Homeಕರ್ನಾಟಕಶ್ರೀರಾಮಸೇನೆ ದುಷ್ಕರ್ಮಿಗಳಿಂದ ದಾಳಿಗೊಳಾಗಿದ್ದ ನಬೀಸಾಬ್‌ರಿಂದ ‘ಮೇ ಸಾಹಿತ್ಯ ಮೇಳ’ ಉದ್ಘಾಟನೆ!

ಶ್ರೀರಾಮಸೇನೆ ದುಷ್ಕರ್ಮಿಗಳಿಂದ ದಾಳಿಗೊಳಾಗಿದ್ದ ನಬೀಸಾಬ್‌ರಿಂದ ‘ಮೇ ಸಾಹಿತ್ಯ ಮೇಳ’ ಉದ್ಘಾಟನೆ!

- Advertisement -
- Advertisement -

ಧಾರವಾಡದಲ್ಲಿ ಬಲಪಂಥೀಯ ಶ್ರೀರಾಮಸೇನೆಯ ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ. ಕಲ್ಲಂಗಡಿ ವ್ಯಾಪಾರಿ ನಬೀಸಾಬ್ ಕಿಲ್ಲೇದಾರ್‌‌ ಅವರು ‘8ನೇ ಮೇ ಸಾಹಿತ್ಯ ಮೇಳ’ದ ಉದ್ಘಾಟನೆ ನಡೆಸಲಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರಾದ ಬಸವರಾಜ್ ಸೂಳಿಬಾವಿ ಹೇಳಿದ್ದಾರೆ. ನಬೀಸಾಬ್ ಜೊತೆಗೆ ರೈತ, ಬೀಡಿ ಕಾರ್ಮಿಕ ಮಹಿಳೆ ಹಾಗೂ ಪೌರ ಕಾರ್ಮಿಕ ಮಹಿಳೆಯರು ಕೂಡಾ ಕಾರ್ಯಕ್ರಮದ ಉದ್ಘಾಟಿನೆಯಲ್ಲಿ ಇರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

8ನೇ ವರ್ಷದ ಮೇ ಸಾಹಿತ್ಯ ಮೇಳ ದಾವಣಗೆರೆಯ ತಾಜ್‌ ಪ್ಯಾಲೆಸ್‌ನಲ್ಲಿ ಈ ತಿಂಗಳ 27-28 ರಂದು ನಡೆಯಲಿದೆ. ಸಾಹಿತ್ಯ ಮೇಳವನ್ನು ಗದಗದ ‘ಲಡಾಯಿ ಪ್ರಕಾಶನ’, ಕವಲಕ್ಕಿಯ ‘ಕವಿ ಪ್ರಕಾಶನ’, ಧಾರವಾಡದ ‘ಚಿತ್ತಾರ ಕಲಾ ಬಳಗ’ ಹಾಗೂ ದಾವಣಗೆರೆಯ ‘ಮೇ ಸಾಹಿತ್ಯ ಮೇಳದ ಬಳಗ’ ಆಯೋಜಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ತಿಂಗಳು ಧಾರವಾಡದ ನುಗ್ಗಿಕೇರಿಯ ಆಂಜನೇಯ ದೇವಸ್ಥಾನ ಮುಂಭಾಗದಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಶ್ರೀರಾಮಸೇನೆಯ ಕಾರ್ಯಕರ್ತರು ಹಣ್ಣಿನ ಅಂಗಡಿಯನ್ನು ಧ್ವಂಸಗೊಳಿಸಿದ್ದರು. ನಬೀಸಾಬ್‌ ಅವರು ಬಂಡವಾಳ ಹಾಕಿ ತಂದಿದ್ದ ಕಲ್ಲಂಗಡಿ ಹಣ್ಣುಗಳನ್ನು ರಸ್ತೆಯಲ್ಲಿ ಹೊಡೆದುಹಾಕಿ ವಿಕೃತಿ ಮರೆಯಲಾಗಿತ್ತು. ಕಿಡಿಗೇಡಿಗಳ ಕೃತ್ಯದಿಂದ ನಬೀಸಾಬ್‌ ಸಾಕಷ್ಟು ನಷ್ಟ ಅನುಭವಿಸಿದ್ದರು.

