Homeಕರೋನಾ ತಲ್ಲಣಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

- Advertisement -
- Advertisement -

`ಧರೆಹತ್ತಿ ಉರಿದೊಡೆ’ ಎಂದು ಬಸವಣ್ಣನವರು ಹೇಳಿದ್ದ ಮಾತು ಇಂದು ನಿಜವಾಗಿದೆ. ಅದನ್ನು “ಈ ಕಾಲಘಟ್ಟಕ್ಕೆ ಹೋಲಿಸಿ ನೋಡುವುದಾದರೆ ಇಂದು ವಿಶ್ವಕ್ಕೆ ಬೆಂಕಿ ಬಿದ್ದಿದಂತಿದೆ. ಈ ಸಂದರ್ಭವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕಿದ್ದ ಸರ್ಕಾರಗಳೆಲ್ಲವೂ ಕೈಚೆಲ್ಲಿ ಧರೆ ಹತ್ತಿ ಉರಿಯುವಂತೆ ಮಾಡಿವೆ” ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.

ಜನಾಗ್ರಹ ಆಂದೋಲನ ಸಂಘಟನೆ ವತಿಯಿಂದ ಪ್ರತಿ ಪಕ್ಷಗಳ ಮತ್ತು ಸರ್ವ ಸಂಘಟನೆಗಳ ತುರ್ತು ಸಮಾಲೋಚನಾ ಸಭೆಯಲ್ಲಿ ‘ಮಿಷನ್ ಸೇವ್ ಲೈಫ್’ ಯೋಜನೆಯನ್ನು ಆನ್‌ಲೈನ್ ಮೂಲಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಸಮಾಜದ ಕಟ್ಟಕಡೆಯ ಜನರಿಗೆ ಆಹಾರದ ಕಿಟ್, ಮೆಡಿಕಲ್ ಕಿಟ್ ಮತ್ತು ವೈದ್ಯಕೀಯ ನೆರವನ್ನು ಒದಗಿಸುವುದು ‘ಮಿಷನ್ ಸೇವ್ ಲೈಫ್’ನ  ಆಶಯವಾಗಿದೆ” ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಾತನಾಡಿ “ನಮಗೂ ಸುಮ್ಮನೆ ಕೂರಲು ಆಗುತ್ತಿಲ್ಲ. ನಮ್ಮಿಂದ ಸಾಧ್ಯವಿರುವ ಸಹಾಯವನ್ನು ಜನತೆಗೆ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಾಲುತ್ತಿಲ್ಲ. ಸರ್ಕಾರ ಯಾರ ಮಾತನ್ನೂ ಕೇಳಲು ಸಿದ್ಧವಿಲ್ಲ. ನಿಸ್ವಾರ್ಥವಾಗಿ ಸಾಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ನೀವೆಲ್ಲಾ ಜೊತೆಗೂಡಿಸಿರುವುದು ಸಂತಸದ ವಿಚಾರ. ನಮ್ಮ ಪಕ್ಷ ನಿಮ್ಮ ಜೊತೆಗಿದೆ. ನೀವು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಸಂಪೂರ್ಣ ಸಹಕರಿಸಿ ಜೊತೆಗೂಡುತ್ತೇವೆ” ಎಂದರು.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಸಮಾರೋಪದ ಮಾತುಗಳನ್ನಾಡಿ “ಆಸ್ಪತ್ರೆಯಲ್ಲಿ ಬೆಡ್ಡಿಲ್ಲ, ಸ್ಮಶಾನದಲ್ಲಿ ಜಾಗವಿಲ್ಲ” ಎಂಬ ಪರಿಸ್ಥಿತಿ ಏರ್ಪಟ್ಟಿದೆ. ಇಂತಹ ಹೊತ್ತಿನಲ್ಲಿ ಈ ಸಭೆಗೆ ವಿಶೇಷ ಮಹತ್ವವಿದೆ. ಸಮಾಲೋಚನಾ ಮಂಡಳಿಯನ್ನು ವಿಸ್ತರಿಸಿ, ಕೂಲಂಕೂಷ ಚರ್ಚೆ ನಡೆಸಿ ಮುಂದಿನ ಹೋರಾಟದ ಹೆಜ್ಜೆಗಳ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಆಮ್ ಆದ್ಮಿ ಪಕ್ಷದ ವರಿಷ್ಟ ಪೃಥ್ವಿರೆಡ್ಡಿ, ಸ್ವರಾಜ್ ಇಂಡಿಯಾದ ಚಾಮರಾಸ ಮಾಲಿ ಪಾಟೀಲ್, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ರೈತ ಚಳವಳಿಯ ಮುಖಂಡರುಗಳಾದ ಬಡಗಲಪುರ ನಾಗೇಂದ್ರ, ಹೆಚ್. ಸಿ. ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಾದ ಡಿ.ಜಿ. ಸಾಗರ್, ನಾಗಾವರ, ಅಲ್ಪಸಂಖ್ಯಾತ ಸಮುದಾದ ಮುಖಂಡರುಗಳಾದ ಯೂಸೂಫ್ ಕನಿ, ಅಫ್ಸರ್ ಕೊಡ್ಲಿಪೇಟೆ, ತಾಹೀರ್ ಹುಸೈನ್ ಮುಂತಾದವರು ಅಭಿಪ್ರಾಯ ಹಂಚಿಕೊಂಡರು.  ಸಲಹೆ ಮಾಡಿದರು. ಸಭೆಯಲ್ಲಿ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

