Homeಚಳವಳಿವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಇಡೀ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಸ್ವರಾಜ್ ಇಂಡಿಯಾ ಪಕ್ಷ ಮತ್ತು ಹಲವು ರೈತರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ “ಜೈ ಕಿಸಾನ್ ಆಂದೋಲನ್” ಭಾಗವಾಗಿ ಸಾವಿರಾರು ರೈತರು ಹರಿಯಾಣದ ಸಿರ್ಸಾ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದಿನ ಪ್ರತಿಭಟನೆಯಲ್ಲಿ ರೈತರು ಹರಿಯಾಣದ ಉಪಮುಖ್ಯಮಂತ್ರಿ ಡಿ.ಎಂ.ದುಶ್ಯಂತ್ ಚೌಟಾಲ ಮತ್ತು ವಿದ್ಯುಚ್ಚಕ್ತಿ ಸಚಿವರಾದ ರಂಜಿತ್ ಚೌಟಾಲ ಅವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ

ಪ್ರಮುಖ ಪಕ್ಷವಾದ ಸ್ವರಾಜ್ ಇಂಡಿಯಾ ಪಕ್ಷ ಮತ್ತು ಅದರ ಮುಖಂಡರಾದ ಯೋಗೇಂದ್ರ ಯಾದವ್ ಅವರ ಮುಂದಾಳತ್ವದಲ್ಲಿ ಸಿರ್ಸಾದ ದಸರಾ ಮೈದಾನದಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸ್ವರಾಜ್ ಅಭಿಯಾನ ಟ್ವೀಟ್ ಮಾಡಿದ್ದು, “ನೀವು ರೈತರನ್ನು ಪ್ರೀತಿಸುತ್ತೀರಾ ಅಥವಾ ನಿಮ್ಮ ಕುರ್ಚಿಯನ್ನು ಪ್ರೀತಿಸುತ್ತೀರಾ? ನೀವು ರೈತಸ್ನೇಹಿಯೋ ಅಥವಾ ಕುರ್ಚಿಯ ಬಗ್ಗೆ ದುರಾಸೆಯಿದೆಯೋ? ಈ ದೇಶದ ರೈತರು ಪ್ರಶ್ನೆಗಳನ್ನು ಕೇಳಲು ಬರುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ರಮಣ್‌ದೀಪ್ ಸಿಂಗ್ ರೈತರ ಪ್ರತಿಭಟನೆಯ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಕೋವಿಡ್-19 ಮತ್ತು ಸುಗ್ಗಿಯ ಸಮಯದಲ್ಲಿ ರೈತರು ಸಮುದ್ರದಂತೆ ಸೇರಿ ಸಿರ್ಸಾದ ದಸರಾ ಮೈದಾನದಲ್ಲಿ ರೈತ ವಿರೋಧಿ ಮಸೂದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಇಂದು ರೈತರು ಹರಿಯಾಣದ ಉಪಮುಖ್ಯಮಂತ್ರಿ ಮತ್ತು ವಿದ್ಯಚ್ಚಕ್ತಿ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲಿದ್ದಾರೆ” ಎಂದು ಬರದುಕೊಂಡಿದ್ದಾರೆ.

ಕೃಷಿ ಮಸೂದೆಗಳ ವಿರುದ್ಧದ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಜಾಬ್‌ನಲ್ಲಿರುವ ಬಿಜೆಪಿ ನಾಯಕರ ಮನೆ, ಕಛೇರಿ, ಮಾಲ್‌ಗಳಿಗೆ ಅಕ್ಟೋಬರ್ 2 ರಂದು ರೈತರು ಮುತ್ತಿಗೆ ಹಾಕಿದ್ದರು. ಈ ಹೋರಾಟಕ್ಕೆ ರಾಹುಲ್ ಗಾಂಧಿ ಬೆಂಬಲ ನೀಡಿದ್ದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪ್ರಾರಂಭವಾಗಿದ್ದ ಅನಿರ್ದಿಷ್ಟ ರೈಲ್ ರೊಕೊದಲ್ಲಿ ಪಂಜಾಬಿನ ಸುಮಾರು 12,000 ಕ್ಕೂ ಹೆಚ್ಚು ರೈತರು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟಿಸಿದ್ದರು. ಜೊತೆಗೆ ಅಕ್ಟೋಬರ್ 4 ರಿಂದ 6 ರವರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನಿಡಿದ್ದರು.

ಕಳೆದ ವಾರ ದೇಶಾದ್ಯಂತ ರೈತರು, ರೈತ ಸಂಘಟನೆಗಳು, ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ಈ ಕೃಷಿ ಮಸೂದೆಗಳ ವಿರುದ್ಧ ಭಾರತ್ ಬಂದ್ ನಡೆಸಿ ಮಸೂದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದವು. ಇದರ ನಡುವೆ ಕೆಂದ್ರ ಸರ್ಕಾರದ ಸಚಿವರಾದ ಹರ್ಸಿಮ್ರತ್ ಕೌರ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಕೇಂದ್ರ ಸರ್ಕಾರದ ಈ ಮಸೂದೆಗಳನ್ನು ವಿರೋಧಿಸಿದ್ದರು.

ಇದನ್ನೂ ಓದಿ: ದೇಶದ ಆರ್ಥಿಕ ಬಿಕ್ಕಟ್ಟು ನಿಜವೇ? ಹೇಗೆ?

ಕರ್ನಾಟಕದಲ್ಲಿ ಕಳೆದ ತಿಂಗಳಿನಿಂದ ವಿಧಾನ ಸಭಾ ಅಧಿವೇಶನ ಆರಂಭವಾಗಿದ್ದಾಗ, ರಾಜ್ಯದಲ್ಲಿ ಭೂ ಸುಧಾರಣಾ ಕಾನೂನುಗಳನ್ನು ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತಂದಿರುವುದನ್ನು ವಿರೋಧಿಸಿ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಸೇರಿ ಐಕ್ಯ ಹೊರಾಟವನ್ನು ನಡೆಸಿದ್ದವು. ಸೆ.28 ರಂದು ಕರ್ನಾಟಕ ಬಂದ್ ಮಾಡಲಾಗಿತ್ತು. ರಾಜ್ಯದಲ್ಲಿ ತಿದ್ದುಪಡಿ ತಂದಿರುವ ಭೂಸುಧಾರಣಾ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ತೆಗೆದುಹಾಕುತ್ತದೆ. ಕನಿಷ್ಠ ಬೆಂಬಲ ಬೆಲೆ, ಆಹಾರ ಸಂಗ್ರಹಣೆ ಮತ್ತು ಸಗಟು ವ್ಯಾಪಾರಗಳು ದೇಶದ ಮೂರು ಸ್ತಂಭಗಳಿದ್ದಂತೆ. ಪ್ರಧಾನಿ ನರೇಂದ್ರ ಮೋದಿ ಈ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ” ಎಂದು ಪಂಜಾಬ್ ರೈತರು ನಡೆಸುತ್ತಿರುವ 3 ದಿನಗಳ ಟ್ರ್ಯಾಕ್ಟರ್‌ ರ್‍ಯಾಲಿಯನ್ನು ಉದ್ಘಾಟಿಸಿದ ರಾಹುಲ್ ಗಾಂಧಿ ಹೇಳಿದ್ದರು.


ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...