Homeಕರೋನಾ ತಲ್ಲಣಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

- Advertisement -
- Advertisement -

`ಧರೆಹತ್ತಿ ಉರಿದೊಡೆ’ ಎಂದು ಬಸವಣ್ಣನವರು ಹೇಳಿದ್ದ ಮಾತು ಇಂದು ನಿಜವಾಗಿದೆ. ಅದನ್ನು “ಈ ಕಾಲಘಟ್ಟಕ್ಕೆ ಹೋಲಿಸಿ ನೋಡುವುದಾದರೆ ಇಂದು ವಿಶ್ವಕ್ಕೆ ಬೆಂಕಿ ಬಿದ್ದಿದಂತಿದೆ. ಈ ಸಂದರ್ಭವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕಿದ್ದ ಸರ್ಕಾರಗಳೆಲ್ಲವೂ ಕೈಚೆಲ್ಲಿ ಧರೆ ಹತ್ತಿ ಉರಿಯುವಂತೆ ಮಾಡಿವೆ” ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.

ಜನಾಗ್ರಹ ಆಂದೋಲನ ಸಂಘಟನೆ ವತಿಯಿಂದ ಪ್ರತಿ ಪಕ್ಷಗಳ ಮತ್ತು ಸರ್ವ ಸಂಘಟನೆಗಳ ತುರ್ತು ಸಮಾಲೋಚನಾ ಸಭೆಯಲ್ಲಿ ‘ಮಿಷನ್ ಸೇವ್ ಲೈಫ್’ ಯೋಜನೆಯನ್ನು ಆನ್‌ಲೈನ್ ಮೂಲಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಸಮಾಜದ ಕಟ್ಟಕಡೆಯ ಜನರಿಗೆ ಆಹಾರದ ಕಿಟ್, ಮೆಡಿಕಲ್ ಕಿಟ್ ಮತ್ತು ವೈದ್ಯಕೀಯ ನೆರವನ್ನು ಒದಗಿಸುವುದು ‘ಮಿಷನ್ ಸೇವ್ ಲೈಫ್’ನ  ಆಶಯವಾಗಿದೆ” ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಾತನಾಡಿ “ನಮಗೂ ಸುಮ್ಮನೆ ಕೂರಲು ಆಗುತ್ತಿಲ್ಲ. ನಮ್ಮಿಂದ ಸಾಧ್ಯವಿರುವ ಸಹಾಯವನ್ನು ಜನತೆಗೆ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಾಲುತ್ತಿಲ್ಲ. ಸರ್ಕಾರ ಯಾರ ಮಾತನ್ನೂ ಕೇಳಲು ಸಿದ್ಧವಿಲ್ಲ. ನಿಸ್ವಾರ್ಥವಾಗಿ ಸಾಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ನೀವೆಲ್ಲಾ ಜೊತೆಗೂಡಿಸಿರುವುದು ಸಂತಸದ ವಿಚಾರ. ನಮ್ಮ ಪಕ್ಷ ನಿಮ್ಮ ಜೊತೆಗಿದೆ. ನೀವು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಸಂಪೂರ್ಣ ಸಹಕರಿಸಿ ಜೊತೆಗೂಡುತ್ತೇವೆ” ಎಂದರು.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಸಮಾರೋಪದ ಮಾತುಗಳನ್ನಾಡಿ “ಆಸ್ಪತ್ರೆಯಲ್ಲಿ ಬೆಡ್ಡಿಲ್ಲ, ಸ್ಮಶಾನದಲ್ಲಿ ಜಾಗವಿಲ್ಲ” ಎಂಬ ಪರಿಸ್ಥಿತಿ ಏರ್ಪಟ್ಟಿದೆ. ಇಂತಹ ಹೊತ್ತಿನಲ್ಲಿ ಈ ಸಭೆಗೆ ವಿಶೇಷ ಮಹತ್ವವಿದೆ. ಸಮಾಲೋಚನಾ ಮಂಡಳಿಯನ್ನು ವಿಸ್ತರಿಸಿ, ಕೂಲಂಕೂಷ ಚರ್ಚೆ ನಡೆಸಿ ಮುಂದಿನ ಹೋರಾಟದ ಹೆಜ್ಜೆಗಳ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಆಮ್ ಆದ್ಮಿ ಪಕ್ಷದ ವರಿಷ್ಟ ಪೃಥ್ವಿರೆಡ್ಡಿ, ಸ್ವರಾಜ್ ಇಂಡಿಯಾದ ಚಾಮರಾಸ ಮಾಲಿ ಪಾಟೀಲ್, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ರೈತ ಚಳವಳಿಯ ಮುಖಂಡರುಗಳಾದ ಬಡಗಲಪುರ ನಾಗೇಂದ್ರ, ಹೆಚ್. ಸಿ. ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಾದ ಡಿ.ಜಿ. ಸಾಗರ್, ನಾಗಾವರ, ಅಲ್ಪಸಂಖ್ಯಾತ ಸಮುದಾದ ಮುಖಂಡರುಗಳಾದ ಯೂಸೂಫ್ ಕನಿ, ಅಫ್ಸರ್ ಕೊಡ್ಲಿಪೇಟೆ, ತಾಹೀರ್ ಹುಸೈನ್ ಮುಂತಾದವರು ಅಭಿಪ್ರಾಯ ಹಂಚಿಕೊಂಡರು.  ಸಲಹೆ ಮಾಡಿದರು. ಸಭೆಯಲ್ಲಿ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

