Homeಕರೋನಾ ತಲ್ಲಣಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

- Advertisement -
- Advertisement -

`ಧರೆಹತ್ತಿ ಉರಿದೊಡೆ’ ಎಂದು ಬಸವಣ್ಣನವರು ಹೇಳಿದ್ದ ಮಾತು ಇಂದು ನಿಜವಾಗಿದೆ. ಅದನ್ನು “ಈ ಕಾಲಘಟ್ಟಕ್ಕೆ ಹೋಲಿಸಿ ನೋಡುವುದಾದರೆ ಇಂದು ವಿಶ್ವಕ್ಕೆ ಬೆಂಕಿ ಬಿದ್ದಿದಂತಿದೆ. ಈ ಸಂದರ್ಭವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕಿದ್ದ ಸರ್ಕಾರಗಳೆಲ್ಲವೂ ಕೈಚೆಲ್ಲಿ ಧರೆ ಹತ್ತಿ ಉರಿಯುವಂತೆ ಮಾಡಿವೆ” ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.

ಜನಾಗ್ರಹ ಆಂದೋಲನ ಸಂಘಟನೆ ವತಿಯಿಂದ ಪ್ರತಿ ಪಕ್ಷಗಳ ಮತ್ತು ಸರ್ವ ಸಂಘಟನೆಗಳ ತುರ್ತು ಸಮಾಲೋಚನಾ ಸಭೆಯಲ್ಲಿ ‘ಮಿಷನ್ ಸೇವ್ ಲೈಫ್’ ಯೋಜನೆಯನ್ನು ಆನ್‌ಲೈನ್ ಮೂಲಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಸಮಾಜದ ಕಟ್ಟಕಡೆಯ ಜನರಿಗೆ ಆಹಾರದ ಕಿಟ್, ಮೆಡಿಕಲ್ ಕಿಟ್ ಮತ್ತು ವೈದ್ಯಕೀಯ ನೆರವನ್ನು ಒದಗಿಸುವುದು ‘ಮಿಷನ್ ಸೇವ್ ಲೈಫ್’ನ  ಆಶಯವಾಗಿದೆ” ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಾತನಾಡಿ “ನಮಗೂ ಸುಮ್ಮನೆ ಕೂರಲು ಆಗುತ್ತಿಲ್ಲ. ನಮ್ಮಿಂದ ಸಾಧ್ಯವಿರುವ ಸಹಾಯವನ್ನು ಜನತೆಗೆ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಾಲುತ್ತಿಲ್ಲ. ಸರ್ಕಾರ ಯಾರ ಮಾತನ್ನೂ ಕೇಳಲು ಸಿದ್ಧವಿಲ್ಲ. ನಿಸ್ವಾರ್ಥವಾಗಿ ಸಾಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ನೀವೆಲ್ಲಾ ಜೊತೆಗೂಡಿಸಿರುವುದು ಸಂತಸದ ವಿಚಾರ. ನಮ್ಮ ಪಕ್ಷ ನಿಮ್ಮ ಜೊತೆಗಿದೆ. ನೀವು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಸಂಪೂರ್ಣ ಸಹಕರಿಸಿ ಜೊತೆಗೂಡುತ್ತೇವೆ” ಎಂದರು.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಸಮಾರೋಪದ ಮಾತುಗಳನ್ನಾಡಿ “ಆಸ್ಪತ್ರೆಯಲ್ಲಿ ಬೆಡ್ಡಿಲ್ಲ, ಸ್ಮಶಾನದಲ್ಲಿ ಜಾಗವಿಲ್ಲ” ಎಂಬ ಪರಿಸ್ಥಿತಿ ಏರ್ಪಟ್ಟಿದೆ. ಇಂತಹ ಹೊತ್ತಿನಲ್ಲಿ ಈ ಸಭೆಗೆ ವಿಶೇಷ ಮಹತ್ವವಿದೆ. ಸಮಾಲೋಚನಾ ಮಂಡಳಿಯನ್ನು ವಿಸ್ತರಿಸಿ, ಕೂಲಂಕೂಷ ಚರ್ಚೆ ನಡೆಸಿ ಮುಂದಿನ ಹೋರಾಟದ ಹೆಜ್ಜೆಗಳ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಆಮ್ ಆದ್ಮಿ ಪಕ್ಷದ ವರಿಷ್ಟ ಪೃಥ್ವಿರೆಡ್ಡಿ, ಸ್ವರಾಜ್ ಇಂಡಿಯಾದ ಚಾಮರಾಸ ಮಾಲಿ ಪಾಟೀಲ್, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ರೈತ ಚಳವಳಿಯ ಮುಖಂಡರುಗಳಾದ ಬಡಗಲಪುರ ನಾಗೇಂದ್ರ, ಹೆಚ್. ಸಿ. ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಾದ ಡಿ.ಜಿ. ಸಾಗರ್, ನಾಗಾವರ, ಅಲ್ಪಸಂಖ್ಯಾತ ಸಮುದಾದ ಮುಖಂಡರುಗಳಾದ ಯೂಸೂಫ್ ಕನಿ, ಅಫ್ಸರ್ ಕೊಡ್ಲಿಪೇಟೆ, ತಾಹೀರ್ ಹುಸೈನ್ ಮುಂತಾದವರು ಅಭಿಪ್ರಾಯ ಹಂಚಿಕೊಂಡರು.  ಸಲಹೆ ಮಾಡಿದರು. ಸಭೆಯಲ್ಲಿ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

