Homeಮುಖಪುಟರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

- Advertisement -
- Advertisement -

ಸಾವಿಂಧಾನಿಕ ಹುದ್ದೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದ ದಿನ ಭಾರತೀಯ ಚಿತ್ರರಂಗದ ಹಲವು ನಟ, ನಟಿಯರು ಸಂವಿಧಾನದ ಪೀಠಿಕೆಯನ್ನು ಹಂಚಿಕೊಂಡಿದ್ದರು.

ಆರಂಭದಲ್ಲಿ ಮಲಯಾಳಂ ನಟರಾದ ಪಾರ್ವತಿ ತಿರುವೋತು, ರೀಮಾ ಕಲ್ಲಿಂಗಲ್, ಕಣಿ ಕುಸೃತಿ, ದಿವ್ಯ ಪ್ರಭಾ, ನಿರ್ದೇಶಕರಾದ ಜಿಯೋ ಬೇಬಿ, ಆಶಿಕ್ ಅಬು, ಕಮಲ್ ಕೆಎಂ ಮತ್ತು ಗಾಯಕ ಸೂರಜ್ ಸಂತೋಷ್ ಸಂವಿಧಾನದ ಪೀಠಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಧರ್ಮಾಧಾರಿತ ರಾಜಕಾರಣವನ್ನು ಖಂಡಿಸಿದ್ದರು.

ಅದೇ ದಿನ ಹಿಂದಿ ಸಿನಿಮಾ ರಂಗದ ಖ್ಯಾತ ನಟಿ ಸುಶ್ಮಿತಾ ಸೇನ್, ಕನ್ನಡದ ಪ್ರತಿಭಾವಂತ ನಟಿ ಶೃತಿ ಹರಿಹರನ್ ಕೂಡ ಸಂವಿಧಾನ ಪೀಠಿಕೆಯ ಪ್ರತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಭಾರತದ ಜಾತ್ಯಾತೀತತೆಯನ್ನು ಬೆಂಬಲಿಸಿದ್ದರು.

#Motherland ಎಂಬ ಹ್ಯಾಶ್ ಟ್ಯಾಗ್ ಬಳಸಿ ಅತುಲ್ ಮೊಂಗಿಯಾ ಪೋಸ್ಟ್‌ ಮಾಡಿದ್ದ ಸಂವಿಧಾನದ ಪೀಠಿಕೆಯ ಚಿತ್ರ ಹೊಂದಿದ್ದ ಇನ್‌ಸ್ಟಾಗ್ರಾಂ ಪೋಸ್ಟ್ ಅನ್ನು ಸುಶ್ಮಿತಾ ಸೇನ್ ಮರು ಪೋಸ್ಟ್ ಮಾಡಿದ್ದರು.

“ರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯಗೊಳಿಸುವುದನ್ನು ನೋಡುತ್ತಾ ಸುಮ್ಮನೆ ಕೂರಲಾಗದು” ಎಂಬರ್ಥದಲ್ಲಿ ನಟಿ ಶ್ರುತಿ ಹರಿಹರನ್ ಕೂಡ ಸಂವಿಧಾನ ಪೀಠಿಕೆಯನ್ನು ಹಂಚಿಕೊಂಡಿದ್ದರು.

‘ಈ ಸಮಯದಲ್ಲಿ ಸಂವಿಧಾನವನ್ನು ನೆನಪಿಸಿಕೊಳ್ಳುವುದು ಏಕೆ ಮುಖ್ಯ?’ ಎಂಬ ಪ್ರಶ್ನೆಯೊಂದಿಗೆ ಅದಕ್ಕೆ ಉತ್ತರವನ್ನೂ ಶ್ರುತಿ ಬರೆದುಕೊಂಡಿದ್ದರು.

“ಈ ಸನ್ನಿವೇಶದಲ್ಲಿ ಯಾವುದು ಉತ್ತಮವೋ ಅದರಲ್ಲೇ ಸಾಗುವುದು ಉತ್ತಮ ಎಂಬ ನಂಬಿಕೆ ನನ್ನದು. ಹೀಗಾಗಿ ಈ ಸಂದರ್ಭದಲ್ಲಿ ಸಂವಿಧಾನವನ್ನು ನೆನೆಯುವುದು ನನಗೆ ಅತ್ಯಗತ್ಯ ಎಂದೆನಿಸಿದೆ. ಯಾಕೆಂದೆ ಧರ್ಮದ ವಿಷಯದಲ್ಲಿ ದೇಶವು ತಟಸ್ಥವಾಗಿರಬೇಕು. ಯಾವುದೇ ನಿರ್ದಿಷ್ಟ ಧರ್ಮವನ್ನು ಪೋಷಿಸುವುದು ಅಥವಾ ಅದರ ವಿರುದ್ಧ ತಾರತಮ್ಯ ಮಾಡುವುದನ್ನೂ ಮಾಡಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದೆ. ಆದರೆ, ಇಂದು ಧರ್ಮವನ್ನು ರಾಜಕೀಯಗೊಳಿಸಲಾಗುತ್ತಿದೆ. ಇದನ್ನು ನೋಡಿಯೂ ಸುಮ್ಮನೆ ಕೂತು, ಗಮನಿಸುವುದೂ ಸರಿಯಲ್ಲ” ಎಂದು ಶ್ರುತಿ ಹೇಳಿದ್ದರು.

‘ಎರಡನೆಯದಾಗಿ – ಜೈ ಶ್ರೀ ರಾಮ್!

“ಹೀಗೆ ಹೇಳುವುದರಲ್ಲಿ ಯಾವುದೇ ತೊಂದರೆಗಳಿಲ್ಲ. ರಾಮನ ಗುಣಗಳಿಂದ ಯಾರು ತಾನೆ ಪ್ರೇರಿತರಾಗುವುದಿಲ್ಲ? ಹನುಮಂತನು ರಾಮ ತನ್ನಲ್ಲಿದ್ದಾನೆ ಎನ್ನುವುದನ್ನು ತೋರಿಸಲು ಎದೆಯನ್ನೇ ಸೀಳಿದ್ದು ಕಾಕತಾಳೀಯವಲ್ಲ ಎಂದು ನಾನು ಭಾವಿಸುತ್ತೇನೆ. ಬಹುಶಃ ರಾಮನನ್ನು ನಮ್ಮೊಳಗೆ ನಾವು ಹುಡುಕಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಉದ್ದೇಶಪೂರ್ವಕವಾಗಿ ರಾಮಾಯಣದೊಳಗೆ ಇದನ್ನು ಹಾಕಲಾಗಿದೆಯೇ?” ಎಂದು ಶ್ರುತಿ ಬರೆದುಕೊಂಡಿದ್ದರು.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...