Homeಕರೋನಾ ತಲ್ಲಣಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

- Advertisement -
- Advertisement -

`ಧರೆಹತ್ತಿ ಉರಿದೊಡೆ’ ಎಂದು ಬಸವಣ್ಣನವರು ಹೇಳಿದ್ದ ಮಾತು ಇಂದು ನಿಜವಾಗಿದೆ. ಅದನ್ನು “ಈ ಕಾಲಘಟ್ಟಕ್ಕೆ ಹೋಲಿಸಿ ನೋಡುವುದಾದರೆ ಇಂದು ವಿಶ್ವಕ್ಕೆ ಬೆಂಕಿ ಬಿದ್ದಿದಂತಿದೆ. ಈ ಸಂದರ್ಭವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕಿದ್ದ ಸರ್ಕಾರಗಳೆಲ್ಲವೂ ಕೈಚೆಲ್ಲಿ ಧರೆ ಹತ್ತಿ ಉರಿಯುವಂತೆ ಮಾಡಿವೆ” ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.

ಜನಾಗ್ರಹ ಆಂದೋಲನ ಸಂಘಟನೆ ವತಿಯಿಂದ ಪ್ರತಿ ಪಕ್ಷಗಳ ಮತ್ತು ಸರ್ವ ಸಂಘಟನೆಗಳ ತುರ್ತು ಸಮಾಲೋಚನಾ ಸಭೆಯಲ್ಲಿ ‘ಮಿಷನ್ ಸೇವ್ ಲೈಫ್’ ಯೋಜನೆಯನ್ನು ಆನ್‌ಲೈನ್ ಮೂಲಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಸಮಾಜದ ಕಟ್ಟಕಡೆಯ ಜನರಿಗೆ ಆಹಾರದ ಕಿಟ್, ಮೆಡಿಕಲ್ ಕಿಟ್ ಮತ್ತು ವೈದ್ಯಕೀಯ ನೆರವನ್ನು ಒದಗಿಸುವುದು ‘ಮಿಷನ್ ಸೇವ್ ಲೈಫ್’ನ  ಆಶಯವಾಗಿದೆ” ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಾತನಾಡಿ “ನಮಗೂ ಸುಮ್ಮನೆ ಕೂರಲು ಆಗುತ್ತಿಲ್ಲ. ನಮ್ಮಿಂದ ಸಾಧ್ಯವಿರುವ ಸಹಾಯವನ್ನು ಜನತೆಗೆ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಾಲುತ್ತಿಲ್ಲ. ಸರ್ಕಾರ ಯಾರ ಮಾತನ್ನೂ ಕೇಳಲು ಸಿದ್ಧವಿಲ್ಲ. ನಿಸ್ವಾರ್ಥವಾಗಿ ಸಾಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ನೀವೆಲ್ಲಾ ಜೊತೆಗೂಡಿಸಿರುವುದು ಸಂತಸದ ವಿಚಾರ. ನಮ್ಮ ಪಕ್ಷ ನಿಮ್ಮ ಜೊತೆಗಿದೆ. ನೀವು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಸಂಪೂರ್ಣ ಸಹಕರಿಸಿ ಜೊತೆಗೂಡುತ್ತೇವೆ” ಎಂದರು.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಸಮಾರೋಪದ ಮಾತುಗಳನ್ನಾಡಿ “ಆಸ್ಪತ್ರೆಯಲ್ಲಿ ಬೆಡ್ಡಿಲ್ಲ, ಸ್ಮಶಾನದಲ್ಲಿ ಜಾಗವಿಲ್ಲ” ಎಂಬ ಪರಿಸ್ಥಿತಿ ಏರ್ಪಟ್ಟಿದೆ. ಇಂತಹ ಹೊತ್ತಿನಲ್ಲಿ ಈ ಸಭೆಗೆ ವಿಶೇಷ ಮಹತ್ವವಿದೆ. ಸಮಾಲೋಚನಾ ಮಂಡಳಿಯನ್ನು ವಿಸ್ತರಿಸಿ, ಕೂಲಂಕೂಷ ಚರ್ಚೆ ನಡೆಸಿ ಮುಂದಿನ ಹೋರಾಟದ ಹೆಜ್ಜೆಗಳ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಆಮ್ ಆದ್ಮಿ ಪಕ್ಷದ ವರಿಷ್ಟ ಪೃಥ್ವಿರೆಡ್ಡಿ, ಸ್ವರಾಜ್ ಇಂಡಿಯಾದ ಚಾಮರಾಸ ಮಾಲಿ ಪಾಟೀಲ್, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ರೈತ ಚಳವಳಿಯ ಮುಖಂಡರುಗಳಾದ ಬಡಗಲಪುರ ನಾಗೇಂದ್ರ, ಹೆಚ್. ಸಿ. ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಾದ ಡಿ.ಜಿ. ಸಾಗರ್, ನಾಗಾವರ, ಅಲ್ಪಸಂಖ್ಯಾತ ಸಮುದಾದ ಮುಖಂಡರುಗಳಾದ ಯೂಸೂಫ್ ಕನಿ, ಅಫ್ಸರ್ ಕೊಡ್ಲಿಪೇಟೆ, ತಾಹೀರ್ ಹುಸೈನ್ ಮುಂತಾದವರು ಅಭಿಪ್ರಾಯ ಹಂಚಿಕೊಂಡರು.  ಸಲಹೆ ಮಾಡಿದರು. ಸಭೆಯಲ್ಲಿ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

