Homeಕರ್ನಾಟಕತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ಚಿ.ನಾ.ಹಳ್ಳಿಯಲ್ಲಿ ನಿರ್ಮಿಸಿದ್ದ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದು ಸಾಹಿತಿಗಳ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದೆ.

ಧ್ವನಿ-ಬೆಳಕು ವ್ಯವಸ್ಥೆ, ಕಾಂಪೌಂಡ್ ನಿರ್ಮಾಣ ಕಾಮಗಾರಿ ಇನ್ನೂ ಮುಗಿದಿರಲಿಲ್ಲ. ಆದರು ಆತುರಾತುರವಾಗಿ ಸಚಿವ ಸಿ.ಟಿ.ರವಿ ಅವರನ್ನ ಕರೆಸಿ ಉದ್ಘಾಟಿಸುವ ಅಗತ್ಯವೇನಿತ್ತು? ತೀನಂಶ್ರೀ ಭವನ ಬೇಕೆಂದು ಹಲವು ವರ್ಷಗಳಿಂದ ಹೋರಾಡಿದ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಯಾವುದೇ ಕನ್ನಡ ಪರ ಸಂಘಟನೆಗಳು ಮತ್ತು ಸಾಹಿತಿಗಳನ್ನು ಬೇಕೆಂದೇ ಆಹ್ವಾನಿಸದೇ ಹೊರಗಿಟ್ಟಿದ್ದು ಏಕೆ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಳೆದ ಏಳೆಂಟು ವರ್ಷಗಳಿಂದಲೂ ತೀನಂಶ್ರೀ ಭವನ ನಿರ್ಮಾಣ ಮಾಡಬೇಕೆಂದು ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್, ಸಾಹಿತಿಗಳು, ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಸೆಯಾಗಿತ್ತು. ಇಂದು ತೀನಂಶ್ರೀ ಭವನ ನಿರ್ಮಾಣಗೊಳ್ಳಲು ಇದೇ ಕಾರಣ.

ಹೀಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತೀನಂಶ್ರೀ ಭವನ ಉದ್ಘಾಟನೆಗೆ ಸಿ.ಟಿ.ರವಿ ಅವರನ್ನು ಕರೆಸಿದರು. ಅಧಿಕಾರಿಗಳು ಕಾಮಗಾರಿ ಮುಗಿದಿಲ್ಲ, ಉದ್ಘಾಟಿಸುವುದು ಬೇಡವೆಂದರೂ ಸಹ, ಸಚಿವ ಮಾಧುಸ್ವಾಮಿ ‘ಇಲ್ರೀ, ನಾನು ಹೇಳಿದಷ್ಟು ಕೇಳ್ರಿ’ ಎಂದು ಎಚ್ಚರಿಕೆ ಕೊಟ್ಟರು ಎನ್ನಲಾಗಿದೆ.

ಸಚಿವರ ಸೂಚನೆ ಮೇರೆಗೆ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿದ್ದರು. ಸೌಜನ್ಯಕ್ಕೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ಯಾವುದೇ ಪದಾಧಿಕಾರಿಗಳು, ಸಾಹಿತಿಗಳಿಗೂ ಮಾಹಿತಿ ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ಕಸಾಪ ಹೆಸರು ಮುದ್ರಿಸಿದ್ದಾರೆ.

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

ಯಾರಿಗೂ ಮಾಹಿತಿಯೇ ಇಲ್ಲದಂತೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಚಿಕ್ಕನಾಯಕನಹಳ್ಳಿಯವರೇ ಆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು, ಸಾಹಿತಿಗಳು ಆದ ಎಸ್.ಜಿ ಸಿದ್ದರಾಮಯ್ಯ. ಸಂಶೋಧಕ ಕೆ.ಬಿ.ಶಿವತಾರಕ್, ತಿಮ್ಮನಹಳ್ಳಿ ವೇಣುಗೋಪಾಲ್, ನಟರಾಜ್ ಹುಳಿಯಾರ್, ಹುಳಿಯಾರು ಕಾಲೇಜಿನ ಪ್ರಾಂಶುಪಾಲರು, ಲೇಖಕರಾದ ಬಿಳಿಗೆರೆ ಕೃಷ್ಣಮೂರ್ತಿ, ಕೃಷಿಕ ಸಾಹಿತಿ ಬಾಳೇಕಾಯಿ ಶಿವ ನಂಜಪ್ಪ ಹೀಗೆ ಜಿಲ್ಲೆಯ ಯಾವ ಪ್ರಾತಿನಿಧಿಕ ಸಾಹಿತಿಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನೂ ಮುದ್ರಿಸಲಿಲ್ಲ.