ಇದನ್ನೂ ಓದಿ: ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ದುಷ್ಕರ್ಮಿಗಳ ಈ ಕೃತ್ಯದ ವಿರುದ್ದ ದೇಶದಾದ್ಯಂತ ಆಕ್ರೋಶ ಕೂಡಾ ವ್ಯಕ್ತವಾಗಿ, ಜನತೆಯೂ ಸಂತ್ರಸ್ತ್ರ ನಬೀಸಾಬ್ ಅವರ ಪರವಾಗಿ ಮಾತನಾಡಿದ್ದರು ಮತ್ತು ಅವರಿಗೆ ನೆರವು ನೀಡಿದ್ದರು.

ಇದೀಗ, ಮೇ 27 ಮತ್ತು 28 ರಂದು ದಾವಣೆಗೆರೆಯಲ್ಲಿ ನಡೆಯುತ್ತಿರುವ 8ನೇ “ಮೇ ಸಾಹಿತ್ಯ ಮೇಳ” ಉದ್ಘಾಟನೆಗೆ ವ್ಯಾಪಾರಿ ನಬೀಸಾಬ್ ಕಿಲ್ಲೇದಾರ್ ಅವರನ್ನು ಆಹ್ವಾನಿಸಲಾಗಿದೆ. ಅವರ ಜೊತೆಗೆ, ರೈತ, ಬೀಡಿ ಕಾರ್ಮಿಕ ಮಹಿಳೆ ಹಾಗೂ ಪೌರ ಕಾರ್ಮಿಕ ಮಹಿಳೆಯರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

“ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುವುದು ಮತ್ತು ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಖಂಡಿಸುವುದು ನಮ್ಮ ಉದ್ದೇಶವಾಗಿದೆ” ಎಂದು ಸಾಹಿತ್ಯ ಮೇಳದ ಸಂಘಟಕರಲ್ಲಿ ಒಬ್ಬರಾದ ಬಸವರಾಜ ಸೂಳಿಭಾವಿ ಅವರು ತಿಳಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

“ಇತ್ತೀಚಿಗೆ ಧಾರವಾಡದಲ್ಲಿ ಮುಸ್ಲಿಂ ವ್ಯಾಪಾರಿಯ ಮೇಲೆ ನಡೆದ ಹಲ್ಲೆಯಂತಹ ಘಟನೆಗಳು ರಾಜ್ಯದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಿವೆ. ಸೌಹಾರ್ದತೆಯ ಸಂದೇಶವನ್ನು ಹರಡಲು ನಾವು ವಿವಿಧ ಸಮುದಾಯಗಳು ಮತ್ತು ಸಮಾಜದ ಎಲ್ಲಾ ವರ್ಗದ ಜನರನ್ನು ಆಹ್ವಾನಿಸಿದ್ದೇವೆ. ಸಾಹಿತ್ಯ ಮೇಳದಲ್ಲಿ ಭಾಗಿಯಾಗುವವರು ದೀನದಲಿತ, ಅಲ್ಪಸಂಖ್ಯಾತ ಸಮುದಾಯಗಳನ್ನು ಪ್ರತಿನಿಧಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಏಳು ಬಣ್ಣಗಳ ಬಾವುಟ ಬೀಸಿ ಬಹುತ್ವ ಸಂದೇಶದೊಂದಿಗೆ ಉಡುಪಿಯ ಸಾಮರಸ್ಯ ನಡಿಗೆ

ಕಾರ್ಯಕ್ರಮ ಅಯೋಜಕರಾದ ಹೆಗ್ಗೆರೆ ರಂಗಪ್ಪ ಮತ್ತು ಸನಾವುಲ್ಲಾ ನವಿಲೇಹಾಳ್ ಮಾತನಾಡಿ, “ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ಸಮಾನ ಮನಸ್ಕರು, ಸಾಹಿತಿಗಳು, ಕಲಾವಿದರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಭಾಗಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ನಿವೃತ್ತ ಜಸ್ಟಿಸ್‌ ಕೆ.ಚಂದ್ರು, ಹೋರಾಟಗಾರ್ತಿ ಕವಿತಾ ಕೃಷ್ಣನ್‌, ಪತ್ರಕರ್ತ ಪಿ.ಸಾಯಿನಾಥ್‌ ಹಾಗೂ ಅಬ್ದುಲ್ ಸಲಾಂ ಪುತ್ತಿಗೆ ಅವರುಗಳು ಕಾರ್ಯಕ್ರಮದಲ್ಲಿ ದಿಕ್ಸೂಚಿ ಮಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...