Homeಕರ್ನಾಟಕತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ಚಿ.ನಾ.ಹಳ್ಳಿಯಲ್ಲಿ ನಿರ್ಮಿಸಿದ್ದ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದು ಸಾಹಿತಿಗಳ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದೆ.

ಧ್ವನಿ-ಬೆಳಕು ವ್ಯವಸ್ಥೆ, ಕಾಂಪೌಂಡ್ ನಿರ್ಮಾಣ ಕಾಮಗಾರಿ ಇನ್ನೂ ಮುಗಿದಿರಲಿಲ್ಲ. ಆದರು ಆತುರಾತುರವಾಗಿ ಸಚಿವ ಸಿ.ಟಿ.ರವಿ ಅವರನ್ನ ಕರೆಸಿ ಉದ್ಘಾಟಿಸುವ ಅಗತ್ಯವೇನಿತ್ತು? ತೀನಂಶ್ರೀ ಭವನ ಬೇಕೆಂದು ಹಲವು ವರ್ಷಗಳಿಂದ ಹೋರಾಡಿದ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಯಾವುದೇ ಕನ್ನಡ ಪರ ಸಂಘಟನೆಗಳು ಮತ್ತು ಸಾಹಿತಿಗಳನ್ನು ಬೇಕೆಂದೇ ಆಹ್ವಾನಿಸದೇ ಹೊರಗಿಟ್ಟಿದ್ದು ಏಕೆ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಳೆದ ಏಳೆಂಟು ವರ್ಷಗಳಿಂದಲೂ ತೀನಂಶ್ರೀ ಭವನ ನಿರ್ಮಾಣ ಮಾಡಬೇಕೆಂದು ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್, ಸಾಹಿತಿಗಳು, ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಸೆಯಾಗಿತ್ತು. ಇಂದು ತೀನಂಶ್ರೀ ಭವನ ನಿರ್ಮಾಣಗೊಳ್ಳಲು ಇದೇ ಕಾರಣ.

ಹೀಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತೀನಂಶ್ರೀ ಭವನ ಉದ್ಘಾಟನೆಗೆ ಸಿ.ಟಿ.ರವಿ ಅವರನ್ನು ಕರೆಸಿದರು. ಅಧಿಕಾರಿಗಳು ಕಾಮಗಾರಿ ಮುಗಿದಿಲ್ಲ, ಉದ್ಘಾಟಿಸುವುದು ಬೇಡವೆಂದರೂ ಸಹ, ಸಚಿವ ಮಾಧುಸ್ವಾಮಿ ‘ಇಲ್ರೀ, ನಾನು ಹೇಳಿದಷ್ಟು ಕೇಳ್ರಿ’ ಎಂದು ಎಚ್ಚರಿಕೆ ಕೊಟ್ಟರು ಎನ್ನಲಾಗಿದೆ.

ಸಚಿವರ ಸೂಚನೆ ಮೇರೆಗೆ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿದ್ದರು. ಸೌಜನ್ಯಕ್ಕೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ಯಾವುದೇ ಪದಾಧಿಕಾರಿಗಳು, ಸಾಹಿತಿಗಳಿಗೂ ಮಾಹಿತಿ ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ಕಸಾಪ ಹೆಸರು ಮುದ್ರಿಸಿದ್ದಾರೆ.

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

ಯಾರಿಗೂ ಮಾಹಿತಿಯೇ ಇಲ್ಲದಂತೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಚಿಕ್ಕನಾಯಕನಹಳ್ಳಿಯವರೇ ಆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು, ಸಾಹಿತಿಗಳು ಆದ ಎಸ್.ಜಿ ಸಿದ್ದರಾಮಯ್ಯ. ಸಂಶೋಧಕ ಕೆ.ಬಿ.ಶಿವತಾರಕ್, ತಿಮ್ಮನಹಳ್ಳಿ ವೇಣುಗೋಪಾಲ್, ನಟರಾಜ್ ಹುಳಿಯಾರ್, ಹುಳಿಯಾರು ಕಾಲೇಜಿನ ಪ್ರಾಂಶುಪಾಲರು, ಲೇಖಕರಾದ ಬಿಳಿಗೆರೆ ಕೃಷ್ಣಮೂರ್ತಿ, ಕೃಷಿಕ ಸಾಹಿತಿ ಬಾಳೇಕಾಯಿ ಶಿವ ನಂಜಪ್ಪ ಹೀಗೆ ಜಿಲ್ಲೆಯ ಯಾವ ಪ್ರಾತಿನಿಧಿಕ ಸಾಹಿತಿಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನೂ ಮುದ್ರಿಸಲಿಲ್ಲ.

