Homeಮುಖಪುಟರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

ರಾಮಮಂದಿರ ಉದ್ಘಾಟನೆಯಂದು ಸಂವಿಧಾನದ ಪೀಠಿಕೆ ಹಂಚಿಕೊಂಡ ನಟ, ನಟಿಯರು

- Advertisement -
- Advertisement -

ಸಾವಿಂಧಾನಿಕ ಹುದ್ದೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ವಿಧಿ ವಿಧಾನಗಳ ನೇತೃತ್ವ ವಹಿಸಿದ್ದ ದಿನ ಭಾರತೀಯ ಚಿತ್ರರಂಗದ ಹಲವು ನಟ, ನಟಿಯರು ಸಂವಿಧಾನದ ಪೀಠಿಕೆಯನ್ನು ಹಂಚಿಕೊಂಡಿದ್ದರು.

ಆರಂಭದಲ್ಲಿ ಮಲಯಾಳಂ ನಟರಾದ ಪಾರ್ವತಿ ತಿರುವೋತು, ರೀಮಾ ಕಲ್ಲಿಂಗಲ್, ಕಣಿ ಕುಸೃತಿ, ದಿವ್ಯ ಪ್ರಭಾ, ನಿರ್ದೇಶಕರಾದ ಜಿಯೋ ಬೇಬಿ, ಆಶಿಕ್ ಅಬು, ಕಮಲ್ ಕೆಎಂ ಮತ್ತು ಗಾಯಕ ಸೂರಜ್ ಸಂತೋಷ್ ಸಂವಿಧಾನದ ಪೀಠಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಧರ್ಮಾಧಾರಿತ ರಾಜಕಾರಣವನ್ನು ಖಂಡಿಸಿದ್ದರು.

ಅದೇ ದಿನ ಹಿಂದಿ ಸಿನಿಮಾ ರಂಗದ ಖ್ಯಾತ ನಟಿ ಸುಶ್ಮಿತಾ ಸೇನ್, ಕನ್ನಡದ ಪ್ರತಿಭಾವಂತ ನಟಿ ಶೃತಿ ಹರಿಹರನ್ ಕೂಡ ಸಂವಿಧಾನ ಪೀಠಿಕೆಯ ಪ್ರತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಭಾರತದ ಜಾತ್ಯಾತೀತತೆಯನ್ನು ಬೆಂಬಲಿಸಿದ್ದರು.

#Motherland ಎಂಬ ಹ್ಯಾಶ್ ಟ್ಯಾಗ್ ಬಳಸಿ ಅತುಲ್ ಮೊಂಗಿಯಾ ಪೋಸ್ಟ್‌ ಮಾಡಿದ್ದ ಸಂವಿಧಾನದ ಪೀಠಿಕೆಯ ಚಿತ್ರ ಹೊಂದಿದ್ದ ಇನ್‌ಸ್ಟಾಗ್ರಾಂ ಪೋಸ್ಟ್ ಅನ್ನು ಸುಶ್ಮಿತಾ ಸೇನ್ ಮರು ಪೋಸ್ಟ್ ಮಾಡಿದ್ದರು.

“ರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯಗೊಳಿಸುವುದನ್ನು ನೋಡುತ್ತಾ ಸುಮ್ಮನೆ ಕೂರಲಾಗದು” ಎಂಬರ್ಥದಲ್ಲಿ ನಟಿ ಶ್ರುತಿ ಹರಿಹರನ್ ಕೂಡ ಸಂವಿಧಾನ ಪೀಠಿಕೆಯನ್ನು ಹಂಚಿಕೊಂಡಿದ್ದರು.

‘ಈ ಸಮಯದಲ್ಲಿ ಸಂವಿಧಾನವನ್ನು ನೆನಪಿಸಿಕೊಳ್ಳುವುದು ಏಕೆ ಮುಖ್ಯ?’ ಎಂಬ ಪ್ರಶ್ನೆಯೊಂದಿಗೆ ಅದಕ್ಕೆ ಉತ್ತರವನ್ನೂ ಶ್ರುತಿ ಬರೆದುಕೊಂಡಿದ್ದರು.

“ಈ ಸನ್ನಿವೇಶದಲ್ಲಿ ಯಾವುದು ಉತ್ತಮವೋ ಅದರಲ್ಲೇ ಸಾಗುವುದು ಉತ್ತಮ ಎಂಬ ನಂಬಿಕೆ ನನ್ನದು. ಹೀಗಾಗಿ ಈ ಸಂದರ್ಭದಲ್ಲಿ ಸಂವಿಧಾನವನ್ನು ನೆನೆಯುವುದು ನನಗೆ ಅತ್ಯಗತ್ಯ ಎಂದೆನಿಸಿದೆ. ಯಾಕೆಂದೆ ಧರ್ಮದ ವಿಷಯದಲ್ಲಿ ದೇಶವು ತಟಸ್ಥವಾಗಿರಬೇಕು. ಯಾವುದೇ ನಿರ್ದಿಷ್ಟ ಧರ್ಮವನ್ನು ಪೋಷಿಸುವುದು ಅಥವಾ ಅದರ ವಿರುದ್ಧ ತಾರತಮ್ಯ ಮಾಡುವುದನ್ನೂ ಮಾಡಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದೆ. ಆದರೆ, ಇಂದು ಧರ್ಮವನ್ನು ರಾಜಕೀಯಗೊಳಿಸಲಾಗುತ್ತಿದೆ. ಇದನ್ನು ನೋಡಿಯೂ ಸುಮ್ಮನೆ ಕೂತು, ಗಮನಿಸುವುದೂ ಸರಿಯಲ್ಲ” ಎಂದು ಶ್ರುತಿ ಹೇಳಿದ್ದರು.

‘ಎರಡನೆಯದಾಗಿ – ಜೈ ಶ್ರೀ ರಾಮ್!

“ಹೀಗೆ ಹೇಳುವುದರಲ್ಲಿ ಯಾವುದೇ ತೊಂದರೆಗಳಿಲ್ಲ. ರಾಮನ ಗುಣಗಳಿಂದ ಯಾರು ತಾನೆ ಪ್ರೇರಿತರಾಗುವುದಿಲ್ಲ? ಹನುಮಂತನು ರಾಮ ತನ್ನಲ್ಲಿದ್ದಾನೆ ಎನ್ನುವುದನ್ನು ತೋರಿಸಲು ಎದೆಯನ್ನೇ ಸೀಳಿದ್ದು ಕಾಕತಾಳೀಯವಲ್ಲ ಎಂದು ನಾನು ಭಾವಿಸುತ್ತೇನೆ. ಬಹುಶಃ ರಾಮನನ್ನು ನಮ್ಮೊಳಗೆ ನಾವು ಹುಡುಕಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಉದ್ದೇಶಪೂರ್ವಕವಾಗಿ ರಾಮಾಯಣದೊಳಗೆ ಇದನ್ನು ಹಾಕಲಾಗಿದೆಯೇ?” ಎಂದು ಶ್ರುತಿ ಬರೆದುಕೊಂಡಿದ್ದರು.

ಇದನ್ನೂ ಓದಿ : ರಾಮಮಂದಿರ ಉದ್ಘಾಟನೆ: ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ಚಿತ್ರರಂಗದ ದಿಗ್ಗಜರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...