Homeಚಳವಳಿವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಇಡೀ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಸ್ವರಾಜ್ ಇಂಡಿಯಾ ಪಕ್ಷ ಮತ್ತು ಹಲವು ರೈತರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ “ಜೈ ಕಿಸಾನ್ ಆಂದೋಲನ್” ಭಾಗವಾಗಿ ಸಾವಿರಾರು ರೈತರು ಹರಿಯಾಣದ ಸಿರ್ಸಾ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ಪ್ರಮುಖ ಪಕ್ಷವಾದ ಸ್ವರಾಜ್ ಇಂಡಿಯಾ ಪಕ್ಷ ಮತ್ತು ಅದರ ಮುಖಂಡರಾದ ಯೋಗೇಂದ್ರ ಯಾದವ್ ಅವರ ಮುಂದಾಳತ್ವದಲ್ಲಿ ಸಿರ್ಸಾದ ದಸರಾ ಮೈದಾನದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸ್ವರಾಜ್ ಅಭಿಯಾನ ಟ್ವೀಟ್ ಮಾಡಿದ್ದು, “ನೀವು ರೈತರನ್ನು ಪ್ರೀತಿಸುತ್ತೀರಾ ಅಥವಾ ನಿಮ್ಮ ಕುರ್ಚಿಯನ್ನು ಪ್ರೀತಿಸುತ್ತೀರಾ? ನೀವು ರೈತಸ್ನೇಹಿಯೋ ಅಥವಾ ಕುರ್ಚಿಯ ಬಗ್ಗೆ ದುರಾಸೆಯಿದೆಯೋ? ಈ ದೇಶದ ರೈತರು ಪ್ರಶ್ನೆಗಳನ್ನು ಕೇಳಲು ಬರುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ರಮಣ್‌ದೀಪ್ ಸಿಂಗ್ ರೈತರ ಪ್ರತಿಭಟನೆಯ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಕೋವಿಡ್-19 ಮತ್ತು ಸುಗ್ಗಿಯ ಸಮಯದಲ್ಲಿ ರೈತರು ಸಮುದ್ರದಂತೆ ಸೇರಿ ಸಿರ್ಸಾದ ದಸರಾ ಮೈದಾನದಲ್ಲಿ ರೈತ ವಿರೋಧಿ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಇಂದು ರೈತರು ಹರಿಯಾಣದ ಉಪಮುಖ್ಯಮಂತ್ರಿ ಮತ್ತು ವಿದ್ಯಚ್ಚಕ್ತಿ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ” ಎಂದು ಬರದುಕೊಂಡಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಿದ್ದರು. ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಿದ್ದ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ್ದರು. ಜೊತೆಗೆ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನಿಡಿದ್ದರು.

ಕಳೆದ ವಾರ ದೇಶಾದ್ಯಂತ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಈ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ನಡೆಸಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದವು. ಇದರ ನಡುವೆ ಕೆಂದ್ರ ಸರ್ಕಾರದ ಸಚಿವರಾದ ಹರ್ಸಿಮ್ರತ್ ಕೌರ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಕೇಂದ್ರ ಸರ್ಕಾರದ ಈ ಮಸೂದೆಗಳನ್ನು ವಿರೋಧಿಸಿದ್ದರು.

ಇದನ್ನೂ ಓದಿ: ದೇಶದ ಆರ್ಥಿಕ ಬಿಕ್ಕಟ್ಟು ನಿಜವೇ? ಹೇಗೆ?

ಕರ್ನಾಟಕದಲ್ಲಿ ಕಳೆದ ತಿಂಗಳಿನಿಂದ ವಿಧಾನ ಸಭಾ ಅಧಿವೇಶನ ಆರಂಭವಾಗಿದ್ದಾಗ, ರಾಜ್ಯದಲ್ಲಿ ಭೂ ಸುಧಾರಣಾ ಕಾನೂನುಗಳನ್ನು ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತಂದಿರುವುದನ್ನು ವಿರೋಧಿಸಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಸೇರಿ ಐಕ್ಯ ಹೊರಾಟವನ್ನು ನಡೆಸಿದ್ದವು. ಸೆ.28 ರಂದು ಕರ್ನಾಟಕ ಬಂದ್ ಮಾಡಲಾಗಿತ್ತು. ರಾಜ್ಯದಲ್ಲಿ ತಿದ್ದುಪಡಿ ತಂದಿರುವ ಭೂಸುಧಾರಣಾ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ತೆಗೆದುಹಾಕುತ್ತದೆ. ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ವ್ಯಾಪಾರಗಳು ದೇಶದ ಮೂರು ಸ್ತಂಭಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ” ಎಂದು ಪಂಜಾಬ್ ರೈತರು ನಡೆಸುತ್ತಿರುವ 3 ದಿನಗಳ ಟ್ರ್ಯಾಕ್ಟರ್‌ ರ್‍ಯಾಲಿಯನ್ನು ಉದ್ಘಾಟಿಸಿದ ರಾಹುಲ್ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...