Homeಕರ್ನಾಟಕತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ಚಿ.ನಾ.ಹಳ್ಳಿಯಲ್ಲಿ ನಿರ್ಮಿಸಿದ್ದ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದು ಸಾಹಿತಿಗಳ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದೆ.

ಧ್ವನಿ-ಬೆಳಕು ವ್ಯವಸ್ಥೆ, ಕಾಂಪೌಂಡ್ ನಿರ್ಮಾಣ ಕಾಮಗಾರಿ ಇನ್ನೂ ಮುಗಿದಿರಲಿಲ್ಲ. ಆದರು ಆತುರಾತುರವಾಗಿ ಸಚಿವ ಸಿ.ಟಿ.ರವಿ ಅವರನ್ನ ಕರೆಸಿ ಉದ್ಘಾಟಿಸುವ ಅಗತ್ಯವೇನಿತ್ತು? ತೀನಂಶ್ರೀ ಭವನ ಬೇಕೆಂದು ಹಲವು ವರ್ಷಗಳಿಂದ ಹೋರಾಡಿದ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಯಾವುದೇ ಕನ್ನಡ ಪರ ಸಂಘಟನೆಗಳು ಮತ್ತು ಸಾಹಿತಿಗಳನ್ನು ಬೇಕೆಂದೇ ಆಹ್ವಾನಿಸದೇ ಹೊರಗಿಟ್ಟಿದ್ದು ಏಕೆ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಳೆದ ಏಳೆಂಟು ವರ್ಷಗಳಿಂದಲೂ ತೀನಂಶ್ರೀ ಭವನ ನಿರ್ಮಾಣ ಮಾಡಬೇಕೆಂದು ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್, ಸಾಹಿತಿಗಳು, ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಸೆಯಾಗಿತ್ತು. ಇಂದು ತೀನಂಶ್ರೀ ಭವನ ನಿರ್ಮಾಣಗೊಳ್ಳಲು ಇದೇ ಕಾರಣ.

ಹೀಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತೀನಂಶ್ರೀ ಭವನ ಉದ್ಘಾಟನೆಗೆ ಸಿ.ಟಿ.ರವಿ ಅವರನ್ನು ಕರೆಸಿದರು. ಅಧಿಕಾರಿಗಳು ಕಾಮಗಾರಿ ಮುಗಿದಿಲ್ಲ, ಉದ್ಘಾಟಿಸುವುದು ಬೇಡವೆಂದರೂ ಸಹ, ಸಚಿವ ಮಾಧುಸ್ವಾಮಿ ‘ಇಲ್ರೀ, ನಾನು ಹೇಳಿದಷ್ಟು ಕೇಳ್ರಿ’ ಎಂದು ಎಚ್ಚರಿಕೆ ಕೊಟ್ಟರು ಎನ್ನಲಾಗಿದೆ.

ಸಚಿವರ ಸೂಚನೆ ಮೇರೆಗೆ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿದ್ದರು. ಸೌಜನ್ಯಕ್ಕೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ಯಾವುದೇ ಪದಾಧಿಕಾರಿಗಳು, ಸಾಹಿತಿಗಳಿಗೂ ಮಾಹಿತಿ ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ಕಸಾಪ ಹೆಸರು ಮುದ್ರಿಸಿದ್ದಾರೆ.

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

ಯಾರಿಗೂ ಮಾಹಿತಿಯೇ ಇಲ್ಲದಂತೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಚಿಕ್ಕನಾಯಕನಹಳ್ಳಿಯವರೇ ಆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು, ಸಾಹಿತಿಗಳು ಆದ ಎಸ್.ಜಿ ಸಿದ್ದರಾಮಯ್ಯ. ಸಂಶೋಧಕ ಕೆ.ಬಿ.ಶಿವತಾರಕ್, ತಿಮ್ಮನಹಳ್ಳಿ ವೇಣುಗೋಪಾಲ್, ನಟರಾಜ್ ಹುಳಿಯಾರ್, ಹುಳಿಯಾರು ಕಾಲೇಜಿನ ಪ್ರಾಂಶುಪಾಲರು, ಲೇಖಕರಾದ ಬಿಳಿಗೆರೆ ಕೃಷ್ಣಮೂರ್ತಿ, ಕೃಷಿಕ ಸಾಹಿತಿ ಬಾಳೇಕಾಯಿ ಶಿವ ನಂಜಪ್ಪ ಹೀಗೆ ಜಿಲ್ಲೆಯ ಯಾವ ಪ್ರಾತಿನಿಧಿಕ ಸಾಹಿತಿಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನೂ ಮುದ್ರಿಸಲಿಲ್ಲ.

