಿಳೆಯರು ಕೂಡಾ ಕಾರ್ಯಕ್ರಮದ ಉದ್ಘಾಟಿನೆಯಲ್ಲಿ ಇರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

8ನೇ ವರ್ಷದ ಮೇ ಸಾಹಿತ್ಯ ಮೇಳ ದಾವಣಗೆರೆಯ ತಾಜ್‌ ಪ್ಯಾಲೆಸ್‌ನಲ್ಲಿ ಈ ತಿಂಗಳ 27-28 ರಂದು ನಡೆಯಲಿದೆ. ಸಾಹಿತ್ಯ ಮೇಳವನ್ನು ಗದಗದ ‘ಲಡಾಯಿ ಪ್ರಕಾಶನ’, ಕವಲಕ್ಕಿಯ ‘ಕವಿ ಪ್ರಕಾಶನ’, ಧಾರವಾಡದ ‘ಚಿತ್ತಾರ ಕಲಾ ಬಳಗ’ ಹಾಗೂ ದಾವಣಗೆರೆಯ ‘ಮೇ ಸಾಹಿತ್ಯ ಮೇಳದ ಬಳಗ’ ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ತಿಂಗಳು ಧಾರವಾಡದ ನುಗ್ಗಿಕೇರಿಯ ಆಂಜನೇಯ ದೇವಸ್ಥಾನ ಮುಂಭಾಗದಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಶ್ರೀರಾಮಸೇನೆಯ ಕಾರ್ಯಕರ್ತರು ಹಣ್ಣಿನ ಅಂಗಡಿಯನ್ನು ಧ್ವಂಸಗೊಳಿಸಿದ್ದರು. ನಬೀಸಾಬ್‌ ಅವರು ಬಂಡವಾಳ ಹಾಕಿ ತಂದಿದ್ದ ಕಲ್ಲಂಗಡಿ ಹಣ್ಣುಗಳನ್ನು ರಸ್ತೆಯಲ್ಲಿ ಹೊಡೆದುಹಾಕಿ ವಿಕೃತಿ ಮರೆಯಲಾಗಿತ್ತು. ಕಿಡಿಗೇಡಿಗಳ ಕೃತ್ಯದಿಂದ ನಬೀಸಾಬ್‌ ಸಾಕಷ್ಟು ನಷ್ಟ ಅನುಭವಿಸಿದ್ದರು.

ಇದನ್ನೂ ಓದಿ: ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ದುಷ್ಕರ್ಮಿಗಳ ಈ ಕೃತ್ಯದ ವಿರುದ್ದ ದೇಶದಾದ್ಯಂತ ಆಕ್ರೋಶ ಕೂಡಾ ವ್ಯಕ್ತವಾಗಿ, ಜನತೆಯೂ ಸಂತ್ರಸ್ತ್ರ ನಬೀಸಾಬ್ ಅವರ ಪರವಾಗಿ ಮಾತನಾಡಿದ್ದರು ಮತ್ತು ಅವರಿಗೆ ನೆರವು ನೀಡಿದ್ದರು.

ಇದೀಗ, ಮೇ 27 ಮತ್ತು 28 ರಂದು ದಾವಣೆಗೆರೆಯಲ್ಲಿ ನಡೆಯುತ್ತಿರುವ 8ನೇ “ಮೇ ಸಾಹಿತ್ಯ ಮೇಳ” ಉದ್ಘಾಟನೆಗೆ ವ್ಯಾಪಾರಿ ನಬೀಸಾಬ್ ಕಿಲ್ಲೇದಾರ್ ಅವರನ್ನು ಆಹ್ವಾನಿಸಲಾಗಿದೆ. ಅವರ ಜೊತೆಗೆ, ರೈತ, ಬೀಡಿ ಕಾರ್ಮಿಕ ಮಹಿಳೆ ಹಾಗೂ ಪೌರ ಕಾರ್ಮಿಕ ಮಹಿಳೆಯರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

“ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುವುದು ಮತ್ತು ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಖಂಡಿಸುವುದು ನಮ್ಮ ಉದ್ದೇಶವಾಗಿದೆ” ಎಂದು ಸಾಹಿತ್ಯ ಮೇಳದ ಸಂಘಟಕರಲ್ಲಿ ಒಬ್ಬರಾದ ಬಸವರಾಜ ಸೂಳಿಭಾವಿ ಅವರು ತಿಳಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

“ಇತ್ತೀಚಿಗೆ ಧಾರವಾಡದಲ್ಲಿ ಮುಸ್ಲಿಂ ವ್ಯಾಪಾರಿಯ ಮೇಲೆ ನಡೆದ ಹಲ್ಲೆಯಂತಹ ಘಟನೆಗಳು ರಾಜ್ಯದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಿವೆ. ಸೌಹಾರ್ದತೆಯ ಸಂದೇಶವನ್ನು ಹರಡಲು ನಾವು ವಿವಿಧ ಸಮುದಾಯಗಳು ಮತ್ತು ಸಮಾಜದ ಎಲ್ಲಾ ವರ್ಗದ ಜನರನ್ನು ಆಹ್ವಾನಿಸಿದ್ದೇವೆ. ಸಾಹಿತ್ಯ ಮೇಳದಲ್ಲಿ ಭಾಗಿಯಾಗುವವರು ದೀನದಲಿತ, ಅಲ್ಪಸಂಖ್ಯಾತ ಸಮುದಾಯಗಳನ್ನು ಪ್ರತಿನಿಧಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ

ಕಾರ್ಯಕ್ರಮ ಅಯೋಜಕರಾದ ಹೆಗ್ಗೆರೆ ರಂಗಪ್ಪ ಮತ್ತು ಸನಾವುಲ್ಲಾ ನವಿಲೇಹಾಳ್ ಮಾತನಾಡಿ, “ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಸಮಾನ ಮನಸ್ಕರು, ಸಾಹಿತಿಗಳು, ಕಲಾವಿದರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಭಾಗಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಿವೃತ್ತ ಜಸ್ಟಿಸ್‌ ಕೆ.ಚಂದ್ರು, ಹೋರಾಟಗಾರ್ತಿ ಕವಿತಾ ಕೃಷ್ಣನ್‌, ಪತ್ರಕರ್ತ ಪಿ.ಸಾಯಿನಾಥ್‌ ಹಾಗೂ ಅಬ್ದುಲ್ ಸಲಾಂ ಪುತ್ತಿಗೆ ಅವರುಗಳು ಕಾರ್ಯಕ್ರಮದಲ್ಲಿ ದಿಕ್ಸೂಚಿ ಮಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...