Homeಕರೋನಾ ತಲ್ಲಣಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

- Advertisement -
- Advertisement -

`ಧರೆಹತ್ತಿ ಉರಿದೊಡೆ’ ಎಂದು ಬಸವಣ್ಣನವರು ಹೇಳಿದ್ದ ಮಾತು ಇಂದು ನಿಜವಾಗಿದೆ. ಅದನ್ನು “ಈ ಕಾಲಘಟ್ಟಕ್ಕೆ ಹೋಲಿಸಿ ನೋಡುವುದಾದರೆ ಇಂದು ವಿಶ್ವಕ್ಕೆ ಬೆಂಕಿ ಬಿದ್ದಿದಂತಿದೆ. ಈ ಸಂದರ್ಭವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕಿದ್ದ ಸರ್ಕಾರಗಳೆಲ್ಲವೂ ಕೈಚೆಲ್ಲಿ ಧರೆ ಹತ್ತಿ ಉರಿಯುವಂತೆ ಮಾಡಿವೆ” ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.

ಜನಾಗ್ರಹ ಆಂದೋಲನ ಸಂಘಟನೆ ವತಿಯಿಂದ ಪ್ರತಿ ಪಕ್ಷಗಳ ಮತ್ತು ಸರ್ವ ಸಂಘಟನೆಗಳ ತುರ್ತು ಸಮಾಲೋಚನಾ ಸಭೆಯಲ್ಲಿ ‘ಮಿಷನ್ ಸೇವ್ ಲೈಫ್’ ಯೋಜನೆಯನ್ನು ಆನ್‌ಲೈನ್ ಮೂಲಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಸಮಾಜದ ಕಟ್ಟಕಡೆಯ ಜನರಿಗೆ ಆಹಾರದ ಕಿಟ್, ಮೆಡಿಕಲ್ ಕಿಟ್ ಮತ್ತು ವೈದ್ಯಕೀಯ ನೆರವನ್ನು ಒದಗಿಸುವುದು ‘ಮಿಷನ್ ಸೇವ್ ಲೈಫ್’ನ  ಆಶಯವಾಗಿದೆ” ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಾತನಾಡಿ “ನಮಗೂ ಸುಮ್ಮನೆ ಕೂರಲು ಆಗುತ್ತಿಲ್ಲ. ನಮ್ಮಿಂದ ಸಾಧ್ಯವಿರುವ ಸಹಾಯವನ್ನು ಜನತೆಗೆ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಾಲುತ್ತಿಲ್ಲ. ಸರ್ಕಾರ ಯಾರ ಮಾತನ್ನೂ ಕೇಳಲು ಸಿದ್ಧವಿಲ್ಲ. ನಿಸ್ವಾರ್ಥವಾಗಿ ಸಾಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ನೀವೆಲ್ಲಾ ಜೊತೆಗೂಡಿಸಿರುವುದು ಸಂತಸದ ವಿಚಾರ. ನಮ್ಮ ಪಕ್ಷ ನಿಮ್ಮ ಜೊತೆಗಿದೆ. ನೀವು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಸಂಪೂರ್ಣ ಸಹಕರಿಸಿ ಜೊತೆಗೂಡುತ್ತೇವೆ” ಎಂದರು.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಸಮಾರೋಪದ ಮಾತುಗಳನ್ನಾಡಿ “ಆಸ್ಪತ್ರೆಯಲ್ಲಿ ಬೆಡ್ಡಿಲ್ಲ, ಸ್ಮಶಾನದಲ್ಲಿ ಜಾಗವಿಲ್ಲ” ಎಂಬ ಪರಿಸ್ಥಿತಿ ಏರ್ಪಟ್ಟಿದೆ. ಇಂತಹ ಹೊತ್ತಿನಲ್ಲಿ ಈ ಸಭೆಗೆ ವಿಶೇಷ ಮಹತ್ವವಿದೆ. ಸಮಾಲೋಚನಾ ಮಂಡಳಿಯನ್ನು ವಿಸ್ತರಿಸಿ, ಕೂಲಂಕೂಷ ಚರ್ಚೆ ನಡೆಸಿ ಮುಂದಿನ ಹೋರಾಟದ ಹೆಜ್ಜೆಗಳ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಆಮ್ ಆದ್ಮಿ ಪಕ್ಷದ ವರಿಷ್ಟ ಪೃಥ್ವಿರೆಡ್ಡಿ, ಸ್ವರಾಜ್ ಇಂಡಿಯಾದ ಚಾಮರಾಸ ಮಾಲಿ ಪಾಟೀಲ್, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ರೈತ ಚಳವಳಿಯ ಮುಖಂಡರುಗಳಾದ ಬಡಗಲಪುರ ನಾಗೇಂದ್ರ, ಹೆಚ್. ಸಿ. ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಾದ ಡಿ.ಜಿ. ಸಾಗರ್, ನಾಗಾವರ, ಅಲ್ಪಸಂಖ್ಯಾತ ಸಮುದಾದ ಮುಖಂಡರುಗಳಾದ ಯೂಸೂಫ್ ಕನಿ, ಅಫ್ಸರ್ ಕೊಡ್ಲಿಪೇಟೆ, ತಾಹೀರ್ ಹುಸೈನ್ ಮುಂತಾದವರು ಅಭಿಪ್ರಾಯ ಹಂಚಿಕೊಂಡರು.  ಸಲಹೆ ಮಾಡಿದರು. ಸಭೆಯಲ್ಲಿ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