ಇದನ್ನೂ ಓದಿ: ಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಜಿಲ್ಲೆಯ ಎಲ್ಲಾ ಸಾಹಿತಿಗಳು ಪ್ರಗತಿಪರ ನಿಲುವುಳ್ಳವರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರ ನಿಲುವುಗಳಿಗೆ ವಿರುದ್ಧ ಚಿಂತನೆಗಳನ್ನು ಬೆಳೆಸಿಕೊಂಡವರು. ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ಟೀಕೆಗೆ ಒಳಪಡಿಸುವವರು ಎಂಬ ಕಾರಣಕ್ಕೆ ಉದ್ದೇಶಪೂರಕವಾಗಿಯೇ ದೂರ ಇಡಲಾಯಿತು. ಅಷ್ಟೇ ಅಲ್ಲ ಜಿಲ್ಲಾ ಉಸ್ತುವಾರಿ ಸಚಿವರು ‘ತುಮಕೂರು ಮೋದಿ’  ಇದ್ದಂತೆ. ಸರ್ವಾಧಿಕಾರಿ ಧೋರಣೆಗೆ ಮತ್ತೊಂದು ಹೆಸರು ಜೆ.ಸಿ.ಮಾಧುಸ್ವಾಮಿ. ಅವರು ಹೇಳಿದ್ದೇ ವೇದವಾಕ್ಯ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಿ.ಟಿ. ರವಿಯವರ ಚಿಂತನೆಗೆ ವಿರುದ್ಧವಾಗಿ ನಡೆದುಕೊಳ್ಳಬಾರದೆಂಬ ಕಾರಣಕ್ಕಾಗಿ ಎಲ್ಲರನ್ನೂ ದೂರವಿಟ್ಟರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, “ತೀನಂಶ್ರೀ ಪ್ರಸಿದ್ದ ವಿದ್ವಾಂಸರು. ಕನ್ನಡ ಸಾರಸ್ವತ ಲೋಕಕ್ಕೆ ಇವರ ಕೊಡುಗೆ ಅಪಾರವಾದುದು. ಇಂತಹವರ ಹೆಸರಿನಲ್ಲಿ ಸಾಹಿತ್ಯ ಭವನ ನಿರ್ಮಾಣವಾಗತೊಡಗಿದ್ದು ಸಾಹಿತ್ಯ ವಲಯದಲ್ಲಿ ಹೆಮ್ಮೆಯ ಸಂಗತಿಯಾಗಿತ್ತು. ಆದರೆ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆಯಾಗಿದ್ದು ಸಾಹಿತ್ಯಾಸಕ್ತರಿಗೆ ನಿರಾಸೆ ತಂದಿದೆ” ಎಂದಿದ್ದಾರೆ.

“ತೀನಂಶ್ರೀ ಅವರಿಗೆ ಘನತೆ-ಗೌರವ ತರುವ ರೀತಿಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ವಿಚಾರ ಸಂಕಿರಣ ಏರ್ಪಡಿಸುವ ಮೂಲಕ ಒಂದು ಸಾಹಿತ್ಯ-ಸಂಸ್ಕಂತಿಯ ಹಬ್ಬದಂತೆ ಮಾಡಬಹುದಿತ್ತು. ಇದ್ಯಾವುದೂ ಆಗಲಿಲ್ಲ ಎಂಬ ನೋವು ಇದೆ. ಸಾಹಿತಿ, ಲೇಖಕ, ಶಿಷ್ಯವೃಂದ, ಸಾಹಿತ್ಯಾಸಕ್ತರ ಅನುಪಸ್ಥಿತಿಯಲ್ಲಿ ತೀನಂಶ್ರೀ ಭವನ ಅನಾಥವಾಗಿ ಲೋಕಾರ್ಪಣೆಗೊಂಡಿದ್ದು ನೋವಿನ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಒಂದೇ ಧೋರಣೆಯವರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈಗಿನ ಸರ್ಕಾರ ಭಿನ್ನ ನಿಲುವುಗಳನ್ನು ವ್ಯಕ್ತಪಡಿಸುವ ಸಾಹಿತಿ-ಕಲಾವಿದರನ್ನು ತೀನಂಶ್ರೀ ಭವನ ಉದ್ಘಾಟನೆಯಂಥ ಸಾಂಸ್ಕೃತಿಕ ಕಾರ್ಯಕ್ರಮದಿಂದ ಹೊರಗಿಟ್ಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ವೇದಿಕೆಯಲ್ಲಿ ಟಿ.ಎಸ್.ನಾಗರಾಜರಾವ್ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾವುದೇ ಸಾಹಿತಿ ಇರಲಿಲ್ಲ. ಬಿಜೆಪಿ ಸರ್ಕಾರದ ಚಿಂತನೆಗಳು ಮತ್ತು ಧೋರಣೆಗಳಿಗೆ ಹತ್ತಿರವಾಗಿರುವ ನಾಗರಾಜ್ ರಾವ್ ಅವರ ಹೆಸರನ್ನು ಹಾಕದಿದ್ದರೂ ಸ್ವಾಗತ ಮಾಡಿದ್ದು ಅವರೇ ಎಂದು ಕಾರ್ಯಕ್ರಮಕ್ಕೆ ಭಾಗಿಯಾಗಿದ್ದವರು ತಿಳಿಸಿದರು.

ತೀನಂಶ್ರೀ ಭನವ ಉದ್ಘಾಟನೆಗೆ ಅವರ ಶಿಷ್ಯ ವೃಂದವನ್ನೂ ಆಹ್ವಾನಿಸಿಲ್ಲ. ಜಿಲ್ಲೆಯ ಸಾಹಿತಿ-ಚಿಂತಕರನ್ನು ಕರೆದಿಲ್ಲ. ಇದು ಸಾಹಿತ್ಯ ವಲಯದಲ್ಲಿ, ಕನ್ನಡಪರ ಸಂಘಟನೆಗಳ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದೆ.

ಸಿ.ಟಿ.ರವಿ ಮತ್ತು ಜೆ.ಸಿ.ಮಾಧುಸ್ವಾಮಿ ಸಚಿವದ್ವಯರಿಗೆ ಸಾಹಿತಿಗಳನ್ನು ಕಂಡರೆ ಆಗುವುದಿಲ್ಲ. ಸಾಹಿತಿಗಳ ಭಿನ್ನ ನಿಲುವುಗಳನ್ನು ಸಹಿಕೊಳ್ಳದ ಉಸ್ತುವಾರಿ ಸಚಿವರು ಏಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...