  • ಕೋವಿಡ್ ಸಂಬಂಧಿತ ಎಲ್ಲಾ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಚಾಮರಾಜನಗರದಲ್ಲಿ ಸರ್ಕಾರಿ ವೈಫಲ್ಯದಿಂದಾಗಿ ಮೃತರಾದ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಬೇಕು.
  • ಎಲ್ಲಾ ವಯಸ್ಕರಿಗೂ ಸರ್ಕಾರ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು.
  • ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಸಮಗ್ರ ಪಡಿತರ ಕಿಟ್ ಅನ್ನು ಸರ್ಕಾರ ವಿತರಿಸಬೇಕು.
  • ಲಾಕ್ ಡೌನಿನಿಂದ ಕೆಲಸ ಇಲ್ಲದಾಗಿರುವ ಎಲ್ಲಾ ಶ್ರಮಜೀವಿ ಕುಟುಂಬಗಳಿಗೆ ಕೂಡಲೇ 5000 ನಗದು ವರ್ಗಾವಣೆ ಮಾಡಬೇಕು.
  • ಮೂರನೇ ಅಲೆಗೆ ತಯಾರಿಯನ್ನೂ ಮಾಡಿಕೊಳ್ಳಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ಲಭ್ಯತೆಯನ್ನು ತೀವ್ರಗತಿಯಲ್ಲಿ ಹೆಚ್ಚಿಸಬೇಕು. ಗ್ರಾಮ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ಸಮಿತಿಗಳನ್ನು ರಚಿಸಿ ಶಕ್ತಿಯುತಗೊಳಿಸಬೇಕು.
  • ಮುಂಗಾರು ಕೃಷಿ ಪ್ರಾರಂಭವಾಗುತ್ತಿದ್ದು ಈ ಸಂದರ್ಭದಲ್ಲಿ ಸರ್ಕಾರ ಗೊಬ್ಬರದ ಬೆಲೆಯನ್ನು ಏರಿಸಿರುವುದು ಖಂಡನಾರ್ಹ. ಕೂಡಲೇ ಗೊಬ್ಬರ, ಬೀಜ ಮತ್ತು ಕೃಷಿ ಪರಿಕರಗಳ ಬೆಲೆಯನ್ನು ತಗ್ಗಿಸಬೇಕು ಮತ್ತು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಸಭೆಗೆ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಸ್ವರ್ಣ ಭಟ್ ಅವರು ಸ್ವಾಗತ ಬಯಸಿದರು. ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಮು ಸೌಹಾರ್ದ ವೇದಿಕೆಯ ಕೆ.ಎಲ್. ಅಶೋಕ್ ಸಭೆಯನ್ನು ನಿರೂಪಣೆ ಮಾಡಿದರು. ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್ ಶ್ರೀಧರ್ ಸಭೆಯ ನಿರ್ಣಯಗಳನ್ನು ಮಂಡಿಸಿದರು.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....