ಇದನ್ನೂ ಓದಿ: ಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಜಿಲ್ಲೆಯ ಎಲ್ಲಾ ಸಾಹಿತಿಗಳು ಪ್ರಗತಿಪರ ನಿಲುವುಳ್ಳವರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರ ನಿಲುವುಗಳಿಗೆ ವಿರುದ್ಧ ಚಿಂತನೆಗಳನ್ನು ಬೆಳೆಸಿಕೊಂಡವರು. ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ಟೀಕೆಗೆ ಒಳಪಡಿಸುವವರು ಎಂಬ ಕಾರಣಕ್ಕೆ ಉದ್ದೇಶಪೂರಕವಾಗಿಯೇ ದೂರ ಇಡಲಾಯಿತು. ಅಷ್ಟೇ ಅಲ್ಲ ಜಿಲ್ಲಾ ಉಸ್ತುವಾರಿ ಸಚಿವರು ‘ತುಮಕೂರು ಮೋದಿ’  ಇದ್ದಂತೆ. ಸರ್ವಾಧಿಕಾರಿ ಧೋರಣೆಗೆ ಮತ್ತೊಂದು ಹೆಸರು ಜೆ.ಸಿ.ಮಾಧುಸ್ವಾಮಿ. ಅವರು ಹೇಳಿದ್ದೇ ವೇದವಾಕ್ಯ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಿ.ಟಿ. ರವಿಯವರ ಚಿಂತನೆಗೆ ವಿರುದ್ಧವಾಗಿ ನಡೆದುಕೊಳ್ಳಬಾರದೆಂಬ ಕಾರಣಕ್ಕಾಗಿ ಎಲ್ಲರನ್ನೂ ದೂರವಿಟ್ಟರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, “ತೀನಂಶ್ರೀ ಪ್ರಸಿದ್ದ ವಿದ್ವಾಂಸರು. ಕನ್ನಡ ಸಾರಸ್ವತ ಲೋಕಕ್ಕೆ ಇವರ ಕೊಡುಗೆ ಅಪಾರವಾದುದು. ಇಂತಹವರ ಹೆಸರಿನಲ್ಲಿ ಸಾಹಿತ್ಯ ಭವನ ನಿರ್ಮಾಣವಾಗತೊಡಗಿದ್ದು ಸಾಹಿತ್ಯ ವಲಯದಲ್ಲಿ ಹೆಮ್ಮೆಯ ಸಂಗತಿಯಾಗಿತ್ತು. ಆದರೆ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆಯಾಗಿದ್ದು ಸಾಹಿತ್ಯಾಸಕ್ತರಿಗೆ ನಿರಾಸೆ ತಂದಿದೆ” ಎಂದಿದ್ದಾರೆ.

“ತೀನಂಶ್ರೀ ಅವರಿಗೆ ಘನತೆ-ಗೌರವ ತರುವ ರೀತಿಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ವಿಚಾರ ಸಂಕಿರಣ ಏರ್ಪಡಿಸುವ ಮೂಲಕ ಒಂದು ಸಾಹಿತ್ಯ-ಸಂಸ್ಕಂತಿಯ ಹಬ್ಬದಂತೆ ಮಾಡಬಹುದಿತ್ತು. ಇದ್ಯಾವುದೂ ಆಗಲಿಲ್ಲ ಎಂಬ ನೋವು ಇದೆ. ಸಾಹಿತಿ, ಲೇಖಕ, ಶಿಷ್ಯವೃಂದ, ಸಾಹಿತ್ಯಾಸಕ್ತರ ಅನುಪಸ್ಥಿತಿಯಲ್ಲಿ ತೀನಂಶ್ರೀ ಭವನ ಅನಾಥವಾಗಿ ಲೋಕಾರ್ಪಣೆಗೊಂಡಿದ್ದು ನೋವಿನ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಒಂದೇ ಧೋರಣೆಯವರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈಗಿನ ಸರ್ಕಾರ ಭಿನ್ನ ನಿಲುವುಗಳನ್ನು ವ್ಯಕ್ತಪಡಿಸುವ ಸಾಹಿತಿ-ಕಲಾವಿದರನ್ನು ತೀನಂಶ್ರೀ ಭವನ ಉದ್ಘಾಟನೆಯಂಥ ಸಾಂಸ್ಕೃತಿಕ ಕಾರ್ಯಕ್ರಮದಿಂದ ಹೊರಗಿಟ್ಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ವೇದಿಕೆಯಲ್ಲಿ ಟಿ.ಎಸ್.ನಾಗರಾಜರಾವ್ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾವುದೇ ಸಾಹಿತಿ ಇರಲಿಲ್ಲ. ಬಿಜೆಪಿ ಸರ್ಕಾರದ ಚಿಂತನೆಗಳು ಮತ್ತು ಧೋರಣೆಗಳಿಗೆ ಹತ್ತಿರವಾಗಿರುವ ನಾಗರಾಜ್ ರಾವ್ ಅವರ ಹೆಸರನ್ನು ಹಾಕದಿದ್ದರೂ ಸ್ವಾಗತ ಮಾಡಿದ್ದು ಅವರೇ ಎಂದು ಕಾರ್ಯಕ್ರಮಕ್ಕೆ ಭಾಗಿಯಾಗಿದ್ದವರು ತಿಳಿಸಿದರು.

ತೀನಂಶ್ರೀ ಭನವ ಉದ್ಘಾಟನೆಗೆ ಅವರ ಶಿಷ್ಯ ವೃಂದವನ್ನೂ ಆಹ್ವಾನಿಸಿಲ್ಲ. ಜಿಲ್ಲೆಯ ಸಾಹಿತಿ-ಚಿಂತಕರನ್ನು ಕರೆದಿಲ್ಲ. ಇದು ಸಾಹಿತ್ಯ ವಲಯದಲ್ಲಿ, ಕನ್ನಡಪರ ಸಂಘಟನೆಗಳ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದೆ.

ಸಿ.ಟಿ.ರವಿ ಮತ್ತು ಜೆ.ಸಿ.ಮಾಧುಸ್ವಾಮಿ ಸಚಿವದ್ವಯರಿಗೆ ಸಾಹಿತಿಗಳನ್ನು ಕಂಡರೆ ಆಗುವುದಿಲ್ಲ. ಸಾಹಿತಿಗಳ ಭಿನ್ನ ನಿಲುವುಗಳನ್ನು ಸಹಿಕೊಳ್ಳದ ಉಸ್ತುವಾರಿ ಸಚಿವರು ಏಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....