Homeಕರ್ನಾಟಕಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ 'ಕೋವಿಡ್ ಫೀಸ್' ವಸೂಲಿ ಆರಂಭ

ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ಇದು ತೀರಾ ವಿಚಿತ್ರಕಾರಿ ನಡೆಯಾಗಿದೆ. ಕೋವಿಡ್ ಹೆಸರಿನಲ್ಲಿ ಶುಲ್ಕವನ್ನು ಕಡಿಮೆ ಮಾಡಬೇಕೆ ಹೊರತು ಹೆಚ್ಚು ಮಾಡಬಾರದು. ಅಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಕೊರೊನಾ ಕಾರಣಕ್ಕೆ ಹೇರಲಾದ ಲಾಕ್ ಡೌನ್ ನಿಂದ ಸಾಮಾನ್ಯ ಜನರು ತತ್ತರಿಸಿಹೋಗಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಇಂತಹ ಸಂಕಷ್ಟದ ಕಾಲದಲ್ಲಿಯೂ ಸಹ ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ಎಂಬ ಹೊಸ ಶುಲ್ಕವನ್ನು ಪರಿಚಿಯಿಸಿ ಪೋಷಕರಿಂದ ಹಣ ವಸೂಲಿಗಿಳಿದಿರುವುದು ದುರಂತ.

ಅನ್ಲಾಕ್ 4ರ ಮಾರ್ಗಸೂಚಿಗಳ ಅನ್ವಯ ಪ್ರೌಢಶಾಲೆಗಳನ್ನು ತೆರೆಯಲು ಹಸಿರು ನಿಶಾನೆ ದೊರೆತೊಡನೆಯೇ ಖಾಸಗಿ ಶಾಲೆಗಳು ‘ಕೋವಿಡ್ ಫೀಸ್’ ಪ್ರಾರಂಭಿಸಿವೆ. ಅಂದರೆ ಥರ್ಮಲ್ ಸ್ಕಾನಿಂಗ್, ಸ್ಯಾನಿಟೈಸಿಂಗ್ ಮತ್ತು ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಗೆ  ನೇಮಕ ನೆಪದಲ್ಲಿ ಒಟ್ಟು ಶುಲ್ಕದಲ್ಲಿ ಶೇ.5 ರಷ್ಟು ‘ಕೋವಿಡ್ ಫೀಸ್’ ವಸೂಲಿ ಮಾಡಲು ನಿರ್ಧರಿಸಿವೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟಂಬರ್ 21 ರಿಂದ ಶಾಲೆಗಳನ್ನು ತೆರೆಯಲು ಕೆಲ ಮಾರ್ಗಸೂಚಿಗಳನ್ನು ಒದಗಿಸಿದ್ದು, ಕೆಲ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ನಿರ್ದೇಶಿಸಿದೆ. ಮಕ್ಕಳು ಪದೇ ಪದೇ ಮುಟ್ಟಬಹುದಾದ ಮೇಲ್ಮೈಗಳು, ಕಂಪ್ಯೂಟರ್, ಲ್ಯಾಪ್ ಟಾಪ್ ಗಳು ಸೇರಿ ಇತರ ವಸ್ತುಗಳನ್ನು ಸದಾ ಸ್ಯಾನಿಟೈಸರ್ ಬಳಸಿ ಸ್ವಚ್ಛಗೊಳಿಸಲು ತಿಳಿಸಿದೆ. ಹಾಗಾಗಿ ಖಾಸಗಿ ಶಾಲೆಗಳು ಹೊಸ ಶುಲ್ಕ ವಿಧಿಸಲು ಮುಂದಾಗಿವೆ.

ಶಾಲೆಗಳ ನಿರ್ವಹಣೆಗೆ ಹೆಚ್ಚಿನ ಹಣ ಬೇಕಾಗಿದೆ. ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಬೇಕಿದೆ. ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ಖರೀದಿಸಬೇಕಿದೆ. ಹಾಗಾಗಿ ಒಟ್ಟು ಶುಲ್ಕದಲ್ಲಿ ಶೇ.5ರಷ್ಟನ್ನು ಮಾತ್ರ ಹೆಚ್ಚಿಸಲು ನಿರ್ಧಿಸಿದ್ದೇವೆ. ಪೋಷಕರು ನಮ್ಮ ಕಷ್ಟವನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇವೆ ಎಂಬುದು ಖಾಸಗಿ ಶಾಲೆಗಳ ಅಂಬೋಣ.

ಇನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇದು ತೀರಾ ವಿಚಿತ್ರಕಾರಿ ನಡೆಯಾಗಿದೆ. ಕೋವಿಡ್ ಹೆಸರಿನಲ್ಲಿ ಶುಲ್ಕವನ್ನು ಕಡಿಮೆ ಮಾಡಬೇಕೆ ಹೊರತು ಹೆಚ್ಚು ಮಾಡಬಾರದು. ಅಂತಹ ಶಾಲೆಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸಾಂಕ್ರಾಮಿಕ ಇನ್ನೆಷ್ಟು ಸವಾಲುಗಳನ್ನು ತಂದಿಡುತ್ತದೆಯೋ ತಿಳಿಯದಾಗಿದೆ.


ಇದನ್ನೂ ಓದಿ: ಸೆಪ್ಟಂಬರ್ 14 ಹಿಂದಿ ದಿವಸ ಆಚರಣೆಗೆ ಕನ್ನಡಿಗರ ತೀವ್ರ ವಿರೋಧ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....