Homeಕರ್ನಾಟಕಶ್ರೀರಾಮಸೇನೆ ದುಷ್ಕರ್ಮಿಗಳಿಂದ ದಾಳಿಗೊಳಾಗಿದ್ದ ನಬೀಸಾಬ್‌ರಿಂದ ‘ಮೇ ಸಾಹಿತ್ಯ ಮೇಳ’ ಉದ್ಘಾಟನೆ!

ಶ್ರೀರಾಮಸೇನೆ ದುಷ್ಕರ್ಮಿಗಳಿಂದ ದಾಳಿಗೊಳಾಗಿದ್ದ ನಬೀಸಾಬ್‌ರಿಂದ ‘ಮೇ ಸಾಹಿತ್ಯ ಮೇಳ’ ಉದ್ಘಾಟನೆ!

- Advertisement -
- Advertisement -

ಧಾರವಾಡದಲ್ಲಿ ಬಲಪಂಥೀಯ ಶ್ರೀರಾಮಸೇನೆಯ ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ. ಕಲ್ಲಂಗಡಿ ವ್ಯಾಪಾರಿ ನಬೀಸಾಬ್ ಕಿಲ್ಲೇದಾರ್‌‌ ಅವರು ‘8ನೇ ಮೇ ಸಾಹಿತ್ಯ ಮೇಳ’ದ ಉದ್ಘಾಟನೆ ನಡೆಸಲಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರಾದ ಬಸವರಾಜ್ ಸೂಳಿಬಾವಿ ಹೇಳಿದ್ದಾರೆ. ನಬೀಸಾಬ್ ಜೊತೆಗೆ ರೈತ, ಬೀಡಿ ಕಾರ್ಮಿಕ ಮಹಿಳೆ ಹಾಗೂ ಪೌರ ಕಾರ್ಮಿಕ ಮಹಿಳೆಯರು ಕೂಡಾ ಕಾರ್ಯಕ್ರಮದ ಉದ್ಘಾಟಿನೆಯಲ್ಲಿ ಇರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

8ನೇ ವರ್ಷದ ಮೇ ಸಾಹಿತ್ಯ ಮೇಳ ದಾವಣಗೆರೆಯ ತಾಜ್‌ ಪ್ಯಾಲೆಸ್‌ನಲ್ಲಿ ಈ ತಿಂಗಳ 27-28 ರಂದು ನಡೆಯಲಿದೆ. ಸಾಹಿತ್ಯ ಮೇಳವನ್ನು ಗದಗದ ‘ಲಡಾಯಿ ಪ್ರಕಾಶನ’, ಕವಲಕ್ಕಿಯ ‘ಕವಿ ಪ್ರಕಾಶನ’, ಧಾರವಾಡದ ‘ಚಿತ್ತಾರ ಕಲಾ ಬಳಗ’ ಹಾಗೂ ದಾವಣಗೆರೆಯ ‘ಮೇ ಸಾಹಿತ್ಯ ಮೇಳದ ಬಳಗ’ ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ತಿಂಗಳು ಧಾರವಾಡದ ನುಗ್ಗಿಕೇರಿಯ ಆಂಜನೇಯ ದೇವಸ್ಥಾನ ಮುಂಭಾಗದಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಶ್ರೀರಾಮಸೇನೆಯ ಕಾರ್ಯಕರ್ತರು ಹಣ್ಣಿನ ಅಂಗಡಿಯನ್ನು ಧ್ವಂಸಗೊಳಿಸಿದ್ದರು. ನಬೀಸಾಬ್‌ ಅವರು ಬಂಡವಾಳ ಹಾಕಿ ತಂದಿದ್ದ ಕಲ್ಲಂಗಡಿ ಹಣ್ಣುಗಳನ್ನು ರಸ್ತೆಯಲ್ಲಿ ಹೊಡೆದುಹಾಕಿ ವಿಕೃತಿ ಮರೆಯಲಾಗಿತ್ತು. ಕಿಡಿಗೇಡಿಗಳ ಕೃತ್ಯದಿಂದ ನಬೀಸಾಬ್‌ ಸಾಕಷ್ಟು ನಷ್ಟ ಅನುಭವಿಸಿದ್ದರು.

