Homeಕರ್ನಾಟಕಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ 'ಕೋವಿಡ್ ಫೀಸ್' ವಸೂಲಿ ಆರಂಭ

ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ಇದು ತೀರಾ ವಿಚಿತ್ರಕಾರಿ ನಡೆಯಾಗಿದೆ. ಕೋವಿಡ್ ಹೆಸರಿನಲ್ಲಿ ಶುಲ್ಕವನ್ನು ಕಡಿಮೆ ಮಾಡಬೇಕೆ ಹೊರತು ಹೆಚ್ಚು ಮಾಡಬಾರದು. ಅಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಕೊರೊನಾ ಕಾರಣಕ್ಕೆ ಹೇರಲಾದ ಲಾಕ್ ಡೌನ್ ನಿಂದ ಸಾಮಾನ್ಯ ಜನರು ತತ್ತರಿಸಿಹೋಗಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಇಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ಎಂಬ ಹೊಸ ಶುಲ್ಕವನ್ನು ಪರಿಚಿಯಿಸಿ ಪೋಷಕರಿಂದ ಹಣ ವಸೂಲಿಗಿಳಿದಿರುವುದು ದುರಂತ.

ಅನ್ಲಾಕ್ 4ರ ಮಾರ್ಗಸೂಚಿಗಳ ಅನ್ವಯ ಪ್ರೌಢಶಾಲೆಗಳನ್ನು ತೆರೆಯಲು ಹಸಿರು ನಿಶಾನೆ ದೊರೆತೊಡನೆಯೇ ಖಾಸಗಿ ಶಾಲೆಗಳು ‘ಕೋವಿಡ್ ಫೀಸ್’ ಪ್ರಾರಂಭಿಸಿವೆ. ಅಂದರೆ ಥರ್ಮಲ್ ಸ್ಕಾನಿಂಗ್, ಸ್ಯಾನಿಟೈಸಿಂಗ್ ಮತ್ತು ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಗೆ  ನೇಮಕ ನೆಪದಲ್ಲಿ ಒಟ್ಟು ಶುಲ್ಕದಲ್ಲಿ ಶೇ.5 ರಷ್ಟು ‘ಕೋವಿಡ್ ಫೀಸ್’ ವಸೂಲಿ ಮಾಡಲು ನಿರ್ಧರಿಸಿವೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟಂಬರ್ 21 ರಿಂದ ಶಾಲೆಗಳನ್ನು ತೆರೆಯಲು ಕೆಲ ಮಾರ್ಗಸೂಚಿಗಳನ್ನು ಒದಗಿಸಿದ್ದು, ಕೆಲ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ನಿರ್ದೇಶಿಸಿದೆ. ಮಕ್ಕಳು ಪದೇ ಪದೇ ಮುಟ್ಟಬಹುದಾದ ಮೇಲ್ಮೈಗಳು, ಕಂಪ್ಯೂಟರ್, ಲ್ಯಾಪ್ ಟಾಪ್ ಗಳು ಸೇರಿ ಇತರ ವಸ್ತುಗಳನ್ನು ಸದಾ ಸ್ಯಾನಿಟೈಸರ್ ಬಳಸಿ ಸ್ವಚ್ಛಗೊಳಿಸಲು ತಿಳಿಸಿದೆ. ಹಾಗಾಗಿ ಖಾಸಗಿ ಶಾಲೆಗಳು ಹೊಸ ಶುಲ್ಕ ವಿಧಿಸಲು ಮುಂದಾಗಿವೆ.

ಶಾಲೆಗಳ ನಿರ್ವಹಣೆಗೆ ಹೆಚ್ಚಿನ ಹಣ ಬೇಕಾಗಿದೆ. ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಬೇಕಿದೆ. ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ಖರೀದಿಸಬೇಕಿದೆ. ಹಾಗಾಗಿ ಒಟ್ಟು ಶುಲ್ಕದಲ್ಲಿ ಶೇ.5ರಷ್ಟನ್ನು ಮಾತ್ರ ಹೆಚ್ಚಿಸಲು ನಿರ್ಧಿಸಿದ್ದೇವೆ. ಪೋಷಕರು ನಮ್ಮ ಕಷ್ಟವನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇವೆ ಎಂಬುದು ಖಾಸಗಿ ಶಾಲೆಗಳ ಅಂಬೋಣ.

ಇನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇದು ತೀರಾ ವಿಚಿತ್ರಕಾರಿ ನಡೆಯಾಗಿದೆ. ಕೋವಿಡ್ ಹೆಸರಿನಲ್ಲಿ ಶುಲ್ಕವನ್ನು ಕಡಿಮೆ ಮಾಡಬೇಕೆ ಹೊರತು ಹೆಚ್ಚು ಮಾಡಬಾರದು. ಅಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸಾಂಕ್ರಾಮಿಕ ಇನ್ನೆಷ್ಟು ಸವಾಲುಗಳನ್ನು ತಂದಿಡುತ್ತದೆಯೋ ತಿಳಿಯದಾಗಿದೆ.


ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...