  • ಕೋವಿಡ್ ಸಂಬಂಧಿತ ಎಲ್ಲಾ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಚಾಮರಾಜನಗರದಲ್ಲಿ ಸರ್ಕಾರಿ ವೈಫಲ್ಯದಿಂದಾಗಿ ಮೃತರಾದ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಬೇಕು.
  • ಎಲ್ಲಾ ವಯಸ್ಕರಿಗೂ ಸರ್ಕಾರ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು.
  • ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಸಮಗ್ರ ಪಡಿತರ ಕಿಟ್ ಅನ್ನು ಸರ್ಕಾರ ವಿತರಿಸಬೇಕು.
  • ಲಾಕ್ ಡೌನಿನಿಂದ ಕೆಲಸ ಇಲ್ಲದಾಗಿರುವ ಎಲ್ಲಾ ಶ್ರಮಜೀವಿ ಕುಟುಂಬಗಳಿಗೆ ಕೂಡಲೇ 5000 ನಗದು ವರ್ಗಾವಣೆ ಮಾಡಬೇಕು.
  • ಮೂರನೇ ಅಲೆಗೆ ತಯಾರಿಯನ್ನೂ ಮಾಡಿಕೊಳ್ಳಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ಲಭ್ಯತೆಯನ್ನು ತೀವ್ರಗತಿಯಲ್ಲಿ ಹೆಚ್ಚಿಸಬೇಕು. ಗ್ರಾಮ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ಸಮಿತಿಗಳನ್ನು ರಚಿಸಿ ಶಕ್ತಿಯುತಗೊಳಿಸಬೇಕು.
  • ಮುಂಗಾರು ಕೃಷಿ ಪ್ರಾರಂಭವಾಗುತ್ತಿದ್ದು ಈ ಸಂದರ್ಭದಲ್ಲಿ ಸರ್ಕಾರ ಗೊಬ್ಬರದ ಬೆಲೆಯನ್ನು ಏರಿಸಿರುವುದು ಖಂಡನಾರ್ಹ. ಕೂಡಲೇ ಗೊಬ್ಬರ, ಬೀಜ ಮತ್ತು ಕೃಷಿ ಪರಿಕರಗಳ ಬೆಲೆಯನ್ನು ತಗ್ಗಿಸಬೇಕು ಮತ್ತು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಸಭೆಗೆ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಸ್ವರ್ಣ ಭಟ್ ಅವರು ಸ್ವಾಗತ ಬಯಸಿದರು. ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಮು ಸೌಹಾರ್ದ ವೇದಿಕೆಯ ಕೆ.ಎಲ್. ಅಶೋಕ್ ಸಭೆಯನ್ನು ನಿರೂಪಣೆ ಮಾಡಿದರು. ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್ ಶ್ರೀಧರ್ ಸಭೆಯ ನಿರ್ಣಯಗಳನ್ನು ಮಂಡಿಸಿದರು.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...