ಇದನ್ನೂ ಓದಿ: ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ದುಷ್ಕರ್ಮಿಗಳ ಈ ಕೃತ್ಯದ ವಿರುದ್ದ ದೇಶದಾದ್ಯಂತ ಆಕ್ರೋಶ ಕೂಡಾ ವ್ಯಕ್ತವಾಗಿ, ಜನತೆಯೂ ಸಂತ್ರಸ್ತ್ರ ನಬೀಸಾಬ್ ಅವರ ಪರವಾಗಿ ಮಾತನಾಡಿದ್ದರು ಮತ್ತು ಅವರಿಗೆ ನೆರವು ನೀಡಿದ್ದರು.

ಇದೀಗ, ಮೇ 27 ಮತ್ತು 28 ರಂದು ದಾವಣೆಗೆರೆಯಲ್ಲಿ ನಡೆಯುತ್ತಿರುವ 8ನೇ “ಮೇ ಸಾಹಿತ್ಯ ಮೇಳ” ಉದ್ಘಾಟನೆಗೆ ವ್ಯಾಪಾರಿ ನಬೀಸಾಬ್ ಕಿಲ್ಲೇದಾರ್ ಅವರನ್ನು ಆಹ್ವಾನಿಸಲಾಗಿದೆ. ಅವರ ಜೊತೆಗೆ, ರೈತ, ಬೀಡಿ ಕಾರ್ಮಿಕ ಮಹಿಳೆ ಹಾಗೂ ಪೌರ ಕಾರ್ಮಿಕ ಮಹಿಳೆಯರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

“ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುವುದು ಮತ್ತು ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಖಂಡಿಸುವುದು ನಮ್ಮ ಉದ್ದೇಶವಾಗಿದೆ” ಎಂದು ಸಾಹಿತ್ಯ ಮೇಳದ ಸಂಘಟಕರಲ್ಲಿ ಒಬ್ಬರಾದ ಬಸವರಾಜ ಸೂಳಿಭಾವಿ ಅವರು ತಿಳಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

“ಇತ್ತೀಚಿಗೆ ಧಾರವಾಡದಲ್ಲಿ ಮುಸ್ಲಿಂ ವ್ಯಾಪಾರಿಯ ಮೇಲೆ ನಡೆದ ಹಲ್ಲೆಯಂತಹ ಘಟನೆಗಳು ರಾಜ್ಯದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಿವೆ. ಸೌಹಾರ್ದತೆಯ ಸಂದೇಶವನ್ನು ಹರಡಲು ನಾವು ವಿವಿಧ ಸಮುದಾಯಗಳು ಮತ್ತು ಸಮಾಜದ ಎಲ್ಲಾ ವರ್ಗದ ಜನರನ್ನು ಆಹ್ವಾನಿಸಿದ್ದೇವೆ. ಸಾಹಿತ್ಯ ಮೇಳದಲ್ಲಿ ಭಾಗಿಯಾಗುವವರು ದೀನದಲಿತ, ಅಲ್ಪಸಂಖ್ಯಾತ ಸಮುದಾಯಗಳನ್ನು ಪ್ರತಿನಿಧಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ

ಕಾರ್ಯಕ್ರಮ ಅಯೋಜಕರಾದ ಹೆಗ್ಗೆರೆ ರಂಗಪ್ಪ ಮತ್ತು ಸನಾವುಲ್ಲಾ ನವಿಲೇಹಾಳ್ ಮಾತನಾಡಿ, “ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಸಮಾನ ಮನಸ್ಕರು, ಸಾಹಿತಿಗಳು, ಕಲಾವಿದರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಭಾಗಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಿವೃತ್ತ ಜಸ್ಟಿಸ್‌ ಕೆ.ಚಂದ್ರು, ಹೋರಾಟಗಾರ್ತಿ ಕವಿತಾ ಕೃಷ್ಣನ್‌, ಪತ್ರಕರ್ತ ಪಿ.ಸಾಯಿನಾಥ್‌ ಹಾಗೂ ಅಬ್ದುಲ್ ಸಲಾಂ ಪುತ್ತಿಗೆ ಅವರುಗಳು ಕಾರ್ಯಕ್ರಮದಲ್ಲಿ ದಿಕ್ಸೂಚಿ ಮಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...