Homeಮುಖಪುಟರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

- Advertisement -
- Advertisement -

ಸಾವಿಂಧಾನಿಕ ಹುದ್ದೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದ ದಿನ ಭಾರತೀಯ ಚಿತ್ರರಂಗದ ಹಲವು ನಟ, ನಟಿಯರು ಸಂವಿಧಾನದ ಪೀಠಿಕೆಯನ್ನು ಹಂಚಿಕೊಂಡಿದ್ದರು.

ಆರಂಭದಲ್ಲಿ ಮಲಯಾಳಂ ನಟರಾದ ಪಾರ್ವತಿ ತಿರುವೋತು, ರೀಮಾ ಕಲ್ಲಿಂಗಲ್, ಕಣಿ ಕುಸೃತಿ, ದಿವ್ಯ ಪ್ರಭಾ, ನಿರ್ದೇಶಕರಾದ ಜಿಯೋ ಬೇಬಿ, ಆಶಿಕ್ ಅಬು, ಕಮಲ್ ಕೆಎಂ ಮತ್ತು ಗಾಯಕ ಸೂರಜ್ ಸಂತೋಷ್ ಸಂವಿಧಾನದ ಪೀಠಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಧರ್ಮಾಧಾರಿತ ರಾಜಕಾರಣವನ್ನು ಖಂಡಿಸಿದ್ದರು.

ಅದೇ ದಿನ ಹಿಂದಿ ಸಿನಿಮಾ ರಂಗದ ಖ್ಯಾತ ನಟಿ ಸುಶ್ಮಿತಾ ಸೇನ್, ಕನ್ನಡದ ಪ್ರತಿಭಾವಂತ ನಟಿ ಶೃತಿ ಹರಿಹರನ್ ಕೂಡ ಸಂವಿಧಾನ ಪೀಠಿಕೆಯ ಪ್ರತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಭಾರತದ ಜಾತ್ಯಾತೀತತೆಯನ್ನು ಬೆಂಬಲಿಸಿದ್ದರು.

#Motherland ಎಂಬ ಹ್ಯಾಶ್ ಟ್ಯಾಗ್ ಬಳಸಿ ಅತುಲ್ ಮೊಂಗಿಯಾ ಪೋಸ್ಟ್‌ ಮಾಡಿದ್ದ ಸಂವಿಧಾನದ ಪೀಠಿಕೆಯ ಚಿತ್ರ ಹೊಂದಿದ್ದ ಇನ್‌ಸ್ಟಾಗ್ರಾಂ ಪೋಸ್ಟ್ ಅನ್ನು ಸುಶ್ಮಿತಾ ಸೇನ್ ಮರು ಪೋಸ್ಟ್ ಮಾಡಿದ್ದರು.

“ರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯಗೊಳಿಸುವುದನ್ನು ನೋಡುತ್ತಾ ಸುಮ್ಮನೆ ಕೂರಲಾಗದು” ಎಂಬರ್ಥದಲ್ಲಿ ನಟಿ ಶ್ರುತಿ ಹರಿಹರನ್ ಕೂಡ ಸಂವಿಧಾನ ಪೀಠಿಕೆಯನ್ನು ಹಂಚಿಕೊಂಡಿದ್ದರು.

‘ಈ ಸಮಯದಲ್ಲಿ ಸಂವಿಧಾನವನ್ನು ನೆನಪಿಸಿಕೊಳ್ಳುವುದು ಏಕೆ ಮುಖ್ಯ?’ ಎಂಬ ಪ್ರಶ್ನೆಯೊಂದಿಗೆ ಅದಕ್ಕೆ ಉತ್ತರವನ್ನೂ ಶ್ರುತಿ ಬರೆದುಕೊಂಡಿದ್ದರು.

“ಈ ಸನ್ನಿವೇಶದಲ್ಲಿ ಯಾವುದು ಉತ್ತಮವೋ ಅದರಲ್ಲೇ ಸಾಗುವುದು ಉತ್ತಮ ಎಂಬ ನಂಬಿಕೆ ನನ್ನದು. ಹೀಗಾಗಿ ಈ ಸಂದರ್ಭದಲ್ಲಿ ಸಂವಿಧಾನವನ್ನು ನೆನೆಯುವುದು ನನಗೆ ಅತ್ಯಗತ್ಯ ಎಂದೆನಿಸಿದೆ. ಯಾಕೆಂದೆ ಧರ್ಮದ ವಿಷಯದಲ್ಲಿ ದೇಶವು ತಟಸ್ಥವಾಗಿರಬೇಕು. ಯಾವುದೇ ನಿರ್ದಿಷ್ಟ ಧರ್ಮವನ್ನು ಪೋಷಿಸುವುದು ಅಥವಾ ಅದರ ವಿರುದ್ಧ ತಾರತಮ್ಯ ಮಾಡುವುದನ್ನೂ ಮಾಡಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದೆ. ಆದರೆ, ಇಂದು ಧರ್ಮವನ್ನು ರಾಜಕೀಯಗೊಳಿಸಲಾಗುತ್ತಿದೆ. ಇದನ್ನು ನೋಡಿಯೂ ಸುಮ್ಮನೆ ಕೂತು, ಗಮನಿಸುವುದೂ ಸರಿಯಲ್ಲ” ಎಂದು ಶ್ರುತಿ ಹೇಳಿದ್ದರು.

‘ಎರಡನೆಯದಾಗಿ – ಜೈ ಶ್ರೀ ರಾಮ್!

“ಹೀಗೆ ಹೇಳುವುದರಲ್ಲಿ ಯಾವುದೇ ತೊಂದರೆಗಳಿಲ್ಲ. ರಾಮನ ಗುಣಗಳಿಂದ ಯಾರು ತಾನೆ ಪ್ರೇರಿತರಾಗುವುದಿಲ್ಲ? ಹನುಮಂತನು ರಾಮ ತನ್ನಲ್ಲಿದ್ದಾನೆ ಎನ್ನುವುದನ್ನು ತೋರಿಸಲು ಎದೆಯನ್ನೇ ಸೀಳಿದ್ದು ಕಾಕತಾಳೀಯವಲ್ಲ ಎಂದು ನಾನು ಭಾವಿಸುತ್ತೇನೆ. ಬಹುಶಃ ರಾಮನನ್ನು ನಮ್ಮೊಳಗೆ ನಾವು ಹುಡುಕಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಉದ್ದೇಶಪೂರ್ವಕವಾಗಿ ರಾಮಾಯಣದೊಳಗೆ ಇದನ್ನು ಹಾಕಲಾಗಿದೆಯೇ?” ಎಂದು ಶ್ರುತಿ ಬರೆದುಕೊಂಡಿದ್ದರು.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...