Homeಕರ್ನಾಟಕತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ತರಾತುರಿಯಲ್ಲಿ ತೀನಂಶ್ರೀ ಭವನ ಉದ್ಘಾಟನೆ: ಸಚಿವರ ಧೋರಣೆಗೆ ಸಾಹಿತಿಗಳ ಆಕ್ರೋಶ

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

- Advertisement -
- Advertisement -

ತುಮಕೂರು ಜಿಲ್ಲೆಯ ಚಿ.ನಾ.ಹಳ್ಳಿಯಲ್ಲಿ ನಿರ್ಮಿಸಿದ್ದ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದು ಸಾಹಿತಿಗಳ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದೆ.

ಧ್ವನಿ-ಬೆಳಕು ವ್ಯವಸ್ಥೆ, ಕಾಂಪೌಂಡ್ ನಿರ್ಮಾಣ ಕಾಮಗಾರಿ ಇನ್ನೂ ಮುಗಿದಿರಲಿಲ್ಲ. ಆದರು ಆತುರಾತುರವಾಗಿ ಸಚಿವ ಸಿ.ಟಿ.ರವಿ ಅವರನ್ನ ಕರೆಸಿ ಉದ್ಘಾಟಿಸುವ ಅಗತ್ಯವೇನಿತ್ತು? ತೀನಂಶ್ರೀ ಭವನ ಬೇಕೆಂದು ಹಲವು ವರ್ಷಗಳಿಂದ ಹೋರಾಡಿದ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಯಾವುದೇ ಕನ್ನಡ ಪರ ಸಂಘಟನೆಗಳು ಮತ್ತು ಸಾಹಿತಿಗಳನ್ನು ಬೇಕೆಂದೇ ಆಹ್ವಾನಿಸದೇ ಹೊರಗಿಟ್ಟಿದ್ದು ಏಕೆ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಕಳೆದ ಏಳೆಂಟು ವರ್ಷಗಳಿಂದಲೂ ತೀನಂಶ್ರೀ ಭವನ ನಿರ್ಮಾಣ ಮಾಡಬೇಕೆಂದು ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್, ಸಾಹಿತಿಗಳು, ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಸೆಯಾಗಿತ್ತು. ಇಂದು ತೀನಂಶ್ರೀ ಭವನ ನಿರ್ಮಾಣಗೊಳ್ಳಲು ಇದೇ ಕಾರಣ.

ಹೀಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತೀನಂಶ್ರೀ ಭವನ ಉದ್ಘಾಟನೆಗೆ ಸಿ.ಟಿ.ರವಿ ಅವರನ್ನು ಕರೆಸಿದರು. ಅಧಿಕಾರಿಗಳು ಕಾಮಗಾರಿ ಮುಗಿದಿಲ್ಲ, ಉದ್ಘಾಟಿಸುವುದು ಬೇಡವೆಂದರೂ ಸಹ, ಸಚಿವ ಮಾಧುಸ್ವಾಮಿ ‘ಇಲ್ರೀ, ನಾನು ಹೇಳಿದಷ್ಟು ಕೇಳ್ರಿ’ ಎಂದು ಎಚ್ಚರಿಕೆ ಕೊಟ್ಟರು ಎನ್ನಲಾಗಿದೆ.

ಸಚಿವರ ಸೂಚನೆ ಮೇರೆಗೆ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿದ್ದರು. ಸೌಜನ್ಯಕ್ಕೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ಯಾವುದೇ ಪದಾಧಿಕಾರಿಗಳು, ಸಾಹಿತಿಗಳಿಗೂ ಮಾಹಿತಿ ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ಕಸಾಪ ಹೆಸರು ಮುದ್ರಿಸಿದ್ದಾರೆ.

ರಾಜಕಾರಣಿಗಳನ್ನು ಬಿಟ್ಟು ಬೇರೆ ಯಾವ ಸಾಹಿತಿಗಳನ್ನೂ ಆಹ್ವಾನಿಸದೆ, ಹೆಸರನ್ನೂ ಹಾಕದೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದಂತೆ ಅಧಿಕಾರಿಗಳು ನಡೆದುಕೊಂಡಿದ್ದಾರೆ.

