Homeಚಳವಳಿವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಇಡೀ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಸ್ವರಾಜ್ ಇಂಡಿಯಾ ಪಕ್ಷ ಮತ್ತು ಹಲವು ರೈತರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ “ಜೈ ಕಿಸಾನ್ ಆಂದೋಲನ್” ಭಾಗವಾಗಿ ಸಾವಿರಾರು ರೈತರು ಹರಿಯಾಣದ ಸಿರ್ಸಾ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ಪ್ರಮುಖ ಪಕ್ಷವಾದ ಸ್ವರಾಜ್ ಇಂಡಿಯಾ ಪಕ್ಷ ಮತ್ತು ಅದರ ಮುಖಂಡರಾದ ಯೋಗೇಂದ್ರ ಯಾದವ್ ಅವರ ಮುಂದಾಳತ್ವದಲ್ಲಿ ಸಿರ್ಸಾದ ದಸರಾ ಮೈದಾನದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸ್ವರಾಜ್ ಅಭಿಯಾನ ಟ್ವೀಟ್ ಮಾಡಿದ್ದು, “ನೀವು ರೈತರನ್ನು ಪ್ರೀತಿಸುತ್ತೀರಾ ಅಥವಾ ನಿಮ್ಮ ಕುರ್ಚಿಯನ್ನು ಪ್ರೀತಿಸುತ್ತೀರಾ? ನೀವು ರೈತಸ್ನೇಹಿಯೋ ಅಥವಾ ಕುರ್ಚಿಯ ಬಗ್ಗೆ ದುರಾಸೆಯಿದೆಯೋ? ಈ ದೇಶದ ರೈತರು ಪ್ರಶ್ನೆಗಳನ್ನು ಕೇಳಲು ಬರುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ರಮಣ್‌ದೀಪ್ ಸಿಂಗ್ ರೈತರ ಪ್ರತಿಭಟನೆಯ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಕೋವಿಡ್-19 ಮತ್ತು ಸುಗ್ಗಿಯ ಸಮಯದಲ್ಲಿ ರೈತರು ಸಮುದ್ರದಂತೆ ಸೇರಿ ಸಿರ್ಸಾದ ದಸರಾ ಮೈದಾನದಲ್ಲಿ ರೈತ ವಿರೋಧಿ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಇಂದು ರೈತರು ಹರಿಯಾಣದ ಉಪಮುಖ್ಯಮಂತ್ರಿ ಮತ್ತು ವಿದ್ಯಚ್ಚಕ್ತಿ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ” ಎಂದು ಬರದುಕೊಂಡಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಿದ್ದರು. ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಿದ್ದ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ್ದರು. ಜೊತೆಗೆ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನಿಡಿದ್ದರು.

ಕಳೆದ ವಾರ ದೇಶಾದ್ಯಂತ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಈ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ನಡೆಸಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದವು. ಇದರ ನಡುವೆ ಕೆಂದ್ರ ಸರ್ಕಾರದ ಸಚಿವರಾದ ಹರ್ಸಿಮ್ರತ್ ಕೌರ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಕೇಂದ್ರ ಸರ್ಕಾರದ ಈ ಮಸೂದೆಗಳನ್ನು ವಿರೋಧಿಸಿದ್ದರು.

ಇದನ್ನೂ ಓದಿ: ದೇಶದ ಆರ್ಥಿಕ ಬಿಕ್ಕಟ್ಟು ನಿಜವೇ? ಹೇಗೆ?

ಕರ್ನಾಟಕದಲ್ಲಿ ಕಳೆದ ತಿಂಗಳಿನಿಂದ ವಿಧಾನ ಸಭಾ ಅಧಿವೇಶನ ಆರಂಭವಾಗಿದ್ದಾಗ, ರಾಜ್ಯದಲ್ಲಿ ಭೂ ಸುಧಾರಣಾ ಕಾನೂನುಗಳನ್ನು ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತಂದಿರುವುದನ್ನು ವಿರೋಧಿಸಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಸೇರಿ ಐಕ್ಯ ಹೊರಾಟವನ್ನು ನಡೆಸಿದ್ದವು. ಸೆ.28 ರಂದು ಕರ್ನಾಟಕ ಬಂದ್ ಮಾಡಲಾಗಿತ್ತು. ರಾಜ್ಯದಲ್ಲಿ ತಿದ್ದುಪಡಿ ತಂದಿರುವ ಭೂಸುಧಾರಣಾ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ತೆಗೆದುಹಾಕುತ್ತದೆ. ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ವ್ಯಾಪಾರಗಳು ದೇಶದ ಮೂರು ಸ್ತಂಭಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ” ಎಂದು ಪಂಜಾಬ್ ರೈತರು ನಡೆಸುತ್ತಿರುವ 3 ದಿನಗಳ ಟ್ರ್ಯಾಕ್ಟರ್‌ ರ್‍ಯಾಲಿಯನ್ನು ಉದ್ಘಾಟಿಸಿದ ರಾಹುಲ್ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...