  • ಕೋವಿಡ್ ಸಂಬಂಧಿತ ಎಲ್ಲಾ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಚಾಮರಾಜನಗರದಲ್ಲಿ ಸರ್ಕಾರಿ ವೈಫಲ್ಯದಿಂದಾಗಿ ಮೃತರಾದ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಬೇಕು.
  • ಎಲ್ಲಾ ವಯಸ್ಕರಿಗೂ ಸರ್ಕಾರ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು.
  • ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಸಮಗ್ರ ಪಡಿತರ ಕಿಟ್ ಅನ್ನು ಸರ್ಕಾರ ವಿತರಿಸಬೇಕು.
  • ಲಾಕ್ ಡೌನಿನಿಂದ ಕೆಲಸ ಇಲ್ಲದಾಗಿರುವ ಎಲ್ಲಾ ಶ್ರಮಜೀವಿ ಕುಟುಂಬಗಳಿಗೆ ಕೂಡಲೇ 5000 ನಗದು ವರ್ಗಾವಣೆ ಮಾಡಬೇಕು.
  • ಮೂರನೇ ಅಲೆಗೆ ತಯಾರಿಯನ್ನೂ ಮಾಡಿಕೊಳ್ಳಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ಲಭ್ಯತೆಯನ್ನು ತೀವ್ರಗತಿಯಲ್ಲಿ ಹೆಚ್ಚಿಸಬೇಕು. ಗ್ರಾಮ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ಸಮಿತಿಗಳನ್ನು ರಚಿಸಿ ಶಕ್ತಿಯುತಗೊಳಿಸಬೇಕು.
  • ಮುಂಗಾರು ಕೃಷಿ ಪ್ರಾರಂಭವಾಗುತ್ತಿದ್ದು ಈ ಸಂದರ್ಭದಲ್ಲಿ ಸರ್ಕಾರ ಗೊಬ್ಬರದ ಬೆಲೆಯನ್ನು ಏರಿಸಿರುವುದು ಖಂಡನಾರ್ಹ. ಕೂಡಲೇ ಗೊಬ್ಬರ, ಬೀಜ ಮತ್ತು ಕೃಷಿ ಪರಿಕರಗಳ ಬೆಲೆಯನ್ನು ತಗ್ಗಿಸಬೇಕು ಮತ್ತು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಸಭೆಗೆ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಸ್ವರ್ಣ ಭಟ್ ಅವರು ಸ್ವಾಗತ ಬಯಸಿದರು. ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಮು ಸೌಹಾರ್ದ ವೇದಿಕೆಯ ಕೆ.ಎಲ್. ಅಶೋಕ್ ಸಭೆಯನ್ನು ನಿರೂಪಣೆ ಮಾಡಿದರು. ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್ ಶ್ರೀಧರ್ ಸಭೆಯ ನಿರ್ಣಯಗಳನ್ನು ಮಂಡಿಸಿದರು.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...