ಯಾರಿಗೂ ಮಾಹಿತಿಯೇ ಇಲ್ಲದಂತೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಚಿಕ್ಕನಾಯಕನಹಳ್ಳಿಯವರೇ ಆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರು, ಸಾಹಿತಿಗಳು ಆದ ಎಸ್.ಜಿ ಸಿದ್ದರಾಮಯ್ಯ. ಸಂಶೋಧಕ ಕೆ.ಬಿ.ಶಿವತಾರಕ್, ತಿಮ್ಮನಹಳ್ಳಿ ವೇಣುಗೋಪಾಲ್, ನಟರಾಜ್ ಹುಳಿಯಾರ್, ಹುಳಿಯಾರು ಕಾಲೇಜಿನ ಪ್ರಾಂಶುಪಾಲರು, ಲೇಖಕರಾದ ಬಿಳಿಗೆರೆ ಕೃಷ್ಣಮೂರ್ತಿ, ಕೃಷಿಕ ಸಾಹಿತಿ ಬಾಳೇಕಾಯಿ ಶಿವ ನಂಜಪ್ಪ ಹೀಗೆ ಜಿಲ್ಲೆಯ ಯಾವ ಪ್ರಾತಿನಿಧಿಕ ಸಾಹಿತಿಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಿಲ್ಲ. ಆಹ್ವಾನ ಪತ್ರಿಕೆಯಲ್ಲಿ ಹೆಸರನ್ನೂ ಮುದ್ರಿಸಲಿಲ್ಲ.

ಇದನ್ನೂ ಓದಿ: ಡಿ.ಜೆ ಹಳ್ಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ: ನಿರಪರಾಧಿಗಳ ಬಿಡುಗಡೆಗೆ ಆಗ್ರಹ

ಜಿಲ್ಲೆಯ ಎಲ್ಲಾ ಸಾಹಿತಿಗಳು ಪ್ರಗತಿಪರ ನಿಲುವುಳ್ಳವರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರ ನಿಲುವುಗಳಿಗೆ ವಿರುದ್ಧ ಚಿಂತನೆಗಳನ್ನು ಬೆಳೆಸಿಕೊಂಡವರು. ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ಟೀಕೆಗೆ ಒಳಪಡಿಸುವವರು ಎಂಬ ಕಾರಣಕ್ಕೆ ಉದ್ದೇಶಪೂರಕವಾಗಿಯೇ ದೂರ ಇಡಲಾಯಿತು. ಅಷ್ಟೇ ಅಲ್ಲ ಜಿಲ್ಲಾ ಉಸ್ತುವಾರಿ ಸಚಿವರು ‘ತುಮಕೂರು ಮೋದಿ’  ಇದ್ದಂತೆ. ಸರ್ವಾಧಿಕಾರಿ ಧೋರಣೆಗೆ ಮತ್ತೊಂದು ಹೆಸರು ಜೆ.ಸಿ.ಮಾಧುಸ್ವಾಮಿ. ಅವರು ಹೇಳಿದ್ದೇ ವೇದವಾಕ್ಯ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಿ.ಟಿ. ರವಿಯವರ ಚಿಂತನೆಗೆ ವಿರುದ್ಧವಾಗಿ ನಡೆದುಕೊಳ್ಳಬಾರದೆಂಬ ಕಾರಣಕ್ಕಾಗಿ ಎಲ್ಲರನ್ನೂ ದೂರವಿಟ್ಟರು ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ, “ತೀನಂಶ್ರೀ ಪ್ರಸಿದ್ದ ವಿದ್ವಾಂಸರು. ಕನ್ನಡ ಸಾರಸ್ವತ ಲೋಕಕ್ಕೆ ಇವರ ಕೊಡುಗೆ ಅಪಾರವಾದುದು. ಇಂತಹವರ ಹೆಸರಿನಲ್ಲಿ ಸಾಹಿತ್ಯ ಭವನ ನಿರ್ಮಾಣವಾಗತೊಡಗಿದ್ದು ಸಾಹಿತ್ಯ ವಲಯದಲ್ಲಿ ಹೆಮ್ಮೆಯ ಸಂಗತಿಯಾಗಿತ್ತು. ಆದರೆ ತೀನಂಶ್ರೀ ಭವನವನ್ನು ತರಾತುರಿಯಲ್ಲಿ ಉದ್ಘಾಟನೆಯಾಗಿದ್ದು ಸಾಹಿತ್ಯಾಸಕ್ತರಿಗೆ ನಿರಾಸೆ ತಂದಿದೆ” ಎಂದಿದ್ದಾರೆ.

