Homeಚಳವಳಿವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಇಡೀ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಸ್ವರಾಜ್ ಇಂಡಿಯಾ ಪಕ್ಷ ಮತ್ತು ಹಲವು ರೈತರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ “ಜೈ ಕಿಸಾನ್ ಆಂದೋಲನ್” ಭಾಗವಾಗಿ ಸಾವಿರಾರು ರೈತರು ಹರಿಯಾಣದ ಸಿರ್ಸಾ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ಪ್ರಮುಖ ಪಕ್ಷವಾದ ಸ್ವರಾಜ್ ಇಂಡಿಯಾ ಪಕ್ಷ ಮತ್ತು ಅದರ ಮುಖಂಡರಾದ ಯೋಗೇಂದ್ರ ಯಾದವ್ ಅವರ ಮುಂದಾಳತ್ವದಲ್ಲಿ ಸಿರ್ಸಾದ ದಸರಾ ಮೈದಾನದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸ್ವರಾಜ್ ಅಭಿಯಾನ ಟ್ವೀಟ್ ಮಾಡಿದ್ದು, “ನೀವು ರೈತರನ್ನು ಪ್ರೀತಿಸುತ್ತೀರಾ ಅಥವಾ ನಿಮ್ಮ ಕುರ್ಚಿಯನ್ನು ಪ್ರೀತಿಸುತ್ತೀರಾ? ನೀವು ರೈತಸ್ನೇಹಿಯೋ ಅಥವಾ ಕುರ್ಚಿಯ ಬಗ್ಗೆ ದುರಾಸೆಯಿದೆಯೋ? ಈ ದೇಶದ ರೈತರು ಪ್ರಶ್ನೆಗಳನ್ನು ಕೇಳಲು ಬರುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ರಮಣ್‌ದೀಪ್ ಸಿಂಗ್ ರೈತರ ಪ್ರತಿಭಟನೆಯ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಕೋವಿಡ್-19 ಮತ್ತು ಸುಗ್ಗಿಯ ಸಮಯದಲ್ಲಿ ರೈತರು ಸಮುದ್ರದಂತೆ ಸೇರಿ ಸಿರ್ಸಾದ ದಸರಾ ಮೈದಾನದಲ್ಲಿ ರೈತ ವಿರೋಧಿ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಇಂದು ರೈತರು ಹರಿಯಾಣದ ಉಪಮುಖ್ಯಮಂತ್ರಿ ಮತ್ತು ವಿದ್ಯಚ್ಚಕ್ತಿ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ” ಎಂದು ಬರದುಕೊಂಡಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಿದ್ದರು. ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಿದ್ದ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ್ದರು. ಜೊತೆಗೆ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನಿಡಿದ್ದರು.

ಕಳೆದ ವಾರ ದೇಶಾದ್ಯಂತ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಈ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ನಡೆಸಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದವು. ಇದರ ನಡುವೆ ಕೆಂದ್ರ ಸರ್ಕಾರದ ಸಚಿವರಾದ ಹರ್ಸಿಮ್ರತ್ ಕೌರ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಕೇಂದ್ರ ಸರ್ಕಾರದ ಈ ಮಸೂದೆಗಳನ್ನು ವಿರೋಧಿಸಿದ್ದರು.

ಇದನ್ನೂ ಓದಿ: ದೇಶದ ಆರ್ಥಿಕ ಬಿಕ್ಕಟ್ಟು ನಿಜವೇ? ಹೇಗೆ?

ಕರ್ನಾಟಕದಲ್ಲಿ ಕಳೆದ ತಿಂಗಳಿನಿಂದ ವಿಧಾನ ಸಭಾ ಅಧಿವೇಶನ ಆರಂಭವಾಗಿದ್ದಾಗ, ರಾಜ್ಯದಲ್ಲಿ ಭೂ ಸುಧಾರಣಾ ಕಾನೂನುಗಳನ್ನು ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತಂದಿರುವುದನ್ನು ವಿರೋಧಿಸಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಸೇರಿ ಐಕ್ಯ ಹೊರಾಟವನ್ನು ನಡೆಸಿದ್ದವು. ಸೆ.28 ರಂದು ಕರ್ನಾಟಕ ಬಂದ್ ಮಾಡಲಾಗಿತ್ತು. ರಾಜ್ಯದಲ್ಲಿ ತಿದ್ದುಪಡಿ ತಂದಿರುವ ಭೂಸುಧಾರಣಾ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ತೆಗೆದುಹಾಕುತ್ತದೆ. ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ವ್ಯಾಪಾರಗಳು ದೇಶದ ಮೂರು ಸ್ತಂಭಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ” ಎಂದು ಪಂಜಾಬ್ ರೈತರು ನಡೆಸುತ್ತಿರುವ 3 ದಿನಗಳ ಟ್ರ್ಯಾಕ್ಟರ್‌ ರ್‍ಯಾಲಿಯನ್ನು ಉದ್ಘಾಟಿಸಿದ ರಾಹುಲ್ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...