ಇದನ್ನೂ ಓದಿ: ಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಜಿಲ್ಲೆಯ ಎಲ್ಲಾ ಸಾಹಿತಿಗಳು ಪ್ರಗತಿಪರ ನಿಲುವುಳ್ಳವರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರ ನಿಲುವುಗಳಿಗೆ ವಿರುದ್ಧ ಚಿಂತನೆಗಳನ್ನು ಬೆಳೆಸಿಕೊಂಡವರು. ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ಟೀಕೆಗೆ ಒಳಪಡಿಸುವವರು ಎಂಬ ಕಾರಣಕ್ಕೆ ಉದ್ದೇಶಪೂರಕವಾಗಿಯೇ ದೂರ ಇಡಲಾಯಿತು. ಅಷ್ಟೇ ಅಲ್ಲ ಜಿಲ್ಲಾ ಉಸ್ತುವಾರಿ ಸಚಿವರು ‘ತುಮಕೂರು ಮೋದಿ’  ಇದ್ದಂತೆ. ಸರ್ವಾಧಿಕಾರಿ ಧೋರಣೆಗೆ ಮತ್ತೊಂದು ಹೆಸರು ಜೆ.ಸಿ.ಮಾಧುಸ್ವಾಮಿ. ಅವರು ಹೇಳಿದ್ದೇ ವೇದವಾಕ್ಯ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಿ.ಟಿ. ರವಿಯವರ ಚಿಂತನೆಗೆ ವಿರುದ್ಧವಾಗಿ ನಡೆದುಕೊಳ್ಳಬಾರದೆಂಬ ಕಾರಣಕ್ಕಾಗಿ ಎಲ್ಲರನ್ನೂ ದೂರವಿಟ್ಟರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, “ತೀನಂಶ್ರೀ ಪ್ರಸಿದ್ದ ವಿದ್ವಾಂಸರು. ಕನ್ನಡ ಸಾರಸ್ವತ ಲೋಕಕ್ಕೆ ಇವರ ಕೊಡುಗೆ ಅಪಾರವಾದುದು. ಇಂತಹವರ ಹೆಸರಿನಲ್ಲಿ ಸಾಹಿತ್ಯ ಭವನ ನಿರ್ಮಾಣವಾಗತೊಡಗಿದ್ದು ಸಾಹಿತ್ಯ ವಲಯದಲ್ಲಿ ಹೆಮ್ಮೆಯ ಸಂಗತಿಯಾಗಿತ್ತು. ಆದರೆ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆಯಾಗಿದ್ದು ಸಾಹಿತ್ಯಾಸಕ್ತರಿಗೆ ನಿರಾಸೆ ತಂದಿದೆ” ಎಂದಿದ್ದಾರೆ.

“ತೀನಂಶ್ರೀ ಅವರಿಗೆ ಘನತೆ-ಗೌರವ ತರುವ ರೀತಿಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ವಿಚಾರ ಸಂಕಿರಣ ಏರ್ಪಡಿಸುವ ಮೂಲಕ ಒಂದು ಸಾಹಿತ್ಯ-ಸಂಸ್ಕಂತಿಯ ಹಬ್ಬದಂತೆ ಮಾಡಬಹುದಿತ್ತು. ಇದ್ಯಾವುದೂ ಆಗಲಿಲ್ಲ ಎಂಬ ನೋವು ಇದೆ. ಸಾಹಿತಿ, ಲೇಖಕ, ಶಿಷ್ಯವೃಂದ, ಸಾಹಿತ್ಯಾಸಕ್ತರ ಅನುಪಸ್ಥಿತಿಯಲ್ಲಿ ತೀನಂಶ್ರೀ ಭವನ ಅನಾಥವಾಗಿ ಲೋಕಾರ್ಪಣೆಗೊಂಡಿದ್ದು ನೋವಿನ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಒಂದೇ ಧೋರಣೆಯವರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈಗಿನ ಸರ್ಕಾರ ಭಿನ್ನ ನಿಲುವುಗಳನ್ನು ವ್ಯಕ್ತಪಡಿಸುವ ಸಾಹಿತಿ-ಕಲಾವಿದರನ್ನು ತೀನಂಶ್ರೀ ಭವನ ಉದ್ಘಾಟನೆಯಂಥ ಸಾಂಸ್ಕೃತಿಕ ಕಾರ್ಯಕ್ರಮದಿಂದ ಹೊರಗಿಟ್ಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ವೇದಿಕೆಯಲ್ಲಿ ಟಿ.ಎಸ್.ನಾಗರಾಜರಾವ್ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾವುದೇ ಸಾಹಿತಿ ಇರಲಿಲ್ಲ. ಬಿಜೆಪಿ ಸರ್ಕಾರದ ಚಿಂತನೆಗಳು ಮತ್ತು ಧೋರಣೆಗಳಿಗೆ ಹತ್ತಿರವಾಗಿರುವ ನಾಗರಾಜ್ ರಾವ್ ಅವರ ಹೆಸರನ್ನು ಹಾಕದಿದ್ದರೂ ಸ್ವಾಗತ ಮಾಡಿದ್ದು ಅವರೇ ಎಂದು ಕಾರ್ಯಕ್ರಮಕ್ಕೆ ಭಾಗಿಯಾಗಿದ್ದವರು ತಿಳಿಸಿದರು.

ತೀನಂಶ್ರೀ ಭನವ ಉದ್ಘಾಟನೆಗೆ ಅವರ ಶಿಷ್ಯ ವೃಂದವನ್ನೂ ಆಹ್ವಾನಿಸಿಲ್ಲ. ಜಿಲ್ಲೆಯ ಸಾಹಿತಿ-ಚಿಂತಕರನ್ನು ಕರೆದಿಲ್ಲ. ಇದು ಸಾಹಿತ್ಯ ವಲಯದಲ್ಲಿ, ಕನ್ನಡಪರ ಸಂಘಟನೆಗಳ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದೆ.

ಸಿ.ಟಿ.ರವಿ ಮತ್ತು ಜೆ.ಸಿ.ಮಾಧುಸ್ವಾಮಿ ಸಚಿವದ್ವಯರಿಗೆ ಸಾಹಿತಿಗಳನ್ನು ಕಂಡರೆ ಆಗುವುದಿಲ್ಲ. ಸಾಹಿತಿಗಳ ಭಿನ್ನ ನಿಲುವುಗಳನ್ನು ಸಹಿಕೊಳ್ಳದ ಉಸ್ತುವಾರಿ ಸಚಿವರು ಏಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...