“ತೀನಂಶ್ರೀ ಅವರಿಗೆ ಘನತೆ-ಗೌರವ ತರುವ ರೀತಿಯಲ್ಲಿ ಎಲ್ಲರೂ ಒಟ್ಟಾಗಿ ಸೇರಿ ವಿಚಾರ ಸಂಕಿರಣ ಏರ್ಪಡಿಸುವ ಮೂಲಕ ಒಂದು ಸಾಹಿತ್ಯ-ಸಂಸ್ಕಂತಿಯ ಹಬ್ಬದಂತೆ ಮಾಡಬಹುದಿತ್ತು. ಇದ್ಯಾವುದೂ ಆಗಲಿಲ್ಲ ಎಂಬ ನೋವು ಇದೆ. ಸಾಹಿತಿ, ಲೇಖಕ, ಶಿಷ್ಯವೃಂದ, ಸಾಹಿತ್ಯಾಸಕ್ತರ ಅನುಪಸ್ಥಿತಿಯಲ್ಲಿ ತೀನಂಶ್ರೀ ಭವನ ಅನಾಥವಾಗಿ ಲೋಕಾರ್ಪಣೆಗೊಂಡಿದ್ದು ನೋವಿನ ಸಂಗತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಒಂದೇ ಧೋರಣೆಯವರು. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯದಲ್ಲಿ ಈಗಿನ ಸರ್ಕಾರ ಭಿನ್ನ ನಿಲುವುಗಳನ್ನು ವ್ಯಕ್ತಪಡಿಸುವ ಸಾಹಿತಿ-ಕಲಾವಿದರನ್ನು ತೀನಂಶ್ರೀ ಭವನ ಉದ್ಘಾಟನೆಯಂಥ ಸಾಂಸ್ಕೃತಿಕ ಕಾರ್ಯಕ್ರಮದಿಂದ ಹೊರಗಿಟ್ಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ವೇದಿಕೆಯಲ್ಲಿ ಟಿ.ಎಸ್.ನಾಗರಾಜರಾವ್ ಅವರೊಬ್ಬರನ್ನು ಬಿಟ್ಟರೆ ಬೇರೆ ಯಾವುದೇ ಸಾಹಿತಿ ಇರಲಿಲ್ಲ. ಬಿಜೆಪಿ ಸರ್ಕಾರದ ಚಿಂತನೆಗಳು ಮತ್ತು ಧೋರಣೆಗಳಿಗೆ ಹತ್ತಿರವಾಗಿರುವ ನಾಗರಾಜ್ ರಾವ್ ಅವರ ಹೆಸರನ್ನು ಹಾಕದಿದ್ದರೂ ಸ್ವಾಗತ ಮಾಡಿದ್ದು ಅವರೇ ಎಂದು ಕಾರ್ಯಕ್ರಮಕ್ಕೆ ಭಾಗಿಯಾಗಿದ್ದವರು ತಿಳಿಸಿದರು.

ತೀನಂಶ್ರೀ ಭನವ ಉದ್ಘಾಟನೆಗೆ ಅವರ ಶಿಷ್ಯ ವೃಂದವನ್ನೂ ಆಹ್ವಾನಿಸಿಲ್ಲ. ಜಿಲ್ಲೆಯ ಸಾಹಿತಿ-ಚಿಂತಕರನ್ನು ಕರೆದಿಲ್ಲ. ಇದು ಸಾಹಿತ್ಯ ವಲಯದಲ್ಲಿ, ಕನ್ನಡಪರ ಸಂಘಟನೆಗಳ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿದೆ.

ಸಿ.ಟಿ.ರವಿ ಮತ್ತು ಜೆ.ಸಿ.ಮಾಧುಸ್ವಾಮಿ ಸಚಿವದ್ವಯರಿಗೆ ಸಾಹಿತಿಗಳನ್ನು ಕಂಡರೆ ಆಗುವುದಿಲ್ಲ. ಸಾಹಿತಿಗಳ ಭಿನ್ನ ನಿಲುವುಗಳನ್ನು ಸಹಿಕೊಳ್ಳದ ಉಸ್ತುವಾರಿ ಸಚಿವರು ಏಕಪಕ್ಷೀಯ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ಇದನ್ನೂ ಓದಿ: 10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...