  • ಕೋವಿಡ್ ಸಂಬಂಧಿತ ಎಲ್ಲಾ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಚಾಮರಾಜನಗರದಲ್ಲಿ ಸರ್ಕಾರಿ ವೈಫಲ್ಯದಿಂದಾಗಿ ಮೃತರಾದ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಬೇಕು.
  • ಎಲ್ಲಾ ವಯಸ್ಕರಿಗೂ ಸರ್ಕಾರ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು.
  • ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಸಮಗ್ರ ಪಡಿತರ ಕಿಟ್ ಅನ್ನು ಸರ್ಕಾರ ವಿತರಿಸಬೇಕು.
  • ಲಾಕ್ ಡೌನಿನಿಂದ ಕೆಲಸ ಇಲ್ಲದಾಗಿರುವ ಎಲ್ಲಾ ಶ್ರಮಜೀವಿ ಕುಟುಂಬಗಳಿಗೆ ಕೂಡಲೇ 5000 ನಗದು ವರ್ಗಾವಣೆ ಮಾಡಬೇಕು.
  • ಮೂರನೇ ಅಲೆಗೆ ತಯಾರಿಯನ್ನೂ ಮಾಡಿಕೊಳ್ಳಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ಲಭ್ಯತೆಯನ್ನು ತೀವ್ರಗತಿಯಲ್ಲಿ ಹೆಚ್ಚಿಸಬೇಕು. ಗ್ರಾಮ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ಸಮಿತಿಗಳನ್ನು ರಚಿಸಿ ಶಕ್ತಿಯುತಗೊಳಿಸಬೇಕು.
  • ಮುಂಗಾರು ಕೃಷಿ ಪ್ರಾರಂಭವಾಗುತ್ತಿದ್ದು ಈ ಸಂದರ್ಭದಲ್ಲಿ ಸರ್ಕಾರ ಗೊಬ್ಬರದ ಬೆಲೆಯನ್ನು ಏರಿಸಿರುವುದು ಖಂಡನಾರ್ಹ. ಕೂಡಲೇ ಗೊಬ್ಬರ, ಬೀಜ ಮತ್ತು ಕೃಷಿ ಪರಿಕರಗಳ ಬೆಲೆಯನ್ನು ತಗ್ಗಿಸಬೇಕು ಮತ್ತು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಸಭೆಗೆ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಸ್ವರ್ಣ ಭಟ್ ಅವರು ಸ್ವಾಗತ ಬಯಸಿದರು. ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಮು ಸೌಹಾರ್ದ ವೇದಿಕೆಯ ಕೆ.ಎಲ್. ಅಶೋಕ್ ಸಭೆಯನ್ನು ನಿರೂಪಣೆ ಮಾಡಿದರು. ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್ ಶ್ರೀಧರ್ ಸಭೆಯ ನಿರ್ಣಯಗಳನ್ನು ಮಂಡಿಸಿದರು.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...