  • ಕೋವಿಡ್ ಸಂಬಂಧಿತ ಎಲ್ಲಾ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಚಾಮರಾಜನಗರದಲ್ಲಿ ಸರ್ಕಾರಿ ವೈಫಲ್ಯದಿಂದಾಗಿ ಮೃತರಾದ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಬೇಕು.
  • ಎಲ್ಲಾ ವಯಸ್ಕರಿಗೂ ಸರ್ಕಾರ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು.
  • ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಸಮಗ್ರ ಪಡಿತರ ಕಿಟ್ ಅನ್ನು ಸರ್ಕಾರ ವಿತರಿಸಬೇಕು.
  • ಲಾಕ್ ಡೌನಿನಿಂದ ಕೆಲಸ ಇಲ್ಲದಾಗಿರುವ ಎಲ್ಲಾ ಶ್ರಮಜೀವಿ ಕುಟುಂಬಗಳಿಗೆ ಕೂಡಲೇ 5000 ನಗದು ವರ್ಗಾವಣೆ ಮಾಡಬೇಕು.
  • ಮೂರನೇ ಅಲೆಗೆ ತಯಾರಿಯನ್ನೂ ಮಾಡಿಕೊಳ್ಳಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ಲಭ್ಯತೆಯನ್ನು ತೀವ್ರಗತಿಯಲ್ಲಿ ಹೆಚ್ಚಿಸಬೇಕು. ಗ್ರಾಮ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ಸಮಿತಿಗಳನ್ನು ರಚಿಸಿ ಶಕ್ತಿಯುತಗೊಳಿಸಬೇಕು.
  • ಮುಂಗಾರು ಕೃಷಿ ಪ್ರಾರಂಭವಾಗುತ್ತಿದ್ದು ಈ ಸಂದರ್ಭದಲ್ಲಿ ಸರ್ಕಾರ ಗೊಬ್ಬರದ ಬೆಲೆಯನ್ನು ಏರಿಸಿರುವುದು ಖಂಡನಾರ್ಹ. ಕೂಡಲೇ ಗೊಬ್ಬರ, ಬೀಜ ಮತ್ತು ಕೃಷಿ ಪರಿಕರಗಳ ಬೆಲೆಯನ್ನು ತಗ್ಗಿಸಬೇಕು ಮತ್ತು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಸಭೆಗೆ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಸ್ವರ್ಣ ಭಟ್ ಅವರು ಸ್ವಾಗತ ಬಯಸಿದರು. ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಮು ಸೌಹಾರ್ದ ವೇದಿಕೆಯ ಕೆ.ಎಲ್. ಅಶೋಕ್ ಸಭೆಯನ್ನು ನಿರೂಪಣೆ ಮಾಡಿದರು. ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್ ಶ್ರೀಧರ್ ಸಭೆಯ ನಿರ್ಣಯಗಳನ್ನು ಮಂಡಿಸಿದರು.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...